ಆಕಾರ ಬದಲಿಸಿತಾ ಜ್ಞಾನಯೋಗಿ ಸಿದ್ದೇಶ್ವರ ಶ್ರೀಗಳ ಮರಳಿನ ಮೂರ್ತಿ..!

ಆಕಾರ ಬದಲಿಸಿತಾ ಜ್ಞಾನಯೋಗಿ ಸಿದ್ದೇಶ್ವರ ಶ್ರೀಗಳ ಮರಳಿನ ಮೂರ್ತಿ..!

Published : Sep 23, 2023, 11:32 AM IST

ಮರಳಿನಲ್ಲಿ ನಿರ್ಮಾಣವಾದ ಮೂರ್ತಿ ಆಕಾರ ಬದಲಿಸೋದಕ್ಕೆ ಸಾಧ್ಯವಾ? ಸಾಧ್ಯವೇ ಇಲ್ಲ. ಆದ್ರೆ ಗುಮ್ಮಟನಗರಿ ವಿಜಯಪುರದಲ್ಲಿ ಗಣೇಶ ಮಂಡಳಿಯೊಂದು ನಿರ್ಮಿಸಿದ ಜ್ಞಾನಯೋಗಿ ಸಿದ್ದೇಶ್ವರ ಶ್ರೀಗಳ ಮರಳಿನ ಮೂರ್ತಿ ಆಕಾರ ಬದಲಿಸಿ ಅವರ ಗುರುಗಳಾದ ವೇದಾಂತ ಕೇಸರಿ ಮಲ್ಲಿಕಾರ್ಜುನ ಶ್ರೀ ಆಕಾರ ಪಡೆದಿದೆ ಎನ್ನುವ ಮಾತುಗಳು ಕೇಳಿ ಬರ್ತಿವೆ.
 

ಮರಳಿನಲ್ಲಿ ಅತ್ಯದ್ಭುತವಾಗಿ ನಿರ್ಮಾಣಗೊಂಡಿರುವ ಜ್ಞಾನಯೋಗಿ, ನಡೆದಾಡುವ ದೇವರು ಎಂದು ಕರೆಯಿಸಿಕೊಂಡ ಸಿದ್ದೇಶ್ವರ ಶ್ರೀಗಳ(Siddeshwar Sri) ಮೂರ್ತಿ. ಇದನ್ನು ನೋಡಲು ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಬರುತ್ತಿದ್ದಾರೆ. ಜ್ಞಾನ ಯೋಗಿ ಸಿದ್ದೇಶ್ವರ ಶ್ರೀಗಳು ನಮ್ಮನ್ನ ಅಗಲಿ ಸರಿಸುಮಾರು  9 ತಿಂಗಳುಗಳೇ ಕಳೆದು ಹೋಗಿವೆ. ಈಗಲು ಸಿದ್ದೇಶ್ವರ ಶ್ರೀಗಳ ನೆನಪು ಎಲ್ಲರ ಮನದಲ್ಲಿ ಹಚ್ಚಹಸಿರಾಗಿದೆ. ಈ ನಡುವೆ ವಿಜಯಪುರ (vijayapura)ನಗರದ ಶಾಪೇಟೆಯ ಗಣೇಶ ಮಂಡಳಿಯೊಂದು ಸಿದ್ದೇಶ್ವರ ಶ್ರೀಗಳನ್ನ ಮರಳಿನಲ್ಲಿ ಅರಳಿಸಿದೆ. ಆದ್ರೆ ಮೂರ್ತಿ ನಿರ್ಮಾಣದ ಆರಂಭದಲ್ಲಿ ಸಿದ್ದೇಶ್ವರ ಶ್ರೀಗಳ ಆಕಾರವನ್ನ ಹೋಲುತ್ತಿತ್ತು. ಬಳಿಕ ಈಗ ಸಿದ್ದೇಶ್ವರ ಶ್ರೀಗಳ ಮೂರ್ತಿ ಆಕಾರ ಬದಲಿಸಿಕೊಂಡಿದ್ದು, ಅವರ ಗುರುಗಳಾದ ವೇದಾಂತ ಕೇಸರಿ ಮಲ್ಲಿಕಾರ್ಜುನ ಸ್ವಾಮೀಜಿಗಳ ಆಕಾರದಲ್ಲಿ ಕಾಣ್ತಿದೆ ಎನ್ನುವ ಅಭಿಪ್ರಾಯಗಳ ವ್ಯಕ್ತವಾಗ್ತಿವೆ. ಮರಳಿನ ಮೂರ್ತಿ ವೀಕ್ಷಿಸಿಲು ಬರ್ತಿರೋ ಭಕ್ತರು ಒಂದು ಭಾಗದಲ್ಲಿ ನಿಂತು ನೋಡಿದ್ರೆ ಅದು ಸಿದ್ದೇಶ್ವರ ಶ್ರೀಗಳ ಗುರುಗಳಾದ ಮಲ್ಲಿಕಾರ್ಜುನ ಸ್ವಾಮೀಜಿಗಳಂತೆ(Mallikarjuna Swamiji) ಕಾಣ್ತಿದೆ ಎನ್ತಿದ್ದಾರಂತೆ. ಸಿದ್ದೇಶ್ವರ ಶ್ರೀಗಳು ನಿಧನಕ್ಕೂ ಮುನ್ನ ತಾವು ಬರೆದಿಟ್ಟ ವಿಲ್‌ ನಂತೆ ಯಾರು ಸಹ ಅವರ ಮೂರ್ತಿ ನಿರ್ಮಾಣ ಮಾಡಬಾರದು, ಗದ್ದುಗೆ ಕಟ್ಟಬಾರದು, ಅಸ್ಥಿತ್ವ ಕಾಪಾಡುವ ಪ್ರಯತ್ನ ಮಾಡಬಾರದು ಎಂದಿದ್ದರು. ಆದ್ರೆ ಈಗ ಶಾಪೇಟೆಯ ಗಣೇಶ ಮಂಡಳಿ ಮುಂದುವರೆದು ಸಿದ್ದೇಶ್ವರ ಶ್ರೀಗಳ ಮರಳಿನ ಮೂರ್ತಿ ನಿರ್ಮಾಣ ಮಾಡಿದೆ.

ಇದನ್ನೂ ವೀಕ್ಷಿಸಿ:  Podcast: ಇಸ್ರೋ ಅಧ್ಯಕ್ಷ ಸೋಮನಾಥ್‌ರಿಂದ ಚಂದ್ರಯಾನ -3 ಯಶೋಗಾಥೆ

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?