ಇ-ಟೆಂಡರ್ಗೆ ಬನ್ನಿ ಅಂತಿದೆ TTD: ಇ-ಟೆಂಡರ್ಗೆ ಬರಕ್ಕಾಗಲ್ಲ ಎಂತಿದೆ KMF

ಇ-ಟೆಂಡರ್ಗೆ ಬನ್ನಿ ಅಂತಿದೆ TTD: ಇ-ಟೆಂಡರ್ಗೆ ಬರಕ್ಕಾಗಲ್ಲ ಎಂತಿದೆ KMF

Published : Aug 03, 2023, 04:38 PM IST

ಪ್ರಸಿದ್ಧ ತಿರುಪತಿ ದೇಗುಲದಲ್ಲಿ ತಯಾರಿಸುವ ಲಡ್ಡು ತಯಾರಿಕೆಗೆ ತುಪ್ಪ ಪೂರೈಸಲು ಕಡಿಮೆ ದರ ನಮೂದಿಸಿದ್ದ ಬೇರೊಂದು ಕಂಪನಿಯೊಂದನ್ನು ಆಯ್ಕೆ ಮಾಡಲಾಗಿದೆ’ ಎಂದು ತಿರುಪತಿ ದೇಗುಲದ ಉಸ್ತುವಾರಿ ಹೊತ್ತಿರುವ ಟಿಟಿಡಿ ಇತ್ತಿಚೆಗಷ್ಟೇ ಸ್ಪಷ್ಟಪಡಿಸಿತ್ತು. 

ಬೆಂಗಳೂರು (ಆ.03): ಪ್ರಸಿದ್ಧ ತಿರುಪತಿ ದೇಗುಲದಲ್ಲಿ ತಯಾರಿಸುವ ಲಡ್ಡು ತಯಾರಿಕೆಗೆ ತುಪ್ಪ ಪೂರೈಸಲು ಕಡಿಮೆ ದರ ನಮೂದಿಸಿದ್ದ ಬೇರೊಂದು ಕಂಪನಿಯೊಂದನ್ನು ಆಯ್ಕೆ ಮಾಡಲಾಗಿದೆ’ ಎಂದು ತಿರುಪತಿ ದೇಗುಲದ ಉಸ್ತುವಾರಿ ಹೊತ್ತಿರುವ ಟಿಟಿಡಿ ಇತ್ತಿಚೆಗಷ್ಟೇ ಸ್ಪಷ್ಟಪಡಿಸಿತ್ತು. ದುಬಾರಿ ದರ ನಿಗದಿಪಡಿಸಿದ್ದ ಕರ್ನಾಟಕದ ‘ನಂದಿನಿ’ ತುಪ್ಪದ ಟೆಂಡರ್‌ ರದ್ದು ಮಾಡಲಾಗಿದೆ ಎಂಬ ವಿವಾದದ ಬಗ್ಗೆ ಟಿಟಿಡಿ ಕಾರ್ಯನಿರ್ವಾಹಕ ಅಧಿಕಾರಿ ಧರ್ಮಾರೆಡ್ಡಿ, ‘ನಮ್ಮದು ಸರ್ಕಾರಿ ಸಂಸ್ಥೆ. ಹೀಗಾಗಿ ದೇಗುಲಕ್ಕೆ ಬೇಕಾದ ಎಲ್ಲಾ ವಸ್ತುಗಳ ಖರೀದಿಗೂ ಟೆಂಡರ್‌ ಮಾರ್ಗ ಅನುಸರಿಸಲಾಗುತ್ತದೆ. ಅದರಲ್ಲಿ ನಮ್ಮ ಮಾನದಂಡ ಪೂರೈಸಿ, ಅತ್ಯಂತ ಕಡಿಮೆ ದರ ನಮೂದು ಮಾಡಿದವರನ್ನು ಆಯ್ಕೆ ಮಾಡಿಕೊಳ್ಳುತ್ತೇವೆ. 

ಹೀಗಾಗಿ ಕರ್ನಾಟಕದ ಕೆಎಂಎಫ್‌ಗೆ ಅವಕಾಶ ನೀಡಿಲ್ಲ ಎಂಬುದು ಸರಿಯಲ್ಲ. ಮೇಲಾಗಿ ಈ ಹಿಂದೆ 2023ರ ಮಾರ್ಚ್‌ನಲ್ಲಿ ನಡೆದ ಟೆಂಡರ್‌ ಪ್ರಕ್ರಿಯೆಯಲ್ಲಿ ಕೆಎಂಎಫ್‌ ಭಾಗವಹಿಸಿರಲಿಲ್ಲ’ ಎಂದು ಹೇಳಿದ್ದರು. ಇದೆ ವೇಳೆ ಸತತವಾಗಿ ಕಳೆದ 20 ವರ್ಷಗಳಿಂದ ಕೆಎಂಎಫ್‌, ಟಿಟಿಡಿಗೆ ತುಪ್ಪ ಪೂರೈಕೆ ಮಾಡುತ್ತಿತ್ತು ಎಂಬ ಕೆಎಂಎಫ್‌ ಅಧ್ಯಕ್ಷ ಭೀಮಾನಾಯ್ಕ್ ಹೇಳಿಕೆಯನ್ನೂ ಅವರು ತಳ್ಳಿಹಾಕಿದ್ದರು. ಇನ್ನು ನಂದಿನಿ ತುಪ್ಪ ಉತ್ಕೃಷ್ಟ ಗುಣಮಟ್ಟದ ತುಪ್ಪವಾಗಿದ್ದು, ಸ್ಪರ್ಧಾತ್ಮಕ ಬೆಲೆಯಲ್ಲಿ ಪೂರೈಕೆ ಮಾಡಲು ಸಾಧ್ಯವಿಲ್ಲ. ಹಾಗಾಗಿ ತಿರುಪತಿ ತಿರುಮಲ ಟ್ರಸ್ಟ್​ನ ಟೆಂಡರ್​ನಲ್ಲಿ ನಾವು ಭಾಗವಹಿಸಿಲ್ಲ. ತಿರುಪತಿಗೆ ದೇವಸ್ಥಾನಕ್ಕೆ ತುಪ್ಪ ಸರಬರಾಜು ಮಾಡುವುದಿಲ್ಲ ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟಪಡಿಸಿದ್ದರು. ಕಂಪ್ಲಿಟ್ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more