ಮಾಜಿ ಸಿಎಂ ಎಸ್.ಎಂ. ಕೃಷ್ಣ ಅಂತಿಮ ದರ್ಶನ: ರಾಮನಗರ, ಚನ್ನಪಟ್ಟಣದಲ್ಲೂ ವ್ಯವಸ್ಥೆ

ಮಾಜಿ ಸಿಎಂ ಎಸ್.ಎಂ. ಕೃಷ್ಣ ಅಂತಿಮ ದರ್ಶನ: ರಾಮನಗರ, ಚನ್ನಪಟ್ಟಣದಲ್ಲೂ ವ್ಯವಸ್ಥೆ

Published : Dec 10, 2024, 05:07 PM IST

ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಪಾರ್ಥಿವ ಶರೀರವು ಹಳೆ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಾಗಲಿದ್ದು, ಬಿಡದಿ, ರಾಮನಗರ ಮತ್ತು ಚನ್ನಪಟ್ಟಣದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಬೆಳಗ್ಗೆ 9.30 ರಿಂದ ಪ್ರತಿ ಸ್ಥಳದಲ್ಲಿ 15-20 ನಿಮಿಷಗಳ ಕಾಲ ದರ್ಶನಕ್ಕೆ ಅವಕಾಶವಿದೆ.

ಮಾಜಿ ಸಿಎಂ ಎಸ್ ಎಂ‌ ಕೃಷ್ಣ ವಿಧಿವಶ ಹಿನ್ನೆಲೆಯಲ್ಲಿ ನಾಳೆ ರಾಮನಗರ ಹಾಗೂ ಚನ್ನಪಟ್ಟಣದಲ್ಲಿಯೂ ಅಂತಿಮ ದರ್ಶನದ ನೇರ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿದೆ. ಹಳೆ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಎಸ್ ಎಂ.ಕೃಷ್ಣ ಅವರ ಪಾರ್ಥಿವ ಶರೀರ ಸಾಗಲಿದೆ. ಬಿಡದಿ, ರಾಮನಗರ, ಚನ್ನಪಟ್ಟಣದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ. ಈ ಬಗ್ಗೆ ರಾಮನಗರ ಜಿಲ್ಲಾಡಳಿತದಿಂದ ಸಕಲ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಬಿಡದಿಯ ಬಿಜೆಎಸ್ ಸರ್ಕಲ್, ರಾಮನಗರ ಐಜೂರು ವೃತ್ತ ಹಾಗೂ ಚನ್ನಪಟ್ಟಣ ಗಾಂಧಿ ಭವನ ಬಳಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ.

ಬೆಳಗ್ಗೆ 9.30 ಕ್ಕೆ ಬಿಡದಿಯಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ನೀಡಲಾಗುವುದು. ನಂತರ, ರಾಮನಗರದ ಐಜೂರು ವೃತ್ತ ಹಾಗೂ ಚನ್ನಪಟ್ಟಣದಲ್ಲಿ ಗಾಂಧಿ ಭವನದ ಬಳಿ ಸಾರ್ವಜನಿಕ ದರ್ಶನಕ್ಕೆ ಅವಕಾಶ‌ ಕಲ್ಪಿಸಲಾಗುತ್ತಿದೆ. ಪ್ರತಿ ಸ್ಥಳದಲ್ಲಿಯೂ 15 ರಿಂದ 20 ನಿಮಿಷಗಳು ಮಾತ್ರ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕೊಡಲಾಗುತ್ತದೆ. ಬಳಿಕ ಬೆಂಗಳೂರು-ಮೈಸೂರು ಹಳೆ ಹೆದ್ದಾರಿಯಲ್ಲಿ ಸೋಮನಹಳ್ಳಿ ತಲುಪಲಿರುವ ಎಸ್ ಎಂ ಕೃಷ್ಣ ಪಾರ್ಥೀವ ಶರೀರ ಒಕ್ಕಲಿಗ ಸಮುದಾಯದ ವಿಧಿ-ವಿಧಾನದಂತೆ ಅಂತ್ಯಕ್ರಿಯೆ ನಡೆಸಲಾಗುತ್ತದೆ. ಈ ಬಗ್ಗೆ ರಾಮನಗರ ಜಿಲ್ಲಾಧಿಕಾರಿ ಯಶವಂತ್ ಗುರುಕರ್ ಮಾಹಿತಿ ನೀಡಿದ್ದಾರೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!