ಇ-ಟೆಂಡರ್ಗೆ ಬನ್ನಿ ಅಂತಿದೆ TTD: ಇ-ಟೆಂಡರ್ಗೆ ಬರಕ್ಕಾಗಲ್ಲ ಎಂತಿದೆ KMF

ಇ-ಟೆಂಡರ್ಗೆ ಬನ್ನಿ ಅಂತಿದೆ TTD: ಇ-ಟೆಂಡರ್ಗೆ ಬರಕ್ಕಾಗಲ್ಲ ಎಂತಿದೆ KMF

Published : Aug 03, 2023, 04:38 PM IST

ಪ್ರಸಿದ್ಧ ತಿರುಪತಿ ದೇಗುಲದಲ್ಲಿ ತಯಾರಿಸುವ ಲಡ್ಡು ತಯಾರಿಕೆಗೆ ತುಪ್ಪ ಪೂರೈಸಲು ಕಡಿಮೆ ದರ ನಮೂದಿಸಿದ್ದ ಬೇರೊಂದು ಕಂಪನಿಯೊಂದನ್ನು ಆಯ್ಕೆ ಮಾಡಲಾಗಿದೆ’ ಎಂದು ತಿರುಪತಿ ದೇಗುಲದ ಉಸ್ತುವಾರಿ ಹೊತ್ತಿರುವ ಟಿಟಿಡಿ ಇತ್ತಿಚೆಗಷ್ಟೇ ಸ್ಪಷ್ಟಪಡಿಸಿತ್ತು. 

ಬೆಂಗಳೂರು (ಆ.03): ಪ್ರಸಿದ್ಧ ತಿರುಪತಿ ದೇಗುಲದಲ್ಲಿ ತಯಾರಿಸುವ ಲಡ್ಡು ತಯಾರಿಕೆಗೆ ತುಪ್ಪ ಪೂರೈಸಲು ಕಡಿಮೆ ದರ ನಮೂದಿಸಿದ್ದ ಬೇರೊಂದು ಕಂಪನಿಯೊಂದನ್ನು ಆಯ್ಕೆ ಮಾಡಲಾಗಿದೆ’ ಎಂದು ತಿರುಪತಿ ದೇಗುಲದ ಉಸ್ತುವಾರಿ ಹೊತ್ತಿರುವ ಟಿಟಿಡಿ ಇತ್ತಿಚೆಗಷ್ಟೇ ಸ್ಪಷ್ಟಪಡಿಸಿತ್ತು. ದುಬಾರಿ ದರ ನಿಗದಿಪಡಿಸಿದ್ದ ಕರ್ನಾಟಕದ ‘ನಂದಿನಿ’ ತುಪ್ಪದ ಟೆಂಡರ್‌ ರದ್ದು ಮಾಡಲಾಗಿದೆ ಎಂಬ ವಿವಾದದ ಬಗ್ಗೆ ಟಿಟಿಡಿ ಕಾರ್ಯನಿರ್ವಾಹಕ ಅಧಿಕಾರಿ ಧರ್ಮಾರೆಡ್ಡಿ, ‘ನಮ್ಮದು ಸರ್ಕಾರಿ ಸಂಸ್ಥೆ. ಹೀಗಾಗಿ ದೇಗುಲಕ್ಕೆ ಬೇಕಾದ ಎಲ್ಲಾ ವಸ್ತುಗಳ ಖರೀದಿಗೂ ಟೆಂಡರ್‌ ಮಾರ್ಗ ಅನುಸರಿಸಲಾಗುತ್ತದೆ. ಅದರಲ್ಲಿ ನಮ್ಮ ಮಾನದಂಡ ಪೂರೈಸಿ, ಅತ್ಯಂತ ಕಡಿಮೆ ದರ ನಮೂದು ಮಾಡಿದವರನ್ನು ಆಯ್ಕೆ ಮಾಡಿಕೊಳ್ಳುತ್ತೇವೆ. 

ಹೀಗಾಗಿ ಕರ್ನಾಟಕದ ಕೆಎಂಎಫ್‌ಗೆ ಅವಕಾಶ ನೀಡಿಲ್ಲ ಎಂಬುದು ಸರಿಯಲ್ಲ. ಮೇಲಾಗಿ ಈ ಹಿಂದೆ 2023ರ ಮಾರ್ಚ್‌ನಲ್ಲಿ ನಡೆದ ಟೆಂಡರ್‌ ಪ್ರಕ್ರಿಯೆಯಲ್ಲಿ ಕೆಎಂಎಫ್‌ ಭಾಗವಹಿಸಿರಲಿಲ್ಲ’ ಎಂದು ಹೇಳಿದ್ದರು. ಇದೆ ವೇಳೆ ಸತತವಾಗಿ ಕಳೆದ 20 ವರ್ಷಗಳಿಂದ ಕೆಎಂಎಫ್‌, ಟಿಟಿಡಿಗೆ ತುಪ್ಪ ಪೂರೈಕೆ ಮಾಡುತ್ತಿತ್ತು ಎಂಬ ಕೆಎಂಎಫ್‌ ಅಧ್ಯಕ್ಷ ಭೀಮಾನಾಯ್ಕ್ ಹೇಳಿಕೆಯನ್ನೂ ಅವರು ತಳ್ಳಿಹಾಕಿದ್ದರು. ಇನ್ನು ನಂದಿನಿ ತುಪ್ಪ ಉತ್ಕೃಷ್ಟ ಗುಣಮಟ್ಟದ ತುಪ್ಪವಾಗಿದ್ದು, ಸ್ಪರ್ಧಾತ್ಮಕ ಬೆಲೆಯಲ್ಲಿ ಪೂರೈಕೆ ಮಾಡಲು ಸಾಧ್ಯವಿಲ್ಲ. ಹಾಗಾಗಿ ತಿರುಪತಿ ತಿರುಮಲ ಟ್ರಸ್ಟ್​ನ ಟೆಂಡರ್​ನಲ್ಲಿ ನಾವು ಭಾಗವಹಿಸಿಲ್ಲ. ತಿರುಪತಿಗೆ ದೇವಸ್ಥಾನಕ್ಕೆ ತುಪ್ಪ ಸರಬರಾಜು ಮಾಡುವುದಿಲ್ಲ ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟಪಡಿಸಿದ್ದರು. ಕಂಪ್ಲಿಟ್ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more