ಸಿಎಂ ಸಿದ್ದರಾಮಯ್ಯ ಮಾತಿನ ಮರ್ಮವೇನು..? ಹಿಜಾಬ್ ನಿಷೇಧ ವಾಪಸ್ ಬಗ್ಗೆ ಕೈಪಾಳಯದಲ್ಲೇ ಕನ್ಫ್ಯೂಷನ್!?

ಸಿಎಂ ಸಿದ್ದರಾಮಯ್ಯ ಮಾತಿನ ಮರ್ಮವೇನು..? ಹಿಜಾಬ್ ನಿಷೇಧ ವಾಪಸ್ ಬಗ್ಗೆ ಕೈಪಾಳಯದಲ್ಲೇ ಕನ್ಫ್ಯೂಷನ್!?

Published : Dec 24, 2023, 01:10 PM IST

ಸಿಎಂ ಹೇಳಿಕೆ ಹಿಂದೆ ಅಡಗಿದೆಯಾ ನಿಗೂಢ ರಹಸ್ಯ..?!
ಸಿಎಮ್ ಸಿದ್ದರಾಮಯ್ಯ ಆಡಿದ 1 ಮಾತಲ್ಲಿ 3 ಗುಟ್ಟು!
ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ್ದೇಕೆ ಅದೊಂದು ಹೇಳಿಕೆ?

ಕಳೆದ ಸಲ, ಬಿಜೆಪಿ(BJP) ಸರ್ಕಾರ ಆಡಳಿತದಲ್ಲಿದ್ದಾಗ, ರಾಜ್ಯದಲ್ಲೊಂದು ದೊಡ್ಡ ಧರ್ಮಸಂಘರ್ಷವೇ ಘಟಿಸಿತ್ತು. ಅದೇ, ಹಿಜಾಬ್ ವಿವಾದ. ಉಡುಪಿಯ ಕೆಲ ವಿದ್ಯಾರ್ಥಿನಿಯರಿಂದ ಆರಂಭವಾದ ವಿವಾದ, ನೋಡನೋಡುತ್ತಲೇ ನ್ಯಾಷನಲ್ ಇಶ್ಯು ಆಗೋಗಿತ್ತು. ಈಗ  ವಿವಾದ, ಸುಪ್ರೀಂ ಅಂಗಳದಲ್ಲಿ ತೀರ್ಮಾನವಾಗ್ತಾ ಇದೆ. ಆದ್ರೆ, ಇದರ ಮಧ್ಯೆ ಸಿದ್ದರಾಮಯ್ಯನೋರು(Siddaramaiah) ಕೊಟ್ಟ ಹೇಳಿಕೆಯಿಂದ ಆ ವಿವಾದ ಮತ್ತೆ ದೊಡ್ಡ ಚರ್ಚೆಗೆ ಕಾರಣವಾಗಿದೆ. ಕಳೆದ ಶುಕ್ರವಾಗ, ನಂಜನಗೂಡಿನ ಕವಲಂದೆದಲ್ಲಿ  ಪೊಲೀಸ್ ಠಾಣೆ ಉದ್ಘಾಟನೆ ಕಾರ್ಯಕ್ರಮ ನಡೆದಿತ್ತು. ಅದರಲ್ಲಿ ಸಿಎಂ ಸಿದ್ದರಾಮಯ್ಯ ಕೂಡ ಭಾಗವಹಿಸಿದ್ರು. ಹೀಗಿದ್ದಾಗಲೇ, ಸಿಎಂ ಮಾತನಾಡುವ ವೇಳೆ ಸಾರ್ವಜನಿಕರು ಹಿಜಾಬ್ ಕುರಿತಂತೆ ಪ್ರಶ್ನೆ ಮಾಡಿದ್ರು. ಸಾರ್ವಜನಿಕರಿಂದ ಬಂದ ಪ್ರಶ್ನೆಗೆ ಉತ್ತರಿಸಿದ ಸಿಎಂ, ನೋ ಹಿಜಾಬ್ ಬ್ಯಾನ್(Hijab ban), ಎಲ್ಲರು ಹಿಜಾಬ್ ಹಾಕಿಕೊಂಡು ಹೋಗಬಹುದು. ಆದೇಶ ಹಿಂಪಡೆಯಲು ಹೇಳಿದ್ದೇನೆ ಅಂತ ಹೇಳಿದ್ರು. ಸಿದ್ದರಾಮಯ್ಯನೋರು ಹೇಳಿದ್ದಿಷ್ಟು. ವಸ್ತ್ರದ ವಿಚಾರದಲ್ಲಿ, ಆಹಾರದ ವಿಚಾರದಲ್ಲಿ ಯಾವ್ದೂ ತಪ್ಪಲ್ಲ.. ಹಾಗಾಗಿ, ಹಿಜಾಬ್ ಪ್ರಕರಣವನ್ನ ಹಿಂಪಡೆಯೋಕೆ ನಮ್ಮ ಸರ್ಕಾರ ಸಿದ್ಧವಾಗಿದೆ ಅಂತ ಹೇಳಿದ್ರು. ಸಿದ್ದರಾಮಯ್ಯನೋರೇನೋ ವೇದಿಕೆ ಮೇಲೆ , ಬಿಜೆಪಿ ಸರ್ಕಾರದಲ್ಲಾಗಿದ್ದ ಹಿಜಾಬ್ ನಿಷೇಧವನ್ನ ಹಿಂಪಡೀತಿವಿ ಅಂತ ಹೇಳಿದ್ರು. ಆದ್ರೆ ಬಿಜೆಪಿ ಸರ್ಕಾರವಿದ್ದಾಗ, ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ ಅವ್ರು, ಅಸಲಿಗೆ ಹಿಜಾಬ್ ನಿಷೇಧವೇ ಆಗಿರ್ಲಿಲ್ಲ. ಸಿದ್ದರಾಮಯ್ಯನೋರು ಅರ್ಥ ಮಾಡ್ಕೊಂಡಿರೋದೇ ತಪ್ಪು ಅನ್ನೋ ಹಾಗೆ ಮಾತಾಡಿದ್ರು.

ಇದನ್ನೂ ವೀಕ್ಷಿಸಿ:  ಪುತ್ತಿಗೆ ಮಠದ ಸಾರಥ್ಯದಲ್ಲಿ ಕೋಟಿಗೀತಾ ಲೇಖನಯಜ್ಞ: ಬಸವನಗುಡಿ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಗೀತೋತ್ಸವ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more