Omicron Variant: ರಾಜ್ಯದ ಗಡಿಗಳಲ್ಲಿ ಕಟ್ಟೆಚ್ಚರ, ಎಲ್ಲಾ ಡಿಸಿಗಳಿಗೆ ಸೂಚನೆ

Omicron Variant: ರಾಜ್ಯದ ಗಡಿಗಳಲ್ಲಿ ಕಟ್ಟೆಚ್ಚರ, ಎಲ್ಲಾ ಡಿಸಿಗಳಿಗೆ ಸೂಚನೆ

Published : Dec 01, 2021, 09:21 AM IST

- ಒಮಿಕ್ರೋನ್‌ ಭೀತಿ ಹಿನ್ನೆಲೆ: ತಜ್ಞರ ಸಮಿತಿ ಶಿಫಾರಸು

- ಸರ್ಕಾರಿ ಸೇವೆ, ಸಾರ್ವಜನಿಕ ಸ್ಥಳ ಪ್ರವೇಶಕ್ಕೆ ಲಸಿಕೆ ಕಡ್ಡಾಯ ಮಾಡಿ

- ಲಸಿಕೆ ಪಡೆಯದವರಿಗೆ ಪಡಿತರ, ವೇತನ, ಪಿಂಚಣಿ ಸೇರಿ ಯಾವುದೇ ಸೇವೆ ಬೇಡ

- ಬಸ್‌, ಚಿತ್ರಮಂದಿರ, ಮಾಲ್‌, ದೇಗುಲಗಳಿಗೂ ಪ್ರವೇಶ ಬೇಡ: 13 ಶಿಫಾರಸು

 

ಬೆಂಗಳೂರು (ಡಿ. 01):  ಕೊರೋನಾ ಲಸಿಕೆಯ (Corona Vaccine) ಎರಡು ಡೋಸ್‌ ಪಡೆದವರಿಗೆ ಮಾತ್ರ ಪಡಿತರ (Ration Card), ವೇತನ, ಪಿಂಚಣಿ ಸೇರಿದಂತೆ ಸರ್ಕಾರದ ಎಲ್ಲ ನಾಗರಿಕ ಸೇವೆಗಳಿಗೆ ಹಾಗೂ ಸಾರ್ವಜನಿಕ ಸ್ಥಳಗಳ ಪ್ರವೇಶಕ್ಕೆ ಅವಕಾಶ ನೀಡಬೇಕು ಎಂಬುದೂ ಸೇರಿದಂತೆ ಒಮಿಕ್ರೋನ್‌ ರೂಪಾಂತರಿ ಹಾವಳಿ ತಡೆಗೆ ರಾಜ್ಯ ಕೋವಿಡ್‌ ತಾಂತ್ರಿಕ ಸಲಹಾ ಸಮಿತಿಯು ರಾಜ್ಯ ಸರ್ಕಾರಕ್ಕೆ 13 ಪ್ರಮುಖ ಶಿಫಾರಸುಗಳನ್ನು ಮಾಡಿದೆ.

ಮಂಗಳವಾರ ವಿಧಾನಸೌಧದಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಶಿಫಾರಸುಗಳನ್ನು ತಾಂತ್ರಿಕ ಸಮಿತಿಯು ಸರ್ಕಾರಕ್ಕೆ ನೀಡಿದೆ. ಪ್ರಮುಖವಾಗಿ ಪಡಿತರ, ಪೆಟ್ರೋಲ್‌, ಡೀಸೆಲ್‌, ವೇತನ, ಪಿಂಚಣಿ, ನೀರು ಸಂಪರ್ಕ ಸೇರಿದಂತೆ ಎಲ್ಲ ನಾಗರಿಕ ಸೇವೆಗಳನ್ನು ಪಡೆಯಲು, ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ಯಾವುದೇ ಸಾರ್ವಜನಿಕ ಸಾರಿಗೆ ಸೌಲಭ್ಯ ಬಳಸಲು ಎರಡು ಡೋಸ್‌ ಕೋವಿಡ್‌ ಲಸಿಕೆ ಪಡೆದಿರುವುದನ್ನು ಕಡ್ಡಾಯಗೊಳಿಸಬೇಕು. ಅಲ್ಲದೆ, ಚಿತ್ರಮಂದಿರ, ಮಾಲ್‌, ದೇವಾಲಯ, ಪ್ರವಾಸಿ ತಾಣಗಳು ಸೇರಿದಂತೆ ಯಾವುದೇ ಸಾರ್ವಜನಿಕ ಸ್ಥಳಗಳ ಪ್ರವೇಶ ಹಾಗೂ ಸಂಚಾರಕ್ಕೂ ಎರಡೂ ಡೋಸ್‌ ಲಸಿಕೆ ಕಡ್ಡಾಯವಾಗಿ ಪಡೆದಿರಬೇಕು ಎಂಬ ನಿಯಮ ರೂಪಿಸಿ ಎಂದು ಸಮಿತಿ ಸರ್ಕಾರಕ್ಕೆ ಸಲಹೆ ನೀಡಿದೆ.

 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more