ನಿಶ್ಚಿತಾರ್ಥಕ್ಕೆ ಚೌಲ್ಟ್ರಿ ಬುಕ್‌ ಮಾಡಿ ವಾಪಸ್ಸಾಗುವಾಗ ಟ್ರಾನ್ಸ್‌ಫಾರ್ಮರ್‌ ಸ್ಫೋಟಕ್ಕೆ ತಂದೆ ಮಗಳು ಬಲಿ!

ನಿಶ್ಚಿತಾರ್ಥಕ್ಕೆ ಚೌಲ್ಟ್ರಿ ಬುಕ್‌ ಮಾಡಿ ವಾಪಸ್ಸಾಗುವಾಗ ಟ್ರಾನ್ಸ್‌ಫಾರ್ಮರ್‌ ಸ್ಫೋಟಕ್ಕೆ ತಂದೆ ಮಗಳು ಬಲಿ!

Published : Mar 24, 2022, 12:59 PM ISTUpdated : Mar 24, 2022, 01:26 PM IST

ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ರಸ್ತೆ ಬದಿಯ ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ (Transformer) ಸ್ಫೋಟಗೊಂಡು ಸ್ಕೂಟರ್‌ನಲ್ಲಿ ಹೋಗುತ್ತಿದ್ದವರಿಗೆ ಬೆಂಕಿ ತಾಕಿದ ಪರಿಣಾಮ ತಂದೆ, ಮಗಳು ಮೃತಪಟ್ಟಿರುವ ದಾರುಣ ಘಟನೆ ಉಲ್ಲಾಳ ಬಳಿಯ ಮಂಗನಹಳ್ಳಿ ಕ್ರಾಸ್‌ ಸಮೀಪ ನಡೆದಿದೆ.
 

ಬೆಂಗಳೂರು (ಮಾ. 24): ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ರಸ್ತೆ ಬದಿಯ ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ (Transformer) ಸ್ಫೋಟಗೊಂಡು ಸ್ಕೂಟರ್‌ನಲ್ಲಿ ಹೋಗುತ್ತಿದ್ದವರಿಗೆ ಬೆಂಕಿ ತಾಕಿದ ಪರಿಣಾಮ ತಂದೆ, ಮಗಳು ಮೃತಪಟ್ಟಿರುವ ದಾರುಣ ಘಟನೆ ಉಲ್ಲಾಳ ಬಳಿಯ ಮಂಗನಹಳ್ಳಿ ಕ್ರಾಸ್‌ ಸಮೀಪ ನಡೆದಿದೆ.

ಮಂಗನಹಳ್ಳಿ ನಿವಾಸಿ ಶಿವರಾಜ್‌(55) ಅವರ ಪುತ್ರಿ ಚೈತನ್ಯ(19) ಮೃತಪಟ್ಟಿದ್ದಾರೆ. ನಿಶ್ಚಿತಾರ್ಥಕ್ಕೆ ಕಲ್ಯಾಣ ಮಂಟಪ ಬುಕ್‌ ಮಾಡಿ ಮಗಳ ಜತೆ ಶಿವರಾಜ್‌ ಮನೆಗೆ ಮರಳುವಾಗ ಈ ಘಟನೆ ನಡೆದಿದೆ. ಸೆಕ್ಯೂರಿಟಿ ಗಾರ್ಡ್‌ ಶಿವರಾಜ್‌ ಅವರು, ತಮ್ಮ ಪತ್ನಿ ಮತ್ತು ಮಗಳ ಜತೆ ಮಂಗನಹಳ್ಳಿಯಲ್ಲಿ ನೆಲೆಸಿದ್ದರು. ದ್ವಿತೀಯ ಪಿಯುಸಿ ಓದುತ್ತಿದ್ದ ಚೈತನ್ಯಳಿಗೆ ಇತ್ತೀಚಿಗೆ ಮದುವೆ ನಿಶ್ಚಯವಾಗಿತ್ತು. ಶಿವರಾಜ್‌ ದಂಪತಿಗೆ ಚೈತನ್ಯ ಒಬ್ಬಳೇ ಮಗಳು.

ಟ್ರಾನ್ಸ್‌ಫಾರ್ಮರ್‌ನಲ್ಲಿ ಬೆಂಕಿ ಕಿಡಿ ಕಾಣಿಸಿದ ಕೂಡಲೇ ಸಾರ್ವಜನಿಕರು ಬೆಸ್ಕಾಂ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಆದರೆ ಆ ಭಾಗದ ವಿದ್ಯುತ್‌ ಸಂಪರ್ಕ ಕಡಿತಗೊಳಿಸದೆ ಬೆಸ್ಕಾಂ ಸಿಬ್ಬಂದಿ ತೋರಿದ ನಿರ್ಲಕ್ಷ್ಯದಿಂದ ತಂದೆ-ಮಗಳು ಜೀವ ಅಪಾಯಕ್ಕೆ ಸಿಲುಕಿದೆ ಎಂದು ಪೊಲೀಸರು ಹೇಳಿದ್ದಾರೆ.

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more