Suvarna Special: ಸಿದ್ದುVs ಎಚ್‌ಡಿಕೆ ಮಾಜಿ ಸಿಎಂಗಳ ಮಧ್ಯೆ ಆಣೆ ಪ್ರಮಾಣ ಯುದ್ಧ!

Suvarna Special: ಸಿದ್ದುVs ಎಚ್‌ಡಿಕೆ ಮಾಜಿ ಸಿಎಂಗಳ ಮಧ್ಯೆ ಆಣೆ ಪ್ರಮಾಣ ಯುದ್ಧ!

Published : Apr 21, 2022, 07:29 PM IST

ಕರ್ನಾಟಕದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಎಚ್ ಡಿ ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ನಡುವಿನ ಆಣೆ ಪ್ರಮಾಣ ಯುದ್ಧ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಮುಂದಿನ ಚುನಾವಣೆಯಲ್ಲಿ ಕುಮಾರಸ್ವಾಮಿ ಬಿಜೆಪಿ ಜೊತೆ ಕೈ ಜೋಡಿಸಲ್ಲ ಎಂದು ತಂದೆ ದೇವೇಗೌಡರ ಮೇಲೆ ಆಣೆ ಮಾಡಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ ಮಾತಿಗೆ ಕುಮಾರಸ್ವಾಮಿ ಕೆಂಡಾಮಂಡಲರಾಗಿದ್ದರು.

ಬೆಂಗಳೂರು (ಏ.21): ರಾಜ್ಯದ ಇಬ್ಬರು ಮಾಜಿ ಸಿಎಂಗಳ ನಡುವಿನ ಆಣೆ ಪ್ರಮಾಣಗಳ (Oath) ಯುದ್ಧ ರಾಜಕೀಯ ವಲಯದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿತ್ತು. ಬಿಜೆಪಿ (BJP) ಜೊತೆ ಹೋಗಲ್ಲ ಎಂದು ದೇವೇಗೌಡರ ಮೇಲೆ ಕುಮಾರಸ್ವಾಮಿ (Hd Kumaraswamy) ಆಣೆ ಮಾಡಲಿ ಎಂದು ಸಿದ್ಧರಾಮಯ್ಯ(Siddaramaiah) ಹೇಳಿದ್ದೇ ತಡ, ಕುಮಾರಸ್ವಾಮಿ ನಖಶಿಖಾಂತ ಉರಿದುಹೋಗಿದ್ದರು. ಆಣೆ ಮಾಡು ಅನ್ನೋಕೆ ಅವನು ಯಾವೂರ ದಾಸಯ್ಯ ಎಂದು ಏಕವಚನದಲ್ಲಿಯೇ ಸಿದ್ಧರಾಮಯ್ಯ ಅವರಿಗೆ ಜಾಡಿಸಿದ್ದರು.

ಸಿದ್ಧರಾಮಯ್ಯ ಅಪ್ಪನ ಮೇಲೆ ಆಣೆ ಮಾಡ್ತೀರಾ ಎಂದು ಕೇಳಿದ್ದಕ್ಕದೆ, ಪ್ರತಿ ಸವಾಲ್ ಹಾಕಿದ ಕುಮಾರಸ್ವಾಮಿ ಹಾಗಿದ್ದರೆ ನೀವು ಉಪಚುನಾವಣೆಗಳಲ್ಲಿ ಕಾಂಗ್ರೆಸ್ (Congress) ಪಕ್ಷವನ್ನು ಸೋಲಿಸಲು ಬಿಜೆಪಿಯಿಂದ ಹಣ ಪಡೆದಿಲ್ಲ ಎಂದು ಮಗನ ಮೇಲೆ ಆಣೆ ಮಾಡಲು ಸಿದ್ಧವಿದ್ದೀರಾ ಎಂದು ಕೇಳಿದ್ದರು. ಬದ್ಧ ವೈರಿಗಳ ನಡುವೆ ಬುಗಿಲೆದ್ದ ಅಸಮಾಧಾನದ ಹಿಂದಿನ ಒಳನೋಟ.

ಆಣೆ ಮಾಡು ಎನ್ನೋಕೆ ಅವನು ಯಾವೂರ ದಾಸಯ್ಯ?: ಸಿದ್ದು ವಿರುದ್ಧ ಎಚ್‌ಡಿಕೆ ಕಿಡಿ

ಬಿಜೆಪಿ ಜೊತೆ ಒಳ ಒಪ್ಪಂದ ಮಾಡಿಕೊಂಡು ಬಿಜೆಪಿ ಬಳಿ ಹಣ ಪಡೆದು, ಅಪರೇಷನ್‌ ಕಮಲ ನಡೆಸಲು ಬೆಂಬಲ ನೀಡಿ, ಆಪರೇಷನ್‌ ಕಮಲದಿಂದ ಬಂದು ಚುನಾವಣೆ ಎದುರಿಸದವರಿಗೆ ಒಳಗಿಂದೊಳಗೆ ಹಿಂಬದಿಯಲ್ಲಿ ಸಿದ್ದರಾಮಯ್ಯ ಬೆಂಬಲ ನೀಡಿದರು ಎಂದರು. ಸಿದ್ದರಾಮಯ್ಯನ ದುರಾಡಳಿತದ ಕಾರಣ ಚಿಕ್ಕಮಗಳೂರು ಡಿವೈಎಸ್ಪಿ ಕಲ್ಲಪ್ಪ ಹಂಡಿಬಾಗ್‌ ಆತ್ಮಹತ್ಯೆ ಮಾಡಿಕೊಂಡರು. ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಮಾಡಿಕೊಳ್ಳಲು ಸಿದ್ದರಾಮಯ್ಯ ಆಡಳಿತ ಕಾರಣ. ಅದನ್ನು ಬಿಟ್ಟು ಇಂದು ಬರಿ ಸಂತೊಷ್‌ ಆತ್ಮಹತ್ಯೆ ಪ್ರಕರಣದ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದ್ದರು.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more