ಕೆಂಪಣ್ಣ ಭ್ರಷ್ಟಾಚಾರ ಆರೋಪಕ್ಕೆ ಸುಧಾಕರ್‌ ತಿರುಗೇಟು

ಕೆಂಪಣ್ಣ ಭ್ರಷ್ಟಾಚಾರ ಆರೋಪಕ್ಕೆ ಸುಧಾಕರ್‌ ತಿರುಗೇಟು

Published : Apr 13, 2022, 07:52 PM IST

ಸಚಿವ ಕೆ.ಸುಧಾಕರ್ ವಿರುದ್ಧ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಕೆಂಪಣ್ಣ ಭ್ರಷ್ಟಾಚಾರದ ಆರೋಪ ಮಾಡಿದ್ದರು. ಇದರ ಬೆನ್ನಲ್ಲೇ ಸುಧಾಕರ್ ತಿರುಗೇಟು ನೀಡಿದ್ದು, ಕೆಂಪಣ್ಣ ಕಾಂಗ್ರೆಸ್ ಏಜೆಂಟ್, ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದು ಹೇಳಿದ್ದಾರೆ.

ಬೆಂಗಳೂರು (ಏ.13): ಆರೋಗ್ಯ ಸಚಿವ ಡಾ. ಕೆ.ಸುಧಾಕರ್ (Health Minister Dr.K.Sudhakar ) ವಿರುದ್ಧ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಕೆಂಪಣ್ಣ (Contractors Association President Kempanna) ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಇದಕ್ಕೆ ಸುಧಾಕರ್ ಕೂಡ  ತಿರುಗೇಟು ನೀಡಿದ್ದಾರೆ. ಕೆಂಪಣ್ಣ ಪುರಾವೆಗಳಿಲ್ಲದೆ ಆರೋಪ ಮಾಡುತ್ತಿದ್ದಾರೆ. ಅವರು ಕಾಂಗ್ರೆಸ್ ಏಜೆಂಟ್. ಅವರನ್ನು ಬ್ಲ್ಯಾಕ್ ಲಿಸ್ಟ್ ಗೆ ಸೇರ್ಪಡೆ ಮಾಡಬೇಕು ಎಂದು ಸುಧಾಕರ್ ಹೇಳಿದ್ದಾರೆ.

ಪ್ರಸ್ತುತ ಸರ್ಕಾರದಲ್ಲಿ ಟೆಂಡರ್ ಗೆ ಶೇ. 5ರಷ್ಟು ಕಮೀಷನ್ ನೀಡದೇ ಇದ್ರೆ ಟೆಂಡರ್ ಗೆ ಒಪ್ಪಿಗೆ ನೀಡಲ್ಲ. ಪ್ರಸ್ತುತ 2 ಸಾವಿರ ಕೋಟಿ ಕಾಮಗಾರಿ ನಡೀತಾ ಇದೆ. ಒಂದು ಟೆಂಡರ್ ಗೆ ಶೇ. 5ರಷ್ಟು ಕಮೀಷನ್ ನೀಡ್ಬೇಕು. ನೀರಾವರಿ ಇಲಾಖೆಯಲ್ಲಿ ಕಂಡುಕೇಳರಿಯದ ಭ್ರಷ್ಟಾಚಾರವಿದೆ. ಸುಧಾಕರ್ ಸಾಹೇಬ್ರು ಕೂಡ ಇದ್ದಾರೆ. ಈಶ್ವರಪ್ಪನವರ ಬಂಡವಾಳ ಏನು ಅಂತಾ ಈಗಾಗಲೇ ಗೊತ್ತಾಗಿದೆ. ಆದ್ದರಿಂದ ಹೋರಾಟ ಅನಿವಾರ್ಯವಾಗಿದ್ದು, ನಮ್ಮ ಕೆಲಸಗಳನ್ನ ನಿಲ್ಲಿಸಲು ತೀರ್ಮಾನಿಸಿದ್ದೇವೆ ಎಂದು ಕೆಂಪಣ್ಣ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದ್ದರು.

Suicide Case: ಈಶ್ವರಪ್ಪನವರೇ ಮೊದಲು ರಾಜೀನಾಮೆ ನೀಡಿ: ಹೆಚ್.ಡಿ.ಕುಮಾರಸ್ವಾಮಿ

ಇದಕ್ಕೆ ಪ್ರತಿಕ್ರಿಯೆ ನೀಡಿದ ಸುಧಾಕರ್, ಕೆಂಪಣ್ಣ ಪುರಾವೆ ಇಲ್ಲದೆ ಏನೇನೋ ಮಾತಾಡಿದ್ದಾರೆ. ಇವರ ಮೇಲೆ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು. ಅವರನ್ನು ಬ್ಲ್ಯಾಕ್ ಲಿಸ್ಟ್ ಮಾಡುವಂತೆ ಮುಖ್ಯಮಂತ್ರಿಗಳಿಗೆ ಆಗ್ರಹ ಮಾಡುತ್ತೇನೆ. ನಾನು ವೈಯಕ್ತಿಕವಾಗಿ ಅವರ ಮೇಲೆ ಮಾನನಷ್ಟ ಮೊಕದ್ದಮೆ ಹೂಡಲಿದ್ದೇನೆ. ಇವರನ್ನು ಮುಂದೆ ಇಟ್ಟುಕೊಂಡು ಕಾಂಗ್ರೆಸ್ ಪಕ್ಷ ರಾಜಕಾರಣ ಮಾಡುತ್ತಿದೆ ಎಂದು ಹೇಳಿದ್ದಾರೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more