ಮಳಲಿ ಮಸೀದಿಯಲ್ಲಿ ಗೋಚರವಾಗಿರುವುದು ವೀರಶೈವ ಮಠದ ಕುರುಹುವೇ?

ಮಳಲಿ ಮಸೀದಿಯಲ್ಲಿ ಗೋಚರವಾಗಿರುವುದು ವೀರಶೈವ ಮಠದ ಕುರುಹುವೇ?

Published : May 26, 2022, 11:17 AM IST

ಮಳಲಿ ಶ್ರೀರಾಮಾಂಜನೇಯ ಭಜನಾ ಮಂದಿರದಲ್ಲಿ ನಡೆದ ತಾಂಬೂಲ ಪ್ರಶ್ನೆಯಲ್ಲಿ ಕಂಡುಬಂದಂತೆ ಮಳಲಿ ಮಸೀದಿಯಲ್ಲಿ ದೇವ ಸಾನ್ನಿಧ್ಯ ಇದೆ, ಅದು ಗುರುಮಠ ಎಂಬ ವಿಚಾರಕ್ಕೆ ಸಂಬಂಧಿಸಿ ಗುರುಪುರ ವೀರಶೈವ ಮಠದ ರುದ್ರಮುನಿ ಸ್ವಾಮೀಜಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
 

ಮಂಗಳೂರು ( ಮೇ. 26): ಮಳಲಿ ಶ್ರೀರಾಮಾಂಜನೇಯ ಭಜನಾ ಮಂದಿರದಲ್ಲಿ ನಡೆದ ತಾಂಬೂಲ ಪ್ರಶ್ನೆಯಲ್ಲಿ ಕಂಡುಬಂದಂತೆ ಮಳಲಿ ಮಸೀದಿಯಲ್ಲಿ ದೇವ ಸಾನ್ನಿಧ್ಯ ಇದೆ, ಅದು ಗುರುಮಠ ಎಂಬ ವಿಚಾರಕ್ಕೆ ಸಂಬಂಧಿಸಿ ಗುರುಪುರ ವೀರಶೈವ ಮಠದ ರುದ್ರಮುನಿ ಸ್ವಾಮೀಜಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಮಳಲಿಯಲ್ಲಿ ಶೈವ ಸನ್ನಿಧಾನ ಪತ್ತೆ ವಿಚಾರಕ್ಕೆ ಸಂಬಂಧಿಸಿ ಇದು ವೀರಶೈವರ ಪ್ರಾಬಲ್ಯದ ಕ್ಷೇತ್ರ ಎಂಬುದು ಸ್ಪಷ್ಟವಾಗಿದೆ. ಕಾಲಾಂತರದಲ್ಲಿ ಸಾಕಷ್ಟುಭೂಮಿಯನ್ನು ಇಲ್ಲಿ ನಾವು ಕಳೆದುಕೊಂಡಿದ್ದೇವೆ. ಕಳೆದುಹೋದ ವೀರಶೈವ ಮಠಗಳ ಪಟ್ಟಿಯಲ್ಲಿ ಮಳಲಿಯ ಮಠವೂ ಇತ್ತು. ಮಳಲಿಯಲ್ಲಿ ನಮ್ಮ ಮಠ ಇದ್ದ ಬಗ್ಗೆ ಮುಂಚೆಯೇ ಗೊತ್ತಿತ್ತು. ಈ ಬಗ್ಗೆ ಅನಗತ್ಯ ವಿವಾದ ಬೇಡ ಎಂಬ ಕಾರಣಕ್ಕೆ ನಾವು ಸುಮ್ಮನಿದ್ದೆವು. ಮುಂದಿನ ದಿನಗಳಲ್ಲಿ ಜನರು ಕೈಗೊಳ್ಳುವ ನಿರ್ಧಾರಕ್ಕೆ ನಮ್ಮ ಬೆಂಬಲ ಇದೆ ಎಂದಿದ್ದಾರೆ. ನಾನು ಖುದ್ದಾಗಿ ಹೋಗಿ ಮಸೀದಿಯ ಸ್ಥಳವನ್ನು ನೋಡಿಲ್ಲ. ನೀಲಕಂಠೇಶ್ವರ ವೈಭವ ಪುಸ್ತಕದಲ್ಲಿ ಇದರ ಉಲ್ಲೇಖ ಇದೆ. 

ಕೆಳದಿ ಅರಸರ ಆಳ್ವಿಕೆ ಸಮಯದಲ್ಲಿ ಇವೆಲ್ಲ ಮಠದ ಆಸ್ತಿಯಾಗಿತ್ತು. ಮಠಕ್ಕೆ ಬೇಕಾದ ಸಾಕಷ್ಟು ಭೂಮಿಯನ್ನು ದಾನವಾಗಿ ಕೊಟ್ಟಿದ್ದರು. ಇಡೀ ಗ್ರಾಮವನ್ನು ಮಠಕ್ಕೆ ಉಂಬಳಿ ಕೊಟ್ಟಿದ್ದರು. ಮಳಲಿ ಮಠಕ್ಕೂ ಅನೇಕ ಭೂಮಿಯನ್ನು ಉಂಬಳಿಯಾಗಿ ಕೊಟ್ಟಿದ್ದರು. ಮಂಗಳೂರು-ಉಡುಪಿ ಎರಡು ಜಿಲ್ಲೆಗಳಲ್ಲಿ ಶೈವ ಸಂಪ್ರದಾಯ ಪ್ರಬಲವಾಗಿತ್ತು. ಇಲ್ಲಿ ಒಟ್ಟು ನಮ್ಮ 64 ಮಠಗಳು ಇದ್ದವು. ಈಗ ಕೇವಲ 21 ಮಠಗಳು ಉಳಿದುಕೊಂಡಿದೆ. ಅಲ್ಲಿ ಯಾವುದೇ ವೈಷ್ಣವ ಮತ ಇರಲಿಲ್ಲ. ಮಳಲಿ ಎನ್ನುವ ಊರಿನಲ್ಲಿ ವೀರಶೈವ ಮಠವೇ ಇತ್ತು. ಸಹಮತದಿಂದ ಬಿಟ್ಟುಕೊಟ್ಟರೆ ಉತ್ತಮ. ಸಮಾಜ, ಗ್ರಾಮದವರು ತೆಗೆದುಕೊಳ್ಳುವ ತೀರ್ಮಾನಕ್ಕೆ ನನ್ನ ಸಹಮತ ಇದೆ ಎಂದರು.
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more