150 ರೂ. ಇದ್ದ ಟೊಮೆಟೋ ಬೆಲೆ 20 ರೂಪಾಯಿಗೆ ಕುಸಿತ: ಅನ್ನದಾತ ಕಂಗಾಲು

150 ರೂ. ಇದ್ದ ಟೊಮೆಟೋ ಬೆಲೆ 20 ರೂಪಾಯಿಗೆ ಕುಸಿತ: ಅನ್ನದಾತ ಕಂಗಾಲು

Published : Sep 22, 2023, 12:46 PM IST

ಮೂರು ತಿಂಗಳ ಹಿಂದೆ ಟೊಮ್ಯಾಟೊ ಅಂದರೆ ಬಂಗಾರದ ಬೆಳೆ ಆಗಿತ್ತು. ಒಂದು ಎಕರೆಯಲ್ಲಿ ಟೊಮ್ಯಾಟೊ ಬೆಳೆ ಇದ್ದರೆ ಸಾಕು ಲಕ್ಷಾಧಿಪತಿ ಎನ್ನುತ್ತಿದ್ದರು. ಆದರೆ ಈಗ ಟೊಮ್ಯಾಟೋ ದರ ಧಿಡೀರ್ ಕುಸಿತ ಆಗಿದೆ. ಭರಪೂರ ಇಳುವರಿ ಬಂದಿರುವ ರೈತ ಸೂಕ್ತ ಬೆಲೆ ಸಿಗದೇ ಸಂಕಷ್ಟಕ್ಕೆ ಸಿಲುಕುವಂತ ಪರಿಸ್ಥಿತಿ ನಿರ್ಮಾಣಗೊಂಡಿದೆ. 
 

ರೈತರ ಪರಿಸ್ಥಿತಿ ಒಂದು ರೀತಿ ಲಾಟರಿ ಖರೀದಿಸಿದ ಹಾಗೆ ಆಗಿದೆ. ಬೀದರ್‌(Bidar) ಜಿಲ್ಲೆಯಲ್ಲಿ ರೈತನ ಪರಿಸ್ಥಿತಿ ಅದೇ ಆಗಿದೆ. ಟೊಮ್ಯಾಟೊಗೆ(Tomato) ಭರ್ಜರಿ ಬೆಲೆ ಸಿಗುತ್ತಿದೆ ಎಂದು 3 ತಿಂಗಳ ಹಿಂದೆ 5 ಲಕ್ಷಕ್ಕೂ ಅಧಿಕ ಹಣ ಖರ್ಚು ಮಾಡಿ 3 ಎಕರೆ ಭೂಮಿಯಲ್ಲಿ ಟೊಮ್ಯಾಟೊ ಬೆಳೆದಿದ್ದ. ಆದ್ರೆ, ಟೊಮ್ಯಾಟೋಗೆ ಇವತ್ತು ಬೆಲೆ ಸಿಗದೇ ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ. ಟೊಮ್ಯಾಟೊ ಕಟಾವು ಮಾಡಿ ಮಾರುಕಟ್ಟೆಗೆ ತೆಗೆದುಕೊಂಡು ಹೋದ್ರೂ ಕಟಾವು ಮಾಡಲು ಕೂಲಿಗೆ ಹಾಕಿದ ಹಣ ಸಿಗದಂತ ಪರಿಸ್ಥಿತಿ ನಿರ್ಮಾಣಗೊಂಡಿದೆ. ಬಡ್ಡಿಗೆ 5 ಲಕ್ಷದವೆಗೂ ಸಾಲ ತಂದು 3 ಎಕರೆ ಜಮೀನನಲ್ಲಿ ಟೊಮ್ಯಾಟೊ ಬೆಳೆದಿದ್ದ. ಭಾಲ್ಕಿ ತಾಲೂಕಿನ ಹಾಲಹಿಪ್ಪರ್ಗಾ ಗ್ರಾಮದ ರೈತ(Farmer) ವೈಜನಾಥ್ ಸಂಕಷ್ಟಕ್ಕೆ ಸಿಲುಕಿದ್ದಾನೆ. ಒಂದೂವರೆ ತಿಂಗಳ ಹಿಂದೆ 120 ರಿಂದ 150 ಕೆಜಿ ಇದ್ದ ಟೊಮ್ಯಾಟೊ ಈಗ ಕೇವಲ 20 ರಿಂದ 25 ರೂ. ಕೆಜಿಗೆ ಇಳಿದಿದೆ. ರೈತ ದೇಶದ ಬೆನ್ನೆಲುಬು ಅಂತಾರೆ. ಆದ್ರೆ, ರೈತನಿಗೆ ಒಮ್ಮೆ ಅತಿವೃಷ್ಠಿ-ಮತ್ತೊಮ್ಮೆ ಅನಾವೃಷ್ಠಿ ಸ್ಥಿತಿ ದೆವ್ವ-ಭೂತಗಳಂತೆ ಕಾಡುತ್ತಿರುತ್ತವೆ. 

ಇದನ್ನೂ ವೀಕ್ಷಿಸಿ:  ಸಿಸಿಬಿ ವಿಚಾರಣೆಯಲ್ಲಿ ಚೈತ್ರಾ ಹೇಳಿದ್ದೇನು..? ಇದೀಗ ಯೂ ಟರ್ನ್ ಹೊಡೆದಿದ್ದೇಕೆ ?

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more