ಇ-ಟೆಂಡರ್ಗೆ ಬನ್ನಿ ಅಂತಿದೆ TTD: ಇ-ಟೆಂಡರ್ಗೆ ಬರಕ್ಕಾಗಲ್ಲ ಎಂತಿದೆ KMF

ಇ-ಟೆಂಡರ್ಗೆ ಬನ್ನಿ ಅಂತಿದೆ TTD: ಇ-ಟೆಂಡರ್ಗೆ ಬರಕ್ಕಾಗಲ್ಲ ಎಂತಿದೆ KMF

Published : Aug 03, 2023, 04:38 PM IST

ಪ್ರಸಿದ್ಧ ತಿರುಪತಿ ದೇಗುಲದಲ್ಲಿ ತಯಾರಿಸುವ ಲಡ್ಡು ತಯಾರಿಕೆಗೆ ತುಪ್ಪ ಪೂರೈಸಲು ಕಡಿಮೆ ದರ ನಮೂದಿಸಿದ್ದ ಬೇರೊಂದು ಕಂಪನಿಯೊಂದನ್ನು ಆಯ್ಕೆ ಮಾಡಲಾಗಿದೆ’ ಎಂದು ತಿರುಪತಿ ದೇಗುಲದ ಉಸ್ತುವಾರಿ ಹೊತ್ತಿರುವ ಟಿಟಿಡಿ ಇತ್ತಿಚೆಗಷ್ಟೇ ಸ್ಪಷ್ಟಪಡಿಸಿತ್ತು. 

ಬೆಂಗಳೂರು (ಆ.03): ಪ್ರಸಿದ್ಧ ತಿರುಪತಿ ದೇಗುಲದಲ್ಲಿ ತಯಾರಿಸುವ ಲಡ್ಡು ತಯಾರಿಕೆಗೆ ತುಪ್ಪ ಪೂರೈಸಲು ಕಡಿಮೆ ದರ ನಮೂದಿಸಿದ್ದ ಬೇರೊಂದು ಕಂಪನಿಯೊಂದನ್ನು ಆಯ್ಕೆ ಮಾಡಲಾಗಿದೆ’ ಎಂದು ತಿರುಪತಿ ದೇಗುಲದ ಉಸ್ತುವಾರಿ ಹೊತ್ತಿರುವ ಟಿಟಿಡಿ ಇತ್ತಿಚೆಗಷ್ಟೇ ಸ್ಪಷ್ಟಪಡಿಸಿತ್ತು. ದುಬಾರಿ ದರ ನಿಗದಿಪಡಿಸಿದ್ದ ಕರ್ನಾಟಕದ ‘ನಂದಿನಿ’ ತುಪ್ಪದ ಟೆಂಡರ್‌ ರದ್ದು ಮಾಡಲಾಗಿದೆ ಎಂಬ ವಿವಾದದ ಬಗ್ಗೆ ಟಿಟಿಡಿ ಕಾರ್ಯನಿರ್ವಾಹಕ ಅಧಿಕಾರಿ ಧರ್ಮಾರೆಡ್ಡಿ, ‘ನಮ್ಮದು ಸರ್ಕಾರಿ ಸಂಸ್ಥೆ. ಹೀಗಾಗಿ ದೇಗುಲಕ್ಕೆ ಬೇಕಾದ ಎಲ್ಲಾ ವಸ್ತುಗಳ ಖರೀದಿಗೂ ಟೆಂಡರ್‌ ಮಾರ್ಗ ಅನುಸರಿಸಲಾಗುತ್ತದೆ. ಅದರಲ್ಲಿ ನಮ್ಮ ಮಾನದಂಡ ಪೂರೈಸಿ, ಅತ್ಯಂತ ಕಡಿಮೆ ದರ ನಮೂದು ಮಾಡಿದವರನ್ನು ಆಯ್ಕೆ ಮಾಡಿಕೊಳ್ಳುತ್ತೇವೆ. 

ಹೀಗಾಗಿ ಕರ್ನಾಟಕದ ಕೆಎಂಎಫ್‌ಗೆ ಅವಕಾಶ ನೀಡಿಲ್ಲ ಎಂಬುದು ಸರಿಯಲ್ಲ. ಮೇಲಾಗಿ ಈ ಹಿಂದೆ 2023ರ ಮಾರ್ಚ್‌ನಲ್ಲಿ ನಡೆದ ಟೆಂಡರ್‌ ಪ್ರಕ್ರಿಯೆಯಲ್ಲಿ ಕೆಎಂಎಫ್‌ ಭಾಗವಹಿಸಿರಲಿಲ್ಲ’ ಎಂದು ಹೇಳಿದ್ದರು. ಇದೆ ವೇಳೆ ಸತತವಾಗಿ ಕಳೆದ 20 ವರ್ಷಗಳಿಂದ ಕೆಎಂಎಫ್‌, ಟಿಟಿಡಿಗೆ ತುಪ್ಪ ಪೂರೈಕೆ ಮಾಡುತ್ತಿತ್ತು ಎಂಬ ಕೆಎಂಎಫ್‌ ಅಧ್ಯಕ್ಷ ಭೀಮಾನಾಯ್ಕ್ ಹೇಳಿಕೆಯನ್ನೂ ಅವರು ತಳ್ಳಿಹಾಕಿದ್ದರು. ಇನ್ನು ನಂದಿನಿ ತುಪ್ಪ ಉತ್ಕೃಷ್ಟ ಗುಣಮಟ್ಟದ ತುಪ್ಪವಾಗಿದ್ದು, ಸ್ಪರ್ಧಾತ್ಮಕ ಬೆಲೆಯಲ್ಲಿ ಪೂರೈಕೆ ಮಾಡಲು ಸಾಧ್ಯವಿಲ್ಲ. ಹಾಗಾಗಿ ತಿರುಪತಿ ತಿರುಮಲ ಟ್ರಸ್ಟ್​ನ ಟೆಂಡರ್​ನಲ್ಲಿ ನಾವು ಭಾಗವಹಿಸಿಲ್ಲ. ತಿರುಪತಿಗೆ ದೇವಸ್ಥಾನಕ್ಕೆ ತುಪ್ಪ ಸರಬರಾಜು ಮಾಡುವುದಿಲ್ಲ ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟಪಡಿಸಿದ್ದರು. ಕಂಪ್ಲಿಟ್ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more