Aug 10, 2021, 1:12 PM IST
ಬೆಂಗಳೂರು (ಆ. 10): ಆ.15ರ ನಂತರ ಬೆಂಗಳೂರಿನಲ್ಲಿ ಕೋವಿಡ್ ನಿಯಂತ್ರಣಕ್ಕೆ ಕಠಿಣ ನಿಯಮಗಳನ್ನು ಜಾರಿಗೊಳಿಸಲಾಗುತ್ತದೆ. ನಿಯಮ ಉಲ್ಲಂಘಿಸಿ ಸೋಂಕು ಹೆಚ್ಚಾದರೆ ಅನಿವಾರ್ಯವಾಗಿ ನಗರದಲ್ಲಿ ಮತ್ತೆ ಲಾಕ್ಡೌನ್ ಹೇರಬೇಕಾಗುತ್ತದೆ ಎಂದು ಬೆಂಗಳೂರು ಉಸ್ತುವಾರಿ ಸಚಿವ ಆರ್.ಅಶೋಕ್ ಎಚ್ಚರಿಕೆ ನೀಡಿದ್ದಾರೆ.
ಆ. 15 ರ ಬಳಿಕ ಕರ್ನಾಟಕದಲ್ಲಿ ಮತ್ತೆ ಲಾಕ್ಡೌನ್ ಸುಳಿವು ನೀಡಿದ ಸಚಿವ ಅಶೋಕ್!
ಆಗಸ್ಟ್ 20 ರ ನಂತರ ಸಾಲು ಸಾಲು ಹಬ್ಬಗಳು ಬರಲಿವೆ. ಹಬ್ಬ, ಜಾತ್ರೆಗಳಿಂದ ಸಾರ್ವಜನಿಕ ಸ್ಥಳಗಳಲ್ಲಿ ಜನ ದಟ್ಟಣೆಯಿಂದ ಕೊರೋನಾ ಸ್ಫೋಟಗೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಸರ್ಕಾರ ಟಫ್ ರೂಲ್ಸ್ಗೆ ಮುಂದಾಗಿದೆ.