ಜಾತಿ ಗಣತಿ ವರದಿ ಜಾರಿಯ ಗ್ಯಾರಂಟಿ ನೀಡಿದ ಸಿಎಂ..! ಭಾಷಣದುದ್ದಕ್ಕೂ RSS-BJP ವಿರುದ್ಧ ಗುಡುಗಿದ ಸಿದ್ದು

ಜಾತಿ ಗಣತಿ ವರದಿ ಜಾರಿಯ ಗ್ಯಾರಂಟಿ ನೀಡಿದ ಸಿಎಂ..! ಭಾಷಣದುದ್ದಕ್ಕೂ RSS-BJP ವಿರುದ್ಧ ಗುಡುಗಿದ ಸಿದ್ದು

Published : Jan 29, 2024, 02:54 PM IST

ಸ್ವಪಕ್ಷೀಯ ವಿರೋಧಿಗಳಿಗೂ ಸಿದ್ದರಾಮಯ್ಯ ಸಂದೇಶ
ಕಾಂತರಾಜ್ ವರದಿ ಜಾರಿಯ ಗ್ಯಾರಂಟಿ ನೀಡಿಸಿ ಸಿಎಂ ಸಿದ್ದು 
ಶೋಷಿತರನ್ನು ಸ್ವಾರ್ಥಕ್ಕಾಗಿ ಬಳಸಿಕೊಳ್ಳುತ್ತಿದೆಯಂತೆ BJP 

ಚಿತ್ರದುರ್ಗದಲ್ಲಿ ಶೋಷಿತರ ಜಾಗೃತಿ ಸಮಾವೇಶ (Shoshitara Jagruthi Samavesha)ನಡೆಯಿತು. ಈ ಸಮಾವೇಶದ ಕೇಂದ್ರಬಿಂದುವಾಗಿದ್ದರು ಸಿಎಂ ಸಿದ್ದರಾಮಯ್ಯನವರು. ಈ ವೇದಿಕೆಯಲ್ಲಿ ಸಿಎಂ ಸಿದ್ದರಾಮಯ್ಯವರು(Siddaramaiah) ಮಾಡಿದ ಭಾಷಣ ತುಂಬಾನೇ ಹೈಲೈಟ್ ಆಗಿದೆ. ಹಿಂದುಳಿದ ವರ್ಗಗಳ ಒಕ್ಕೂಟದಿಂದ ವತಿಯಿಂದ, ಚಿತ್ರದುರ್ಗದಲ್ಲಿ(Chitradurga) ಶೋಷಿತರ ಜಾಗೃತಿ ಸಮಾವೇಶ ನಡೆಯಿತು. ಈ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಹಿಂದುಳಿದ ಸಮುದಾಯದವರು ಭಾಗಿಯಾಗಿದ್ದರು. ಈ ಕಾರ್ಯಕ್ರಮಕ್ಕೆ ಸಿಎಂ ಮತ್ತು ಡಿಸಿಎಂ ಸೇರಿದಂತೆ, ಕಾಂಗ್ರೆಸ್(Congress) ಪಕ್ಷದ ಇನ್ನು ಅನೇಕ ಹಿಂದುಳಿದ ಸಮುದಾಯಕ ನಾಯಕರು, ಸಚಿವ ಮತ್ತು ಶಾಸಕರುಗಳು ಭಾಗಿಯಾಗಿದ್ದರು. ಈ ಕಾರ್ಯಕ್ರಮದ ಪ್ರಮುಖ ಉದ್ದೇಶ, ಕಾಂತರಾಜ್ ವರದಿ ಕುರಿತಾಗಿತ್ತು. ಕೆಲ ದಿನಗಳಿಂದ ರಾಜ್ಯದಲ್ಲಿ ಕಾಂತರಾಜ್ ವರದಿ(Kanthraj report) ಕುರಿತು ಚರ್ಚೆ ನಡೆದಿತ್ತು. ಹಿಂದುಳಿದ ಸಮುದಾಯದ ಜಾತಿ ಗಣತಿ ಕುರಿತಾಗಿರುವ ಈ ವರದಿ, ಅವೈಜ್ಞಾನಿಕ ಎಂದು ಕೆಲವರು ಒತ್ತಿ ಹೇಳುತ್ತಿದ್ದರು. ಹೀಗೆ ಕೇಳಿದವರಲ್ಲಿ ಕಾಂಗ್ರೆಸ್ನವರೂ ಇದ್ದರು. ಹಾಗೆನೇ ಇನ್ನು ಕೆಲವರು ಕಡೆಗಳಲ್ಲಿ ಈ ವರದಿಯನ್ನು ಜಾರಿಗೊಳಿಸಬೇಕೆಂಬ ಕೂಗು ಕೇಳಿ ಬರುತ್ತಿತ್ತು. ಕಾಂತರಾಜ್ ವರದಿ ಜಾರಿಗೊಳಿಸುವಂತೆ, ಸರ್ಕಾರವನ್ನು ಒತ್ತಾಯಿಸಲೆಂದೇ ಇಂದು ಈ ಸಮಾವೇಶ ನಡೆದಿತ್ತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ, ಕೆಎಂ ರಾಚಂದ್ರಪ್ಪವನವರು. ತಮ್ಮ ಭಾಷಣದಲ್ಲಿ ಇದನ್ನೇ ಹೇಳಿದರು.  

ಇದನ್ನೂ ವೀಕ್ಷಿಸಿ:  Siddaramaiah: ಚುನಾವಣೆ ಬರುತ್ತಿರುವ ಹಿನ್ನೆಲೆ ಬಿಜೆಪಿಯವರು ಹೀಗೆಲ್ಲಾ ಮಾಡುತ್ತಿದ್ದಾರೆ: ಸಿದ್ದರಾಮಯ್ಯ

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more