ಹುಲಿಗಳ ಸಂರಕ್ಷಣೆಯಲ್ಲಿ ‘ಕರ್ನಾಟಕ’ ದಿ ಬೆಸ್ಟ್‌: ಮಧ್ಯಪ್ರದೇಶ ಫಸ್ಟ್‌.. ಕರ್ನಾಟಕಕ್ಕೆ 2ನೇ ಸ್ಥಾನ !

ಹುಲಿಗಳ ಸಂರಕ್ಷಣೆಯಲ್ಲಿ ‘ಕರ್ನಾಟಕ’ ದಿ ಬೆಸ್ಟ್‌: ಮಧ್ಯಪ್ರದೇಶ ಫಸ್ಟ್‌.. ಕರ್ನಾಟಕಕ್ಕೆ 2ನೇ ಸ್ಥಾನ !

Published : Jul 30, 2023, 09:09 AM IST

ನಾಗರಹೊಳೆಯಲ್ಲಿ 149, ಬಂಡೀಪುರದಲ್ಲಿ 143 ಹುಲಿಗಳು..!
ವನ್ಯಜೀವಿ ತಜ್ಞರು ಪ್ರಕಾರ 570 ರಿಂದ 620 ಹುಲಿಗಳಿರುವ ಶಂಕೆ 
ರಾಜ್ಯವಾರು ಹುಲಿ ಗಣತಿಯಲ್ಲಿ 222 ಹುಲಿಗಳ ವ್ಯತ್ಯಾಸ..!

ಜುಲೈ 29 ಅಂತಾರಾಷ್ಟ್ರೀಯ ಹುಲಿ ದಿನ(International Tiger Day). ಪರಿಸರ ನಾಶ, ಹುಲಿಯ ಕಳ್ಳಬೇಟೆ, ಅಭಿವೃದ್ಧಿಯ ಹೆಸರಿನಲ್ಲಿ ಹುಲಿಯ ಸಂತತಿ ಅಳುವಿನಂಚಿನತ್ತ ಸಾಗುತ್ತಿದೆ. ಕ್ಷೀಣಿಸುತ್ತಿರುವ ಹುಲಿಗಳ (Tigers) ಸಂಖ್ಯೆಯ ಕುರಿತಾಗಿ ಜಾಗೃತಿ ಮೂಡಿಸಲು ಪ್ರತಿ ವರ್ಷ ಜುಲೈ 29 ರಂದು ಅಂತಾರಾಷ್ಟ್ರೀಯ ಹುಲಿ ದಿನವನ್ನು ಆಚರಿಸಲಾಗುತ್ತದೆ. ದೇಶದ ರಾಷ್ಟ್ರೀಯ ಪ್ರಾಣಿಯಾಗಿರುವ ಹುಲಿಯ ಬಗ್ಗೆ ನಾಲ್ಕು ವರ್ಷಕ್ಕೊಮ್ಮೆ  ಗಣತಿ ಮಾಡಲಾಗುತ್ತದೆ. ಮಧ್ಯಪ್ರದೇಶದಲ್ಲಿ 785, ಕರ್ನಾಟಕದಲ್ಲಿ 563, ಉತ್ತರಖಾಂಡ್‌ನಲ್ಲಿ 560 ಹುಲಿಗಳಿವೆ. 2018ರಲ್ಲಿ ಹುಲಿ ಗಣತಿ(Tiger census) ಪ್ರಕಾರ ಕರ್ನಾಟಕದಲ್ಲಿ 524 ಹುಲಿಗಳಿದ್ವು, ಮಧ್ಯ ಪ್ರದೇಶದಲ್ಲಿ 526 ಹುಲಿಗಳಿದ್ವು, ಜಸ್ಟ್ ಎರಡೇ ಎರಡು ಹುಲಿಗಳ ವ್ಯತ್ಯಾಸವಿತ್ತು. ಆದರೆ ಈ ಬಾರಿಯ ಹುಲಿ ಗಣತಿಯಲ್ಲಿ 222 ಹುಲಿಗಳ ವ್ಯತ್ಯಾಸ ಕಾಣುತ್ತಿರುವುದು. ಹಲವು ಅನುಮಾನಗಳಿಗೆ ಕಾರಣವಾಗುತ್ತಿದೆ. ರಾಜ್ಯದ ಐದು ಹುಲಿ ಸಂರಕ್ಷಿತ ತಾಣಗಳಲ್ಲಿ ನಾಗರಹೊಳೆ ಮುಂಚೂಣಿಯ ಸ್ಥಾನದಲ್ಲಿದೆ. ನಾಗರಹೊಳೆಯಲ್ಲಿ 149 ಹುಲಿಗಳಿದ್ದು, ಬಂಡೀಪುರದಲ್ಲಿ 143 ಹುಲಿಗಳಿದೆ ಅಂತ ವರದಿ ಬಿಡುಗಡೆಯಾಗಿದೆ. 

ಇದನ್ನೂ ವೀಕ್ಷಸಿ:  Today Horoscope: ತುಲಾ ರಾಶಿಯವರಿಗೆ ಇಂದು ಲಾಭದ ದಿನ..ಸಲಹೆಗಳಿಂದ ಕಾರ್ಯಕ್ಕೆ ಹಾನಿಯಾಗುವ ಸಾಧ್ಯತೆ

53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?