ರಾಜ್ಯದ 27 ಸಾಧಕರಿಗೆ ಸುವರ್ಣ ಕನ್ನಡಿಗ ಪ್ರಶಸ್ತಿ: ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌ನಿಂದ ಗೌರವ

ರಾಜ್ಯದ 27 ಸಾಧಕರಿಗೆ ಸುವರ್ಣ ಕನ್ನಡಿಗ ಪ್ರಶಸ್ತಿ: ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌ನಿಂದ ಗೌರವ

Published : Mar 14, 2025, 12:04 PM ISTUpdated : Mar 14, 2025, 12:15 PM IST

ಬಡ ರೋಗಿಗಳ ಶುಶ್ರೂಷೆಗೆ ಜೀವನ ಮುಡುಪಿಟ್ಟ ವೈದ್ಯರು, ಅಕ್ಷರ ಜ್ಞಾನ ಉಣಬಡಿಸಿದ ಅಧ್ಯಾಪಕರು ಸೇರಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ರಾಜ್ಯದ 27 ಸಾಧಕರಿಗೆ ಕನ್ನಡಪ್ರಭ ಹಾಗೂ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ‘ಸುವರ್ಣ ಕನ್ನಡಿಗ- 2025 ಪ್ರಶಸ್ತಿ’ ನೀಡಿ ಗೌರವಿಸಿದೆ. 

ಬೆಂಗಳೂರು (ಮಾ.14): ಬಡ ರೋಗಿಗಳ ಶುಶ್ರೂಷೆಗೆ ಜೀವನ ಮುಡುಪಿಟ್ಟ ವೈದ್ಯರು, ಅಕ್ಷರ ಜ್ಞಾನ ಉಣಬಡಿಸಿದ ಅಧ್ಯಾಪಕರು ಸೇರಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ರಾಜ್ಯದ 27 ಸಾಧಕರಿಗೆ ಕನ್ನಡಪ್ರಭ ಹಾಗೂ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ‘ಸುವರ್ಣ ಕನ್ನಡಿಗ- 2025 ಪ್ರಶಸ್ತಿ’ ನೀಡಿ ಗೌರವಿಸಿದೆ. ಮೂವರು ಸಾಧಕರಿಗೆ ಜೀವಮಾನ ಪ್ರಶಸ್ತಿ ಅರ್ಪಿಸುವ ಮೂಲಕ ಮತ್ತೊಮ್ಮೆ ತನ್ನ ಸಾಮಾಜಿಕ ಜವಾಬ್ದಾರಿ ಸಾಬೀತು ಮಾಡಿದೆ. ನಾಡಿನ ಪ್ರತಿಷ್ಠಿತ ಸುದ್ದಿಸಂಸ್ಥೆಯಾಗಿರುವ ಕನ್ನಡಪ್ರಭ ಹಾಗೂ ಏಷ್ಯಾನೆಟ್‌ ಸುರ್ಣನ್ಯೂಸ್‌ ಮೂರನೇ ಬಾರಿಗೆ ಸುವರ್ಣ ಕನ್ನಡಿಗ ಪ್ರಶಸ್ತಿ ಕೊಡುವ ಮೂಲಕ ಪ್ರಚಾರದ ಹಂಗಿಲ್ಲದೆ, ತಮ್ಮ ಜವಾಬ್ದಾರಿ ಅರಿತು ತೆರೆಮರೆಯಲ್ಲಿ ಸಮಾಜದ ಏಳಿಗೆಗೆ ಶ್ರಮಿಸುತ್ತಿರುವ ಸಾಧಕರ ಸಾಧನೆಯನ್ನು ಸಮಾಜಕ್ಕೆ ಪರಿಚಯಿಸುವ ಮಹತ್ತರ ಕೆಲಸ ಮಾಡಿವೆ.

ಬೆಂಗಳೂರಿನ ಖಾಸಗಿ ಹೋಟೆಲ್‌ನ ಸಭಾಂಗಣದಲ್ಲಿ ಖ್ಯಾತ ಕಲಾವಿದರ ನೃತ್ಯ, ಸಂಗೀತ ಪ್ರದರ್ಶನದೊಂದಿಗೆ ನಡೆದ ವರ್ಣರಂಜಿತ ಸಮಾರಂಭದಲ್ಲಿ ಗಣ್ಯರು, ತಮ್ಮ ಕುಟುಂಬ ಸದಸ್ಯರು, ಸ್ನೇಹಿತರು ಮತ್ತು ಹಿತೈಷಿಗಳ ಸಮ್ಮುಖದಲ್ಲಿ ‘ಸುವರ್ಣ ಕನ್ನಡಿಗ’ ಪ್ರಶಸ್ತಿ ಸ್ವೀಕರಿಸಿದ ಸಾಧಕರು ಸಂತಸ ಪಟ್ಟರು. ಜೊತೆಗೆ ಸಾಧಕರ ಕುಟುಂಬದ ಸದಸ್ಯರು, ಸ್ನೇಹಿತರು, ಹಿತೈಷಿಗಳು ಕನ್ನಡಪ್ರಭ ಮತ್ತು ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಕೊಡಮಾಡಿದ ‘ಸುವರ್ಣ ಕನ್ನಡಿಗ 2025’ ಪ್ರಶಸ್ತಿ, ಉಡುಗೊರೆಯೊಂದಿಗೆ ಫೋಟೋ ಕ್ಲಿಕ್ಕಿಸಿಕೊಂಡು ಹೆಮ್ಮೆಪಟ್ಟರು. ಮೈಸೂರು-ಕೊಡಗು ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್, ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಡಿ.ಕುಂಬಾರ, ಖ್ಯಾತ ನಟಿ, ಕಿರುತೆರೆ ನಿರ್ಮಾಪಕಿ ಶೃತಿ ನಾಯ್ಡು, ಕನ್ನಡಪ್ರಭ ಮತ್ತು ಏಷಿಯಾನೆಟ್‌ ಸುವರ್ಣ ನ್ಯೂಸ್‌ ಪ್ರಧಾನ ಸಂಪಾದಕ ರವಿ ಹೆಗಡೆ ಅವರು ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!