Omicron Variant: ರಾಜ್ಯದ ಗಡಿಗಳಲ್ಲಿ ಕಟ್ಟೆಚ್ಚರ, ಎಲ್ಲಾ ಡಿಸಿಗಳಿಗೆ ಸೂಚನೆ

Omicron Variant: ರಾಜ್ಯದ ಗಡಿಗಳಲ್ಲಿ ಕಟ್ಟೆಚ್ಚರ, ಎಲ್ಲಾ ಡಿಸಿಗಳಿಗೆ ಸೂಚನೆ

Published : Dec 01, 2021, 09:21 AM IST

- ಒಮಿಕ್ರೋನ್‌ ಭೀತಿ ಹಿನ್ನೆಲೆ: ತಜ್ಞರ ಸಮಿತಿ ಶಿಫಾರಸು

- ಸರ್ಕಾರಿ ಸೇವೆ, ಸಾರ್ವಜನಿಕ ಸ್ಥಳ ಪ್ರವೇಶಕ್ಕೆ ಲಸಿಕೆ ಕಡ್ಡಾಯ ಮಾಡಿ

- ಲಸಿಕೆ ಪಡೆಯದವರಿಗೆ ಪಡಿತರ, ವೇತನ, ಪಿಂಚಣಿ ಸೇರಿ ಯಾವುದೇ ಸೇವೆ ಬೇಡ

- ಬಸ್‌, ಚಿತ್ರಮಂದಿರ, ಮಾಲ್‌, ದೇಗುಲಗಳಿಗೂ ಪ್ರವೇಶ ಬೇಡ: 13 ಶಿಫಾರಸು

 

ಬೆಂಗಳೂರು (ಡಿ. 01):  ಕೊರೋನಾ ಲಸಿಕೆಯ (Corona Vaccine) ಎರಡು ಡೋಸ್‌ ಪಡೆದವರಿಗೆ ಮಾತ್ರ ಪಡಿತರ (Ration Card), ವೇತನ, ಪಿಂಚಣಿ ಸೇರಿದಂತೆ ಸರ್ಕಾರದ ಎಲ್ಲ ನಾಗರಿಕ ಸೇವೆಗಳಿಗೆ ಹಾಗೂ ಸಾರ್ವಜನಿಕ ಸ್ಥಳಗಳ ಪ್ರವೇಶಕ್ಕೆ ಅವಕಾಶ ನೀಡಬೇಕು ಎಂಬುದೂ ಸೇರಿದಂತೆ ಒಮಿಕ್ರೋನ್‌ ರೂಪಾಂತರಿ ಹಾವಳಿ ತಡೆಗೆ ರಾಜ್ಯ ಕೋವಿಡ್‌ ತಾಂತ್ರಿಕ ಸಲಹಾ ಸಮಿತಿಯು ರಾಜ್ಯ ಸರ್ಕಾರಕ್ಕೆ 13 ಪ್ರಮುಖ ಶಿಫಾರಸುಗಳನ್ನು ಮಾಡಿದೆ.

ಮಂಗಳವಾರ ವಿಧಾನಸೌಧದಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಶಿಫಾರಸುಗಳನ್ನು ತಾಂತ್ರಿಕ ಸಮಿತಿಯು ಸರ್ಕಾರಕ್ಕೆ ನೀಡಿದೆ. ಪ್ರಮುಖವಾಗಿ ಪಡಿತರ, ಪೆಟ್ರೋಲ್‌, ಡೀಸೆಲ್‌, ವೇತನ, ಪಿಂಚಣಿ, ನೀರು ಸಂಪರ್ಕ ಸೇರಿದಂತೆ ಎಲ್ಲ ನಾಗರಿಕ ಸೇವೆಗಳನ್ನು ಪಡೆಯಲು, ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ಯಾವುದೇ ಸಾರ್ವಜನಿಕ ಸಾರಿಗೆ ಸೌಲಭ್ಯ ಬಳಸಲು ಎರಡು ಡೋಸ್‌ ಕೋವಿಡ್‌ ಲಸಿಕೆ ಪಡೆದಿರುವುದನ್ನು ಕಡ್ಡಾಯಗೊಳಿಸಬೇಕು. ಅಲ್ಲದೆ, ಚಿತ್ರಮಂದಿರ, ಮಾಲ್‌, ದೇವಾಲಯ, ಪ್ರವಾಸಿ ತಾಣಗಳು ಸೇರಿದಂತೆ ಯಾವುದೇ ಸಾರ್ವಜನಿಕ ಸ್ಥಳಗಳ ಪ್ರವೇಶ ಹಾಗೂ ಸಂಚಾರಕ್ಕೂ ಎರಡೂ ಡೋಸ್‌ ಲಸಿಕೆ ಕಡ್ಡಾಯವಾಗಿ ಪಡೆದಿರಬೇಕು ಎಂಬ ನಿಯಮ ರೂಪಿಸಿ ಎಂದು ಸಮಿತಿ ಸರ್ಕಾರಕ್ಕೆ ಸಲಹೆ ನೀಡಿದೆ.

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more