150 ರೂ. ಇದ್ದ ಟೊಮೆಟೋ ಬೆಲೆ 20 ರೂಪಾಯಿಗೆ ಕುಸಿತ: ಅನ್ನದಾತ ಕಂಗಾಲು

150 ರೂ. ಇದ್ದ ಟೊಮೆಟೋ ಬೆಲೆ 20 ರೂಪಾಯಿಗೆ ಕುಸಿತ: ಅನ್ನದಾತ ಕಂಗಾಲು

Published : Sep 22, 2023, 12:46 PM IST

ಮೂರು ತಿಂಗಳ ಹಿಂದೆ ಟೊಮ್ಯಾಟೊ ಅಂದರೆ ಬಂಗಾರದ ಬೆಳೆ ಆಗಿತ್ತು. ಒಂದು ಎಕರೆಯಲ್ಲಿ ಟೊಮ್ಯಾಟೊ ಬೆಳೆ ಇದ್ದರೆ ಸಾಕು ಲಕ್ಷಾಧಿಪತಿ ಎನ್ನುತ್ತಿದ್ದರು. ಆದರೆ ಈಗ ಟೊಮ್ಯಾಟೋ ದರ ಧಿಡೀರ್ ಕುಸಿತ ಆಗಿದೆ. ಭರಪೂರ ಇಳುವರಿ ಬಂದಿರುವ ರೈತ ಸೂಕ್ತ ಬೆಲೆ ಸಿಗದೇ ಸಂಕಷ್ಟಕ್ಕೆ ಸಿಲುಕುವಂತ ಪರಿಸ್ಥಿತಿ ನಿರ್ಮಾಣಗೊಂಡಿದೆ. 
 

ರೈತರ ಪರಿಸ್ಥಿತಿ ಒಂದು ರೀತಿ ಲಾಟರಿ ಖರೀದಿಸಿದ ಹಾಗೆ ಆಗಿದೆ. ಬೀದರ್‌(Bidar) ಜಿಲ್ಲೆಯಲ್ಲಿ ರೈತನ ಪರಿಸ್ಥಿತಿ ಅದೇ ಆಗಿದೆ. ಟೊಮ್ಯಾಟೊಗೆ(Tomato) ಭರ್ಜರಿ ಬೆಲೆ ಸಿಗುತ್ತಿದೆ ಎಂದು 3 ತಿಂಗಳ ಹಿಂದೆ 5 ಲಕ್ಷಕ್ಕೂ ಅಧಿಕ ಹಣ ಖರ್ಚು ಮಾಡಿ 3 ಎಕರೆ ಭೂಮಿಯಲ್ಲಿ ಟೊಮ್ಯಾಟೊ ಬೆಳೆದಿದ್ದ. ಆದ್ರೆ, ಟೊಮ್ಯಾಟೋಗೆ ಇವತ್ತು ಬೆಲೆ ಸಿಗದೇ ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ. ಟೊಮ್ಯಾಟೊ ಕಟಾವು ಮಾಡಿ ಮಾರುಕಟ್ಟೆಗೆ ತೆಗೆದುಕೊಂಡು ಹೋದ್ರೂ ಕಟಾವು ಮಾಡಲು ಕೂಲಿಗೆ ಹಾಕಿದ ಹಣ ಸಿಗದಂತ ಪರಿಸ್ಥಿತಿ ನಿರ್ಮಾಣಗೊಂಡಿದೆ. ಬಡ್ಡಿಗೆ 5 ಲಕ್ಷದವೆಗೂ ಸಾಲ ತಂದು 3 ಎಕರೆ ಜಮೀನನಲ್ಲಿ ಟೊಮ್ಯಾಟೊ ಬೆಳೆದಿದ್ದ. ಭಾಲ್ಕಿ ತಾಲೂಕಿನ ಹಾಲಹಿಪ್ಪರ್ಗಾ ಗ್ರಾಮದ ರೈತ(Farmer) ವೈಜನಾಥ್ ಸಂಕಷ್ಟಕ್ಕೆ ಸಿಲುಕಿದ್ದಾನೆ. ಒಂದೂವರೆ ತಿಂಗಳ ಹಿಂದೆ 120 ರಿಂದ 150 ಕೆಜಿ ಇದ್ದ ಟೊಮ್ಯಾಟೊ ಈಗ ಕೇವಲ 20 ರಿಂದ 25 ರೂ. ಕೆಜಿಗೆ ಇಳಿದಿದೆ. ರೈತ ದೇಶದ ಬೆನ್ನೆಲುಬು ಅಂತಾರೆ. ಆದ್ರೆ, ರೈತನಿಗೆ ಒಮ್ಮೆ ಅತಿವೃಷ್ಠಿ-ಮತ್ತೊಮ್ಮೆ ಅನಾವೃಷ್ಠಿ ಸ್ಥಿತಿ ದೆವ್ವ-ಭೂತಗಳಂತೆ ಕಾಡುತ್ತಿರುತ್ತವೆ. 

ಇದನ್ನೂ ವೀಕ್ಷಿಸಿ:  ಸಿಸಿಬಿ ವಿಚಾರಣೆಯಲ್ಲಿ ಚೈತ್ರಾ ಹೇಳಿದ್ದೇನು..? ಇದೀಗ ಯೂ ಟರ್ನ್ ಹೊಡೆದಿದ್ದೇಕೆ ?

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more