ನಿಶ್ಚಿತಾರ್ಥಕ್ಕೆ ಚೌಲ್ಟ್ರಿ ಬುಕ್‌ ಮಾಡಿ ವಾಪಸ್ಸಾಗುವಾಗ ಟ್ರಾನ್ಸ್‌ಫಾರ್ಮರ್‌ ಸ್ಫೋಟಕ್ಕೆ ತಂದೆ ಮಗಳು ಬಲಿ!

ನಿಶ್ಚಿತಾರ್ಥಕ್ಕೆ ಚೌಲ್ಟ್ರಿ ಬುಕ್‌ ಮಾಡಿ ವಾಪಸ್ಸಾಗುವಾಗ ಟ್ರಾನ್ಸ್‌ಫಾರ್ಮರ್‌ ಸ್ಫೋಟಕ್ಕೆ ತಂದೆ ಮಗಳು ಬಲಿ!

Published : Mar 24, 2022, 12:59 PM ISTUpdated : Mar 24, 2022, 01:26 PM IST

ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ರಸ್ತೆ ಬದಿಯ ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ (Transformer) ಸ್ಫೋಟಗೊಂಡು ಸ್ಕೂಟರ್‌ನಲ್ಲಿ ಹೋಗುತ್ತಿದ್ದವರಿಗೆ ಬೆಂಕಿ ತಾಕಿದ ಪರಿಣಾಮ ತಂದೆ, ಮಗಳು ಮೃತಪಟ್ಟಿರುವ ದಾರುಣ ಘಟನೆ ಉಲ್ಲಾಳ ಬಳಿಯ ಮಂಗನಹಳ್ಳಿ ಕ್ರಾಸ್‌ ಸಮೀಪ ನಡೆದಿದೆ.
 

ಬೆಂಗಳೂರು (ಮಾ. 24): ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ರಸ್ತೆ ಬದಿಯ ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ (Transformer) ಸ್ಫೋಟಗೊಂಡು ಸ್ಕೂಟರ್‌ನಲ್ಲಿ ಹೋಗುತ್ತಿದ್ದವರಿಗೆ ಬೆಂಕಿ ತಾಕಿದ ಪರಿಣಾಮ ತಂದೆ, ಮಗಳು ಮೃತಪಟ್ಟಿರುವ ದಾರುಣ ಘಟನೆ ಉಲ್ಲಾಳ ಬಳಿಯ ಮಂಗನಹಳ್ಳಿ ಕ್ರಾಸ್‌ ಸಮೀಪ ನಡೆದಿದೆ.

ಮಂಗನಹಳ್ಳಿ ನಿವಾಸಿ ಶಿವರಾಜ್‌(55) ಅವರ ಪುತ್ರಿ ಚೈತನ್ಯ(19) ಮೃತಪಟ್ಟಿದ್ದಾರೆ. ನಿಶ್ಚಿತಾರ್ಥಕ್ಕೆ ಕಲ್ಯಾಣ ಮಂಟಪ ಬುಕ್‌ ಮಾಡಿ ಮಗಳ ಜತೆ ಶಿವರಾಜ್‌ ಮನೆಗೆ ಮರಳುವಾಗ ಈ ಘಟನೆ ನಡೆದಿದೆ. ಸೆಕ್ಯೂರಿಟಿ ಗಾರ್ಡ್‌ ಶಿವರಾಜ್‌ ಅವರು, ತಮ್ಮ ಪತ್ನಿ ಮತ್ತು ಮಗಳ ಜತೆ ಮಂಗನಹಳ್ಳಿಯಲ್ಲಿ ನೆಲೆಸಿದ್ದರು. ದ್ವಿತೀಯ ಪಿಯುಸಿ ಓದುತ್ತಿದ್ದ ಚೈತನ್ಯಳಿಗೆ ಇತ್ತೀಚಿಗೆ ಮದುವೆ ನಿಶ್ಚಯವಾಗಿತ್ತು. ಶಿವರಾಜ್‌ ದಂಪತಿಗೆ ಚೈತನ್ಯ ಒಬ್ಬಳೇ ಮಗಳು.

ಟ್ರಾನ್ಸ್‌ಫಾರ್ಮರ್‌ನಲ್ಲಿ ಬೆಂಕಿ ಕಿಡಿ ಕಾಣಿಸಿದ ಕೂಡಲೇ ಸಾರ್ವಜನಿಕರು ಬೆಸ್ಕಾಂ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಆದರೆ ಆ ಭಾಗದ ವಿದ್ಯುತ್‌ ಸಂಪರ್ಕ ಕಡಿತಗೊಳಿಸದೆ ಬೆಸ್ಕಾಂ ಸಿಬ್ಬಂದಿ ತೋರಿದ ನಿರ್ಲಕ್ಷ್ಯದಿಂದ ತಂದೆ-ಮಗಳು ಜೀವ ಅಪಾಯಕ್ಕೆ ಸಿಲುಕಿದೆ ಎಂದು ಪೊಲೀಸರು ಹೇಳಿದ್ದಾರೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more