Shivamogga Riots: ವ್ಯಾಪಕ ಹಿಂಸೆ, 2 ದಿನ ನಿಷೇಧಾಜ್ಞೆ ವಿಸ್ತರಣೆ, ಶಾಲಾ-ಕಾಲೇಜುಗಳಿಗೂ ರಜೆ

Shivamogga Riots: ವ್ಯಾಪಕ ಹಿಂಸೆ, 2 ದಿನ ನಿಷೇಧಾಜ್ಞೆ ವಿಸ್ತರಣೆ, ಶಾಲಾ-ಕಾಲೇಜುಗಳಿಗೂ ರಜೆ

Published : Feb 22, 2022, 09:46 AM IST

 ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆಯನ್ನು ಎರಡು ದಿನ ವಿಸ್ತರಿಸಲಾಗಿದೆ. ಇದೇ ವೇಳೆ, ಸೋಮವಾರ ರಾತ್ರಿ 10ರಿಂದ ಬುಧವಾರ ಬೆಳಗ್ಗೆ 6ರವರೆಗೆ ಕರ್ಫ್ಯೂ ಘೋಷಿಸಲಾಗಿದೆ. ಶಾಲಾ-ಕಾಲೇಜುಗಳಿಗೂ ರಜೆ ಮುಂದುವರಿಸಲಾಗಿದೆ. 

 ಶಿವಮೊಗ್ಗ (ಫೆ. 22): ಬಜರಂಗದಳ ಕಾರ್ಯಕರ್ತ ಹರ್ಷ ಎಂಬಾತನ ಬರ್ಬರ ಹತ್ಯೆ ಹಿನ್ನೆಲೆಯಲ್ಲಿ ಇಡೀ ಶಿವಮೊಗ್ಗ ನಗರ ಸೋಮವಾರ ಹೊತ್ತಿ ಉರಿದಿದೆ. ದಿನವಿಡೀ ಉದ್ರಿಕ್ತ ಗುಂಪುಗಳು ಕಂಡ ಕಂಡಲ್ಲಿ ಆಸ್ತಿಪಾಸ್ತಿಗಳ ಮೇಲೆ ಕಲ್ಲು ತೂರಿ, ವಾಹನಗಳು, ಅಂಗಡಿಗಳಿಗೆ ಬೆಂಕಿ ಹಚ್ಚುವ ಮೂಲಕ ಹಿಂಸಾಚಾರಕ್ಕಿಳಿದಿದ್ದು, ಈ ವೇಳೆ 25ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ನಿಷೇಧಾಜ್ಞೆ ನಡುವೆಯೇ ನಡೆದ ಈ ಭಾರೀ ಹಿಂಸಾಚಾರ ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ

ಘಟನೆ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆಯನ್ನು ಎರಡು ದಿನ ವಿಸ್ತರಿಸಲಾಗಿದೆ. ಇದೇ ವೇಳೆ, ಸೋಮವಾರ ರಾತ್ರಿ 10ರಿಂದ ಬುಧವಾರ ಬೆಳಗ್ಗೆ 6ರವರೆಗೆ ಕರ್ಫ್ಯೂ ಘೋಷಿಸಲಾಗಿದೆ. ಶಾಲಾ-ಕಾಲೇಜುಗಳಿಗೂ ರಜೆ ಮುಂದುವರಿಸಲಾಗಿದೆ. ಈ ಹಿಂದೆ ಜಿಲ್ಲೆಯಲ್ಲಿ ಕೆಲಸ ಮಾಡಿದ್ದ ಪೊಲೀಸ್‌ ಅಧಿಕಾರಿಗಳು, ಹೆಚ್ಚುವರಿ ಪೊಲೀಸ್‌ ಸಿಬ್ಬಂದಿಯನ್ನು ಕರೆಸಿಕೊಂಡು ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಶಿವಮೊಗ್ಗ ಹಿಂಸಾಚಾರದ ಬೆನ್ನಲ್ಲೇ ದಕ್ಷಿಣ ಕನ್ನಡ ಸೇರಿ ರಾಜ್ಯದ ಹಲವು ಸೂಕ್ಷ್ಮ ಪ್ರದೇಶಗಳಲ್ಲಿ ಬಂದೋಬಸ್ತ್ ಬಿಗಿಗೊಳಿಸಲಾಗಿದೆ.


 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more