ರಸ್ತೆ ಇಲ್ಲದೇ ರೋಗಿಯನ್ನು 4 ಕಿ.ಮೀ ಜೋಲಿಯಲ್ಲೇ ಹೊತ್ತೊಯ್ದ ಕಳಸ ಗ್ರಾಮಸ್ಥರು!

ರಸ್ತೆ ಇಲ್ಲದೇ ರೋಗಿಯನ್ನು 4 ಕಿ.ಮೀ ಜೋಲಿಯಲ್ಲೇ ಹೊತ್ತೊಯ್ದ ಕಳಸ ಗ್ರಾಮಸ್ಥರು!

Published : Jul 13, 2023, 11:46 AM IST

ಸರಿಯಾದ ರಸ್ತೆ ಇಲ್ಲದೆ, ಅಂಬ್ಯುಲೆನ್ಸ್‌ ಬಾರದ ಪರಿಣಾಮ ಗ್ರಾಮಸ್ಥರೇ ಜೋಳಿಗೆ ಕಟ್ಟಿಅನಾರೋಗ್ಯ ಪೀಡಿತ ಶೇಷಮ್ಮ ಎಂಬ ವೃದ್ಧೆಯನ್ನು 3 ಕಿ.ಮೀ.ವರೆಗೂ ಹೊತ್ತು ತಂದು ಆಸ್ಪತ್ರೆಗೆ ದಾಖಲಿಸಿದ ಘಟನೆ ಕಳಸದ ಕಳ್ಕೋಡು ಗ್ರಾಮದಲ್ಲಿ ಜರುಗಿದೆ. 

ಚಿಕ್ಕಮಗಳೂರು (ಜು.13): ಸರಿಯಾದ ರಸ್ತೆ ಇಲ್ಲದೆ, ಅಂಬ್ಯುಲೆನ್ಸ್‌ ಬಾರದ ಪರಿಣಾಮ ಗ್ರಾಮಸ್ಥರೇ ಜೋಳಿಗೆ ಕಟ್ಟಿಅನಾರೋಗ್ಯ ಪೀಡಿತ ಶೇಷಮ್ಮ ಎಂಬ ವೃದ್ಧೆಯನ್ನು 3 ಕಿ.ಮೀ.ವರೆಗೂ ಹೊತ್ತು ತಂದು ಆಸ್ಪತ್ರೆಗೆ ದಾಖಲಿಸಿದ ಘಟನೆ ಕಳಸದ ಕಳ್ಕೋಡು ಗ್ರಾಮದಲ್ಲಿ ಜರುಗಿದೆ. ಹತ್ತಾರು ಬಾರಿ ರಸ್ತೆ ನಿರ್ಮಿಸಲು ಗ್ರಾಮಸ್ಥರು ಮನವಿ ನೀಡಿದ್ದರೂ ಪ್ರಯೋಜನವಾಗಿಲ್ಲ. ಕಲ್ಕೋಡು ಗ್ರಾಮದ ಶೇಷಮ್ಮ (70) ಎಂಬುವವರು ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಸೂಕ್ತ ವಾಹನ ವ್ಯವಸ್ಥೆ ಇಲ್ಲದೆ ಅವರ ಸಂಬಂಧಿಕರು ಜೋಳಿಗೆ ಕಟ್ಟಿಕೊಂಡೇ ಕಾಡಿನ ದಾರಿಯಲ್ಲಿ ಒಂದು ಕಿಮೀ ಹೊತ್ತು ಕೊಂಡು ಸಾಗಿ ಕಳಸ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಳಸ ತಾಲೂಕಿನ ಕಳ್ಕೊಡು, ಈಚಲುಹೊಳೆ ಎಂಬಲ್ಲಿ ಹತ್ತಕ್ಕೂ ಹೆಚ್ಚು ಕುಟುಂಬಗಳು ವಾಸವಾಗಿದ್ದು, ಇವರಿಗೆ ಸಂಚಾರಕ್ಕೆ ಯೋಗ್ಯವಾದ ರಸ್ತೆಮಾರ್ಗವೇ ಇಲ್ಲ. ಗ್ರಾಮಸ್ಥರು ತಮ್ಮ ಸಮಸ್ಯೆ ಪರಿಹಾರಕ್ಕೆ ಹಿಂದೆ ಹತ್ತಾರು ಬಾರಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದರೂ ಕಿವಿಗೊಡದ ಜಿಲ್ಲಾಡಳಿತ, ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more