ರಾಜ್ಯದ 27 ಸಾಧಕರಿಗೆ ಸುವರ್ಣ ಕನ್ನಡಿಗ ಪ್ರಶಸ್ತಿ: ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌ನಿಂದ ಗೌರವ

ರಾಜ್ಯದ 27 ಸಾಧಕರಿಗೆ ಸುವರ್ಣ ಕನ್ನಡಿಗ ಪ್ರಶಸ್ತಿ: ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌ನಿಂದ ಗೌರವ

Published : Mar 14, 2025, 12:04 PM ISTUpdated : Mar 14, 2025, 12:15 PM IST

ಬಡ ರೋಗಿಗಳ ಶುಶ್ರೂಷೆಗೆ ಜೀವನ ಮುಡುಪಿಟ್ಟ ವೈದ್ಯರು, ಅಕ್ಷರ ಜ್ಞಾನ ಉಣಬಡಿಸಿದ ಅಧ್ಯಾಪಕರು ಸೇರಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ರಾಜ್ಯದ 27 ಸಾಧಕರಿಗೆ ಕನ್ನಡಪ್ರಭ ಹಾಗೂ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ‘ಸುವರ್ಣ ಕನ್ನಡಿಗ- 2025 ಪ್ರಶಸ್ತಿ’ ನೀಡಿ ಗೌರವಿಸಿದೆ. 

ಬೆಂಗಳೂರು (ಮಾ.14): ಬಡ ರೋಗಿಗಳ ಶುಶ್ರೂಷೆಗೆ ಜೀವನ ಮುಡುಪಿಟ್ಟ ವೈದ್ಯರು, ಅಕ್ಷರ ಜ್ಞಾನ ಉಣಬಡಿಸಿದ ಅಧ್ಯಾಪಕರು ಸೇರಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ರಾಜ್ಯದ 27 ಸಾಧಕರಿಗೆ ಕನ್ನಡಪ್ರಭ ಹಾಗೂ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ‘ಸುವರ್ಣ ಕನ್ನಡಿಗ- 2025 ಪ್ರಶಸ್ತಿ’ ನೀಡಿ ಗೌರವಿಸಿದೆ. ಮೂವರು ಸಾಧಕರಿಗೆ ಜೀವಮಾನ ಪ್ರಶಸ್ತಿ ಅರ್ಪಿಸುವ ಮೂಲಕ ಮತ್ತೊಮ್ಮೆ ತನ್ನ ಸಾಮಾಜಿಕ ಜವಾಬ್ದಾರಿ ಸಾಬೀತು ಮಾಡಿದೆ. ನಾಡಿನ ಪ್ರತಿಷ್ಠಿತ ಸುದ್ದಿಸಂಸ್ಥೆಯಾಗಿರುವ ಕನ್ನಡಪ್ರಭ ಹಾಗೂ ಏಷ್ಯಾನೆಟ್‌ ಸುರ್ಣನ್ಯೂಸ್‌ ಮೂರನೇ ಬಾರಿಗೆ ಸುವರ್ಣ ಕನ್ನಡಿಗ ಪ್ರಶಸ್ತಿ ಕೊಡುವ ಮೂಲಕ ಪ್ರಚಾರದ ಹಂಗಿಲ್ಲದೆ, ತಮ್ಮ ಜವಾಬ್ದಾರಿ ಅರಿತು ತೆರೆಮರೆಯಲ್ಲಿ ಸಮಾಜದ ಏಳಿಗೆಗೆ ಶ್ರಮಿಸುತ್ತಿರುವ ಸಾಧಕರ ಸಾಧನೆಯನ್ನು ಸಮಾಜಕ್ಕೆ ಪರಿಚಯಿಸುವ ಮಹತ್ತರ ಕೆಲಸ ಮಾಡಿವೆ.

ಬೆಂಗಳೂರಿನ ಖಾಸಗಿ ಹೋಟೆಲ್‌ನ ಸಭಾಂಗಣದಲ್ಲಿ ಖ್ಯಾತ ಕಲಾವಿದರ ನೃತ್ಯ, ಸಂಗೀತ ಪ್ರದರ್ಶನದೊಂದಿಗೆ ನಡೆದ ವರ್ಣರಂಜಿತ ಸಮಾರಂಭದಲ್ಲಿ ಗಣ್ಯರು, ತಮ್ಮ ಕುಟುಂಬ ಸದಸ್ಯರು, ಸ್ನೇಹಿತರು ಮತ್ತು ಹಿತೈಷಿಗಳ ಸಮ್ಮುಖದಲ್ಲಿ ‘ಸುವರ್ಣ ಕನ್ನಡಿಗ’ ಪ್ರಶಸ್ತಿ ಸ್ವೀಕರಿಸಿದ ಸಾಧಕರು ಸಂತಸ ಪಟ್ಟರು. ಜೊತೆಗೆ ಸಾಧಕರ ಕುಟುಂಬದ ಸದಸ್ಯರು, ಸ್ನೇಹಿತರು, ಹಿತೈಷಿಗಳು ಕನ್ನಡಪ್ರಭ ಮತ್ತು ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಕೊಡಮಾಡಿದ ‘ಸುವರ್ಣ ಕನ್ನಡಿಗ 2025’ ಪ್ರಶಸ್ತಿ, ಉಡುಗೊರೆಯೊಂದಿಗೆ ಫೋಟೋ ಕ್ಲಿಕ್ಕಿಸಿಕೊಂಡು ಹೆಮ್ಮೆಪಟ್ಟರು. ಮೈಸೂರು-ಕೊಡಗು ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್, ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಡಿ.ಕುಂಬಾರ, ಖ್ಯಾತ ನಟಿ, ಕಿರುತೆರೆ ನಿರ್ಮಾಪಕಿ ಶೃತಿ ನಾಯ್ಡು, ಕನ್ನಡಪ್ರಭ ಮತ್ತು ಏಷಿಯಾನೆಟ್‌ ಸುವರ್ಣ ನ್ಯೂಸ್‌ ಪ್ರಧಾನ ಸಂಪಾದಕ ರವಿ ಹೆಗಡೆ ಅವರು ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!