ಪತ್ರಕರ್ತರ ಮೇಲೆ ದೌರ್ಜನ್ಯ ತಡೆಯಲು ಟ್ರೈನಿಂಗ್: ಸರ್ಕಾರಿ ಅಭಿಯೋಜಕರು, ಜರ್ನಲಿಸ್ಟ್‌ಗೆ ತರಬೇತಿ

ಪತ್ರಕರ್ತರ ಮೇಲೆ ದೌರ್ಜನ್ಯ ತಡೆಯಲು ಟ್ರೈನಿಂಗ್: ಸರ್ಕಾರಿ ಅಭಿಯೋಜಕರು, ಜರ್ನಲಿಸ್ಟ್‌ಗೆ ತರಬೇತಿ

Published : Nov 05, 2023, 11:38 AM IST

ಪತ್ರಕರ್ತರು,ಸರ್ಕಾರಿ ಅಭಿಯೋಜಕರ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಯಲು ಯುನೆಸ್ಕೋ ತರಬೇತಿ ಆಯೋಜಿಸಿತ್ತು. ರಾಜ್ಯ ಸರ್ಕಾರದ ಸಾರಥ್ಯದಲ್ಲಿ ಆಯ್ದ ಪತ್ರಕರ್ತರಿಗೆ ಟ್ರೈನಿಂಗ್ ಕೊಡಲಾಯ್ತು. 3 ದಿನದ ಕಾರ್ಯಾಗಾರದಲ್ಲಿ ದೌರ್ಜನ್ಯ ತಡೆ ಬಗ್ಗೆ ಮಾಹಿತಿ ನೀಡಲಾಯ್ತು.
 


ಪತ್ರಕರ್ತರು ಮತ್ತು ಮಿಡಿಯಾ ಸಂಸ್ಥೆಗಳ ಮೇಲೆ ದೌರ್ಜನ್ಯ ಹೆಚ್ಚಾಗ್ತಿದೆ. ಈ ದೌರ್ಜನ್ಯ ತಡೆಯುವ ನಿಟ್ಟಿನಲ್ಲಿ ಸರ್ಕಾರಿ ಅಭಿಯೋಜಕರಿಗೆ ಮತ್ತು ಆಯ್ದ ಪತ್ರಕರ್ತರಿಗೆ (Journalists) ತರಬೇತಿ ಕಾರ್ಯಗಾರ(Training workshop) ನಡೆಸಲಾಯಿತು. ಯುನೆಸ್ಕೋ(UNESCO) & ರಾಜ್ಯ ಸರ್ಕಾರ(State government) ಈ ತರಬೇತಿ ಕಾರ್ಯಗಾರ ಆಯೋಜಿಸಿತ್ತು. ಪತ್ರಕರ್ತರ ರಕ್ಷಣೆ & ಮೀಡಿಯಾ ಹೌಸ್ ಗಳ ಮೇಲೆ ಹಾಕುವ ಪ್ರಕರಣಗಳಿಂದ ರಕ್ಷಣೆ ಮಾಡೋದು ಹೇಗೆ..? ದೌರ್ಜನ್ಯ ತಡೆಗಟ್ಟುವ ಬಗ್ಗೆ ತರಬೇತಿ ನೀಡಲಾಯ್ತು. ಇದರಲ್ಲಿ ಯುನೆಸ್ಕೋ ಸಂಸ್ಥೆಯ ಮೆಹದಿ ಬಂಚಲ, ಸಿಮನ್ ಕ್ಲೈಮೆಟ್ & ಸಿಐಡಿ ಕಾನೂನು ಸಲಹೆಗಾರ ಮಹೇಶ್ ವೈದ್ಯ ಸೇರಿದಂತೆ ಹಲವು ಕಾನೂನು ತಜ್ಞರು ತರಬೇತಿ ಕೊಟ್ರು. ಪತ್ರಕರ್ತರಿಗೆ ಇರುವ ಕಾನೂನು, ವರದಿಗಾರಿಕೆ, ಸ್ಟೀಂಗ್ ಅಪರೇಷನ್ ವೇಳೆ ಅನುಸರಿಸಬೇಕಾದ ನಿಯಮಗಳ ಬಗ್ಗೆ ಅರಿವು ಮೂಡಿಸಿದ್ರು. ಯುನೆಸ್ಕೋ ರಕ್ಷಣೆ ಬಗ್ಗೆ ಕಾಳಜಿಯಿಂದ ವಿವಿಧ ದೇಶಗಳಲ್ಲಿ ಟ್ರೈನಿಂಗ್ ನೀಡುತ್ತಿದ್ದು ಭಾರತದಲ್ಲಿ ನಡೆದ ಮೊದಲ ತರಬೇತಿ ಕಾರ್ಯಗಾರ ಇದಾಗಿತ್ತು. ರಾಜ್ಯದ ವಿವಿಧ ಜಿಲ್ಲೆ 20ಕ್ಕೂ ಹೆಚ್ಚು ಸರ್ಕಾರಿ ಅಭಿಯೋಜಕರು, ಪತ್ರಕರ್ತರು ಕಾರ್ಯಗಾರದಲ್ಲಿ ಭಾಗವಹಿಸಿದ್ರು. ಈ ಮೂಲಕ ಪತ್ರಕರ್ತರ ರಕ್ಷಣೆಗೆ ಯುನೆಸ್ಕೋ ತೆಗೆದುಕೊಂಡಿರುವ ನಿರ್ಧಾರ ಸ್ವಾಗತಾರ್ಹ. ಜೊತೆಗೆ ಪತ್ರಕರ್ತರ ರಕ್ಷಣೆ ಕಾನೂನು ಜಾರಿಗೆ ತರಲು ಆಯೋಜಕರು ಸರ್ಕಾರಕ್ಕೆ ಶಿಫಾರಸ್ಸು ಕೂಡ ಮಾಡಲಿದ್ದಾರೆ.

ಇದನ್ನೂ ವೀಕ್ಷಿಸಿ: Weekly Horoscope: ಈ ರಾಶಿಯವರಿಗೆ ಆರೋಗ್ಯದಲ್ಲಿ ವ್ಯತ್ಯಾಸವಾಗಲಿದ್ದು, ಉದ್ಯೋಗದಲ್ಲಿ ಸ್ವಲ್ಪ ಅತಂತ್ರತೆ ಉಂಟಾಗಲಿದೆ..

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more