Omicron Variant: ರಾಜ್ಯದ ಗಡಿಗಳಲ್ಲಿ ಕಟ್ಟೆಚ್ಚರ, ಎಲ್ಲಾ ಡಿಸಿಗಳಿಗೆ ಸೂಚನೆ

Omicron Variant: ರಾಜ್ಯದ ಗಡಿಗಳಲ್ಲಿ ಕಟ್ಟೆಚ್ಚರ, ಎಲ್ಲಾ ಡಿಸಿಗಳಿಗೆ ಸೂಚನೆ

Published : Dec 01, 2021, 09:21 AM IST

- ಒಮಿಕ್ರೋನ್‌ ಭೀತಿ ಹಿನ್ನೆಲೆ: ತಜ್ಞರ ಸಮಿತಿ ಶಿಫಾರಸು

- ಸರ್ಕಾರಿ ಸೇವೆ, ಸಾರ್ವಜನಿಕ ಸ್ಥಳ ಪ್ರವೇಶಕ್ಕೆ ಲಸಿಕೆ ಕಡ್ಡಾಯ ಮಾಡಿ

- ಲಸಿಕೆ ಪಡೆಯದವರಿಗೆ ಪಡಿತರ, ವೇತನ, ಪಿಂಚಣಿ ಸೇರಿ ಯಾವುದೇ ಸೇವೆ ಬೇಡ

- ಬಸ್‌, ಚಿತ್ರಮಂದಿರ, ಮಾಲ್‌, ದೇಗುಲಗಳಿಗೂ ಪ್ರವೇಶ ಬೇಡ: 13 ಶಿಫಾರಸು

 

ಬೆಂಗಳೂರು (ಡಿ. 01):  ಕೊರೋನಾ ಲಸಿಕೆಯ (Corona Vaccine) ಎರಡು ಡೋಸ್‌ ಪಡೆದವರಿಗೆ ಮಾತ್ರ ಪಡಿತರ (Ration Card), ವೇತನ, ಪಿಂಚಣಿ ಸೇರಿದಂತೆ ಸರ್ಕಾರದ ಎಲ್ಲ ನಾಗರಿಕ ಸೇವೆಗಳಿಗೆ ಹಾಗೂ ಸಾರ್ವಜನಿಕ ಸ್ಥಳಗಳ ಪ್ರವೇಶಕ್ಕೆ ಅವಕಾಶ ನೀಡಬೇಕು ಎಂಬುದೂ ಸೇರಿದಂತೆ ಒಮಿಕ್ರೋನ್‌ ರೂಪಾಂತರಿ ಹಾವಳಿ ತಡೆಗೆ ರಾಜ್ಯ ಕೋವಿಡ್‌ ತಾಂತ್ರಿಕ ಸಲಹಾ ಸಮಿತಿಯು ರಾಜ್ಯ ಸರ್ಕಾರಕ್ಕೆ 13 ಪ್ರಮುಖ ಶಿಫಾರಸುಗಳನ್ನು ಮಾಡಿದೆ.

ಮಂಗಳವಾರ ವಿಧಾನಸೌಧದಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಶಿಫಾರಸುಗಳನ್ನು ತಾಂತ್ರಿಕ ಸಮಿತಿಯು ಸರ್ಕಾರಕ್ಕೆ ನೀಡಿದೆ. ಪ್ರಮುಖವಾಗಿ ಪಡಿತರ, ಪೆಟ್ರೋಲ್‌, ಡೀಸೆಲ್‌, ವೇತನ, ಪಿಂಚಣಿ, ನೀರು ಸಂಪರ್ಕ ಸೇರಿದಂತೆ ಎಲ್ಲ ನಾಗರಿಕ ಸೇವೆಗಳನ್ನು ಪಡೆಯಲು, ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ಯಾವುದೇ ಸಾರ್ವಜನಿಕ ಸಾರಿಗೆ ಸೌಲಭ್ಯ ಬಳಸಲು ಎರಡು ಡೋಸ್‌ ಕೋವಿಡ್‌ ಲಸಿಕೆ ಪಡೆದಿರುವುದನ್ನು ಕಡ್ಡಾಯಗೊಳಿಸಬೇಕು. ಅಲ್ಲದೆ, ಚಿತ್ರಮಂದಿರ, ಮಾಲ್‌, ದೇವಾಲಯ, ಪ್ರವಾಸಿ ತಾಣಗಳು ಸೇರಿದಂತೆ ಯಾವುದೇ ಸಾರ್ವಜನಿಕ ಸ್ಥಳಗಳ ಪ್ರವೇಶ ಹಾಗೂ ಸಂಚಾರಕ್ಕೂ ಎರಡೂ ಡೋಸ್‌ ಲಸಿಕೆ ಕಡ್ಡಾಯವಾಗಿ ಪಡೆದಿರಬೇಕು ಎಂಬ ನಿಯಮ ರೂಪಿಸಿ ಎಂದು ಸಮಿತಿ ಸರ್ಕಾರಕ್ಕೆ ಸಲಹೆ ನೀಡಿದೆ.

 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more