ರಸ್ತೆ ಇಲ್ಲದೇ ರೋಗಿಯನ್ನು 4 ಕಿ.ಮೀ ಜೋಲಿಯಲ್ಲೇ ಹೊತ್ತೊಯ್ದ ಕಳಸ ಗ್ರಾಮಸ್ಥರು!

ರಸ್ತೆ ಇಲ್ಲದೇ ರೋಗಿಯನ್ನು 4 ಕಿ.ಮೀ ಜೋಲಿಯಲ್ಲೇ ಹೊತ್ತೊಯ್ದ ಕಳಸ ಗ್ರಾಮಸ್ಥರು!

Published : Jul 13, 2023, 11:46 AM IST

ಸರಿಯಾದ ರಸ್ತೆ ಇಲ್ಲದೆ, ಅಂಬ್ಯುಲೆನ್ಸ್‌ ಬಾರದ ಪರಿಣಾಮ ಗ್ರಾಮಸ್ಥರೇ ಜೋಳಿಗೆ ಕಟ್ಟಿಅನಾರೋಗ್ಯ ಪೀಡಿತ ಶೇಷಮ್ಮ ಎಂಬ ವೃದ್ಧೆಯನ್ನು 3 ಕಿ.ಮೀ.ವರೆಗೂ ಹೊತ್ತು ತಂದು ಆಸ್ಪತ್ರೆಗೆ ದಾಖಲಿಸಿದ ಘಟನೆ ಕಳಸದ ಕಳ್ಕೋಡು ಗ್ರಾಮದಲ್ಲಿ ಜರುಗಿದೆ. 

ಚಿಕ್ಕಮಗಳೂರು (ಜು.13): ಸರಿಯಾದ ರಸ್ತೆ ಇಲ್ಲದೆ, ಅಂಬ್ಯುಲೆನ್ಸ್‌ ಬಾರದ ಪರಿಣಾಮ ಗ್ರಾಮಸ್ಥರೇ ಜೋಳಿಗೆ ಕಟ್ಟಿಅನಾರೋಗ್ಯ ಪೀಡಿತ ಶೇಷಮ್ಮ ಎಂಬ ವೃದ್ಧೆಯನ್ನು 3 ಕಿ.ಮೀ.ವರೆಗೂ ಹೊತ್ತು ತಂದು ಆಸ್ಪತ್ರೆಗೆ ದಾಖಲಿಸಿದ ಘಟನೆ ಕಳಸದ ಕಳ್ಕೋಡು ಗ್ರಾಮದಲ್ಲಿ ಜರುಗಿದೆ. ಹತ್ತಾರು ಬಾರಿ ರಸ್ತೆ ನಿರ್ಮಿಸಲು ಗ್ರಾಮಸ್ಥರು ಮನವಿ ನೀಡಿದ್ದರೂ ಪ್ರಯೋಜನವಾಗಿಲ್ಲ. ಕಲ್ಕೋಡು ಗ್ರಾಮದ ಶೇಷಮ್ಮ (70) ಎಂಬುವವರು ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಸೂಕ್ತ ವಾಹನ ವ್ಯವಸ್ಥೆ ಇಲ್ಲದೆ ಅವರ ಸಂಬಂಧಿಕರು ಜೋಳಿಗೆ ಕಟ್ಟಿಕೊಂಡೇ ಕಾಡಿನ ದಾರಿಯಲ್ಲಿ ಒಂದು ಕಿಮೀ ಹೊತ್ತು ಕೊಂಡು ಸಾಗಿ ಕಳಸ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಳಸ ತಾಲೂಕಿನ ಕಳ್ಕೊಡು, ಈಚಲುಹೊಳೆ ಎಂಬಲ್ಲಿ ಹತ್ತಕ್ಕೂ ಹೆಚ್ಚು ಕುಟುಂಬಗಳು ವಾಸವಾಗಿದ್ದು, ಇವರಿಗೆ ಸಂಚಾರಕ್ಕೆ ಯೋಗ್ಯವಾದ ರಸ್ತೆಮಾರ್ಗವೇ ಇಲ್ಲ. ಗ್ರಾಮಸ್ಥರು ತಮ್ಮ ಸಮಸ್ಯೆ ಪರಿಹಾರಕ್ಕೆ ಹಿಂದೆ ಹತ್ತಾರು ಬಾರಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದರೂ ಕಿವಿಗೊಡದ ಜಿಲ್ಲಾಡಳಿತ, ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more