ಸಿಎಂ ಸಿದ್ದರಾಮಯ್ಯ ಮಾತಿನ ಮರ್ಮವೇನು..? ಹಿಜಾಬ್ ನಿಷೇಧ ವಾಪಸ್ ಬಗ್ಗೆ ಕೈಪಾಳಯದಲ್ಲೇ ಕನ್ಫ್ಯೂಷನ್!?

ಸಿಎಂ ಸಿದ್ದರಾಮಯ್ಯ ಮಾತಿನ ಮರ್ಮವೇನು..? ಹಿಜಾಬ್ ನಿಷೇಧ ವಾಪಸ್ ಬಗ್ಗೆ ಕೈಪಾಳಯದಲ್ಲೇ ಕನ್ಫ್ಯೂಷನ್!?

Published : Dec 24, 2023, 01:10 PM IST

ಸಿಎಂ ಹೇಳಿಕೆ ಹಿಂದೆ ಅಡಗಿದೆಯಾ ನಿಗೂಢ ರಹಸ್ಯ..?!
ಸಿಎಮ್ ಸಿದ್ದರಾಮಯ್ಯ ಆಡಿದ 1 ಮಾತಲ್ಲಿ 3 ಗುಟ್ಟು!
ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ್ದೇಕೆ ಅದೊಂದು ಹೇಳಿಕೆ?

ಕಳೆದ ಸಲ, ಬಿಜೆಪಿ(BJP) ಸರ್ಕಾರ ಆಡಳಿತದಲ್ಲಿದ್ದಾಗ, ರಾಜ್ಯದಲ್ಲೊಂದು ದೊಡ್ಡ ಧರ್ಮಸಂಘರ್ಷವೇ ಘಟಿಸಿತ್ತು. ಅದೇ, ಹಿಜಾಬ್ ವಿವಾದ. ಉಡುಪಿಯ ಕೆಲ ವಿದ್ಯಾರ್ಥಿನಿಯರಿಂದ ಆರಂಭವಾದ ವಿವಾದ, ನೋಡನೋಡುತ್ತಲೇ ನ್ಯಾಷನಲ್ ಇಶ್ಯು ಆಗೋಗಿತ್ತು. ಈಗ  ವಿವಾದ, ಸುಪ್ರೀಂ ಅಂಗಳದಲ್ಲಿ ತೀರ್ಮಾನವಾಗ್ತಾ ಇದೆ. ಆದ್ರೆ, ಇದರ ಮಧ್ಯೆ ಸಿದ್ದರಾಮಯ್ಯನೋರು(Siddaramaiah) ಕೊಟ್ಟ ಹೇಳಿಕೆಯಿಂದ ಆ ವಿವಾದ ಮತ್ತೆ ದೊಡ್ಡ ಚರ್ಚೆಗೆ ಕಾರಣವಾಗಿದೆ. ಕಳೆದ ಶುಕ್ರವಾಗ, ನಂಜನಗೂಡಿನ ಕವಲಂದೆದಲ್ಲಿ  ಪೊಲೀಸ್ ಠಾಣೆ ಉದ್ಘಾಟನೆ ಕಾರ್ಯಕ್ರಮ ನಡೆದಿತ್ತು. ಅದರಲ್ಲಿ ಸಿಎಂ ಸಿದ್ದರಾಮಯ್ಯ ಕೂಡ ಭಾಗವಹಿಸಿದ್ರು. ಹೀಗಿದ್ದಾಗಲೇ, ಸಿಎಂ ಮಾತನಾಡುವ ವೇಳೆ ಸಾರ್ವಜನಿಕರು ಹಿಜಾಬ್ ಕುರಿತಂತೆ ಪ್ರಶ್ನೆ ಮಾಡಿದ್ರು. ಸಾರ್ವಜನಿಕರಿಂದ ಬಂದ ಪ್ರಶ್ನೆಗೆ ಉತ್ತರಿಸಿದ ಸಿಎಂ, ನೋ ಹಿಜಾಬ್ ಬ್ಯಾನ್(Hijab ban), ಎಲ್ಲರು ಹಿಜಾಬ್ ಹಾಕಿಕೊಂಡು ಹೋಗಬಹುದು. ಆದೇಶ ಹಿಂಪಡೆಯಲು ಹೇಳಿದ್ದೇನೆ ಅಂತ ಹೇಳಿದ್ರು. ಸಿದ್ದರಾಮಯ್ಯನೋರು ಹೇಳಿದ್ದಿಷ್ಟು. ವಸ್ತ್ರದ ವಿಚಾರದಲ್ಲಿ, ಆಹಾರದ ವಿಚಾರದಲ್ಲಿ ಯಾವ್ದೂ ತಪ್ಪಲ್ಲ.. ಹಾಗಾಗಿ, ಹಿಜಾಬ್ ಪ್ರಕರಣವನ್ನ ಹಿಂಪಡೆಯೋಕೆ ನಮ್ಮ ಸರ್ಕಾರ ಸಿದ್ಧವಾಗಿದೆ ಅಂತ ಹೇಳಿದ್ರು. ಸಿದ್ದರಾಮಯ್ಯನೋರೇನೋ ವೇದಿಕೆ ಮೇಲೆ , ಬಿಜೆಪಿ ಸರ್ಕಾರದಲ್ಲಾಗಿದ್ದ ಹಿಜಾಬ್ ನಿಷೇಧವನ್ನ ಹಿಂಪಡೀತಿವಿ ಅಂತ ಹೇಳಿದ್ರು. ಆದ್ರೆ ಬಿಜೆಪಿ ಸರ್ಕಾರವಿದ್ದಾಗ, ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ ಅವ್ರು, ಅಸಲಿಗೆ ಹಿಜಾಬ್ ನಿಷೇಧವೇ ಆಗಿರ್ಲಿಲ್ಲ. ಸಿದ್ದರಾಮಯ್ಯನೋರು ಅರ್ಥ ಮಾಡ್ಕೊಂಡಿರೋದೇ ತಪ್ಪು ಅನ್ನೋ ಹಾಗೆ ಮಾತಾಡಿದ್ರು.

ಇದನ್ನೂ ವೀಕ್ಷಿಸಿ:  ಪುತ್ತಿಗೆ ಮಠದ ಸಾರಥ್ಯದಲ್ಲಿ ಕೋಟಿಗೀತಾ ಲೇಖನಯಜ್ಞ: ಬಸವನಗುಡಿ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಗೀತೋತ್ಸವ

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more