Shivamogga Riots: ವ್ಯಾಪಕ ಹಿಂಸೆ, 2 ದಿನ ನಿಷೇಧಾಜ್ಞೆ ವಿಸ್ತರಣೆ, ಶಾಲಾ-ಕಾಲೇಜುಗಳಿಗೂ ರಜೆ

Shivamogga Riots: ವ್ಯಾಪಕ ಹಿಂಸೆ, 2 ದಿನ ನಿಷೇಧಾಜ್ಞೆ ವಿಸ್ತರಣೆ, ಶಾಲಾ-ಕಾಲೇಜುಗಳಿಗೂ ರಜೆ

Published : Feb 22, 2022, 09:46 AM IST

 ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆಯನ್ನು ಎರಡು ದಿನ ವಿಸ್ತರಿಸಲಾಗಿದೆ. ಇದೇ ವೇಳೆ, ಸೋಮವಾರ ರಾತ್ರಿ 10ರಿಂದ ಬುಧವಾರ ಬೆಳಗ್ಗೆ 6ರವರೆಗೆ ಕರ್ಫ್ಯೂ ಘೋಷಿಸಲಾಗಿದೆ. ಶಾಲಾ-ಕಾಲೇಜುಗಳಿಗೂ ರಜೆ ಮುಂದುವರಿಸಲಾಗಿದೆ. 

 ಶಿವಮೊಗ್ಗ (ಫೆ. 22): ಬಜರಂಗದಳ ಕಾರ್ಯಕರ್ತ ಹರ್ಷ ಎಂಬಾತನ ಬರ್ಬರ ಹತ್ಯೆ ಹಿನ್ನೆಲೆಯಲ್ಲಿ ಇಡೀ ಶಿವಮೊಗ್ಗ ನಗರ ಸೋಮವಾರ ಹೊತ್ತಿ ಉರಿದಿದೆ. ದಿನವಿಡೀ ಉದ್ರಿಕ್ತ ಗುಂಪುಗಳು ಕಂಡ ಕಂಡಲ್ಲಿ ಆಸ್ತಿಪಾಸ್ತಿಗಳ ಮೇಲೆ ಕಲ್ಲು ತೂರಿ, ವಾಹನಗಳು, ಅಂಗಡಿಗಳಿಗೆ ಬೆಂಕಿ ಹಚ್ಚುವ ಮೂಲಕ ಹಿಂಸಾಚಾರಕ್ಕಿಳಿದಿದ್ದು, ಈ ವೇಳೆ 25ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ನಿಷೇಧಾಜ್ಞೆ ನಡುವೆಯೇ ನಡೆದ ಈ ಭಾರೀ ಹಿಂಸಾಚಾರ ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ

ಘಟನೆ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆಯನ್ನು ಎರಡು ದಿನ ವಿಸ್ತರಿಸಲಾಗಿದೆ. ಇದೇ ವೇಳೆ, ಸೋಮವಾರ ರಾತ್ರಿ 10ರಿಂದ ಬುಧವಾರ ಬೆಳಗ್ಗೆ 6ರವರೆಗೆ ಕರ್ಫ್ಯೂ ಘೋಷಿಸಲಾಗಿದೆ. ಶಾಲಾ-ಕಾಲೇಜುಗಳಿಗೂ ರಜೆ ಮುಂದುವರಿಸಲಾಗಿದೆ. ಈ ಹಿಂದೆ ಜಿಲ್ಲೆಯಲ್ಲಿ ಕೆಲಸ ಮಾಡಿದ್ದ ಪೊಲೀಸ್‌ ಅಧಿಕಾರಿಗಳು, ಹೆಚ್ಚುವರಿ ಪೊಲೀಸ್‌ ಸಿಬ್ಬಂದಿಯನ್ನು ಕರೆಸಿಕೊಂಡು ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಶಿವಮೊಗ್ಗ ಹಿಂಸಾಚಾರದ ಬೆನ್ನಲ್ಲೇ ದಕ್ಷಿಣ ಕನ್ನಡ ಸೇರಿ ರಾಜ್ಯದ ಹಲವು ಸೂಕ್ಷ್ಮ ಪ್ರದೇಶಗಳಲ್ಲಿ ಬಂದೋಬಸ್ತ್ ಬಿಗಿಗೊಳಿಸಲಾಗಿದೆ.


 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more