ಕೆಂಪಣ್ಣ ಭ್ರಷ್ಟಾಚಾರ ಆರೋಪಕ್ಕೆ ಸುಧಾಕರ್‌ ತಿರುಗೇಟು

ಕೆಂಪಣ್ಣ ಭ್ರಷ್ಟಾಚಾರ ಆರೋಪಕ್ಕೆ ಸುಧಾಕರ್‌ ತಿರುಗೇಟು

Published : Apr 13, 2022, 07:52 PM IST

ಸಚಿವ ಕೆ.ಸುಧಾಕರ್ ವಿರುದ್ಧ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಕೆಂಪಣ್ಣ ಭ್ರಷ್ಟಾಚಾರದ ಆರೋಪ ಮಾಡಿದ್ದರು. ಇದರ ಬೆನ್ನಲ್ಲೇ ಸುಧಾಕರ್ ತಿರುಗೇಟು ನೀಡಿದ್ದು, ಕೆಂಪಣ್ಣ ಕಾಂಗ್ರೆಸ್ ಏಜೆಂಟ್, ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದು ಹೇಳಿದ್ದಾರೆ.

ಬೆಂಗಳೂರು (ಏ.13): ಆರೋಗ್ಯ ಸಚಿವ ಡಾ. ಕೆ.ಸುಧಾಕರ್ (Health Minister Dr.K.Sudhakar ) ವಿರುದ್ಧ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಕೆಂಪಣ್ಣ (Contractors Association President Kempanna) ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಇದಕ್ಕೆ ಸುಧಾಕರ್ ಕೂಡ  ತಿರುಗೇಟು ನೀಡಿದ್ದಾರೆ. ಕೆಂಪಣ್ಣ ಪುರಾವೆಗಳಿಲ್ಲದೆ ಆರೋಪ ಮಾಡುತ್ತಿದ್ದಾರೆ. ಅವರು ಕಾಂಗ್ರೆಸ್ ಏಜೆಂಟ್. ಅವರನ್ನು ಬ್ಲ್ಯಾಕ್ ಲಿಸ್ಟ್ ಗೆ ಸೇರ್ಪಡೆ ಮಾಡಬೇಕು ಎಂದು ಸುಧಾಕರ್ ಹೇಳಿದ್ದಾರೆ.

ಪ್ರಸ್ತುತ ಸರ್ಕಾರದಲ್ಲಿ ಟೆಂಡರ್ ಗೆ ಶೇ. 5ರಷ್ಟು ಕಮೀಷನ್ ನೀಡದೇ ಇದ್ರೆ ಟೆಂಡರ್ ಗೆ ಒಪ್ಪಿಗೆ ನೀಡಲ್ಲ. ಪ್ರಸ್ತುತ 2 ಸಾವಿರ ಕೋಟಿ ಕಾಮಗಾರಿ ನಡೀತಾ ಇದೆ. ಒಂದು ಟೆಂಡರ್ ಗೆ ಶೇ. 5ರಷ್ಟು ಕಮೀಷನ್ ನೀಡ್ಬೇಕು. ನೀರಾವರಿ ಇಲಾಖೆಯಲ್ಲಿ ಕಂಡುಕೇಳರಿಯದ ಭ್ರಷ್ಟಾಚಾರವಿದೆ. ಸುಧಾಕರ್ ಸಾಹೇಬ್ರು ಕೂಡ ಇದ್ದಾರೆ. ಈಶ್ವರಪ್ಪನವರ ಬಂಡವಾಳ ಏನು ಅಂತಾ ಈಗಾಗಲೇ ಗೊತ್ತಾಗಿದೆ. ಆದ್ದರಿಂದ ಹೋರಾಟ ಅನಿವಾರ್ಯವಾಗಿದ್ದು, ನಮ್ಮ ಕೆಲಸಗಳನ್ನ ನಿಲ್ಲಿಸಲು ತೀರ್ಮಾನಿಸಿದ್ದೇವೆ ಎಂದು ಕೆಂಪಣ್ಣ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದ್ದರು.

Suicide Case: ಈಶ್ವರಪ್ಪನವರೇ ಮೊದಲು ರಾಜೀನಾಮೆ ನೀಡಿ: ಹೆಚ್.ಡಿ.ಕುಮಾರಸ್ವಾಮಿ

ಇದಕ್ಕೆ ಪ್ರತಿಕ್ರಿಯೆ ನೀಡಿದ ಸುಧಾಕರ್, ಕೆಂಪಣ್ಣ ಪುರಾವೆ ಇಲ್ಲದೆ ಏನೇನೋ ಮಾತಾಡಿದ್ದಾರೆ. ಇವರ ಮೇಲೆ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು. ಅವರನ್ನು ಬ್ಲ್ಯಾಕ್ ಲಿಸ್ಟ್ ಮಾಡುವಂತೆ ಮುಖ್ಯಮಂತ್ರಿಗಳಿಗೆ ಆಗ್ರಹ ಮಾಡುತ್ತೇನೆ. ನಾನು ವೈಯಕ್ತಿಕವಾಗಿ ಅವರ ಮೇಲೆ ಮಾನನಷ್ಟ ಮೊಕದ್ದಮೆ ಹೂಡಲಿದ್ದೇನೆ. ಇವರನ್ನು ಮುಂದೆ ಇಟ್ಟುಕೊಂಡು ಕಾಂಗ್ರೆಸ್ ಪಕ್ಷ ರಾಜಕಾರಣ ಮಾಡುತ್ತಿದೆ ಎಂದು ಹೇಳಿದ್ದಾರೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more