ಇವರಿಗೆಲ್ಲಾ ಹೇಗೆ ಪ್ರಶಸ್ತಿ ಕೊಟ್ರಿ?  ಹೈಕೋರ್ಟ್ ಮೆಟ್ಟಿಲೇರಿದ ಅವಾರ್ಡ್ ವಿಚಾರ

Oct 30, 2019, 8:04 PM IST

ಬೆಂಗಳೂರು[ಅ. 30]  ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಈಗ ಹೈಕೋರ್ಟ್ ಮೆಟ್ಟಿಲೇರಿದೆ. ಸಾಮಾಜಿಕ ಕಾರ್ಯಕರ್ತ ಕೇಶವ್ ಗೋಪಾಲ್ ಹೈಕೋರ್ಟ್ ಮೊರೆ ಹೋಗಿದ್ದಾರೆ. ಪ್ರಭಾತ್ ಆರ್ಟ್ ಇಂಟರ್ ನ್ಯಾಶನಲ್, ಟಾಟಾ ಸಿಲಿಕಾನ್, ಉದ್ಯಮಿ ವಿಜಯ್ ಸಂಕೇಶ್ವರ, ಪ್ರಕಾಶ್ ಶೆಟ್ಟಿಗೆ ಪ್ರಶಸ್ತಿ ನೀಡಿರುವುದನ್ನು ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.

64 ಸಾಧಕರಿಗೆ ರಾಜ್ಯೋತ್ಸವ ಗರಿ, ಇಲ್ಲಿದೆ ಪೂರ್ಣ ಪಟ್ಟಿ

64 ಸಾಧಕರಿಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಸರ್ಕಾರ ತಿಳಿಸಿತ್ತು. ಇದೀಗ ಹೈಕೋರ್ಟ್ ಮೆಟ್ಟಿಲು ಏರಿದ್ದು ಮುಂದೆ ಯಾವ ತಿರುವು ಪಡೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.