ನಿಶ್ಚಿತಾರ್ಥಕ್ಕೆ ಚೌಲ್ಟ್ರಿ ಬುಕ್‌ ಮಾಡಿ ವಾಪಸ್ಸಾಗುವಾಗ ಟ್ರಾನ್ಸ್‌ಫಾರ್ಮರ್‌ ಸ್ಫೋಟಕ್ಕೆ ತಂದೆ ಮಗಳು ಬಲಿ!

ನಿಶ್ಚಿತಾರ್ಥಕ್ಕೆ ಚೌಲ್ಟ್ರಿ ಬುಕ್‌ ಮಾಡಿ ವಾಪಸ್ಸಾಗುವಾಗ ಟ್ರಾನ್ಸ್‌ಫಾರ್ಮರ್‌ ಸ್ಫೋಟಕ್ಕೆ ತಂದೆ ಮಗಳು ಬಲಿ!

Published : Mar 24, 2022, 12:59 PM ISTUpdated : Mar 24, 2022, 01:26 PM IST

ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ರಸ್ತೆ ಬದಿಯ ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ (Transformer) ಸ್ಫೋಟಗೊಂಡು ಸ್ಕೂಟರ್‌ನಲ್ಲಿ ಹೋಗುತ್ತಿದ್ದವರಿಗೆ ಬೆಂಕಿ ತಾಕಿದ ಪರಿಣಾಮ ತಂದೆ, ಮಗಳು ಮೃತಪಟ್ಟಿರುವ ದಾರುಣ ಘಟನೆ ಉಲ್ಲಾಳ ಬಳಿಯ ಮಂಗನಹಳ್ಳಿ ಕ್ರಾಸ್‌ ಸಮೀಪ ನಡೆದಿದೆ.
 

ಬೆಂಗಳೂರು (ಮಾ. 24): ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ರಸ್ತೆ ಬದಿಯ ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ (Transformer) ಸ್ಫೋಟಗೊಂಡು ಸ್ಕೂಟರ್‌ನಲ್ಲಿ ಹೋಗುತ್ತಿದ್ದವರಿಗೆ ಬೆಂಕಿ ತಾಕಿದ ಪರಿಣಾಮ ತಂದೆ, ಮಗಳು ಮೃತಪಟ್ಟಿರುವ ದಾರುಣ ಘಟನೆ ಉಲ್ಲಾಳ ಬಳಿಯ ಮಂಗನಹಳ್ಳಿ ಕ್ರಾಸ್‌ ಸಮೀಪ ನಡೆದಿದೆ.

ಮಂಗನಹಳ್ಳಿ ನಿವಾಸಿ ಶಿವರಾಜ್‌(55) ಅವರ ಪುತ್ರಿ ಚೈತನ್ಯ(19) ಮೃತಪಟ್ಟಿದ್ದಾರೆ. ನಿಶ್ಚಿತಾರ್ಥಕ್ಕೆ ಕಲ್ಯಾಣ ಮಂಟಪ ಬುಕ್‌ ಮಾಡಿ ಮಗಳ ಜತೆ ಶಿವರಾಜ್‌ ಮನೆಗೆ ಮರಳುವಾಗ ಈ ಘಟನೆ ನಡೆದಿದೆ. ಸೆಕ್ಯೂರಿಟಿ ಗಾರ್ಡ್‌ ಶಿವರಾಜ್‌ ಅವರು, ತಮ್ಮ ಪತ್ನಿ ಮತ್ತು ಮಗಳ ಜತೆ ಮಂಗನಹಳ್ಳಿಯಲ್ಲಿ ನೆಲೆಸಿದ್ದರು. ದ್ವಿತೀಯ ಪಿಯುಸಿ ಓದುತ್ತಿದ್ದ ಚೈತನ್ಯಳಿಗೆ ಇತ್ತೀಚಿಗೆ ಮದುವೆ ನಿಶ್ಚಯವಾಗಿತ್ತು. ಶಿವರಾಜ್‌ ದಂಪತಿಗೆ ಚೈತನ್ಯ ಒಬ್ಬಳೇ ಮಗಳು.

ಟ್ರಾನ್ಸ್‌ಫಾರ್ಮರ್‌ನಲ್ಲಿ ಬೆಂಕಿ ಕಿಡಿ ಕಾಣಿಸಿದ ಕೂಡಲೇ ಸಾರ್ವಜನಿಕರು ಬೆಸ್ಕಾಂ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಆದರೆ ಆ ಭಾಗದ ವಿದ್ಯುತ್‌ ಸಂಪರ್ಕ ಕಡಿತಗೊಳಿಸದೆ ಬೆಸ್ಕಾಂ ಸಿಬ್ಬಂದಿ ತೋರಿದ ನಿರ್ಲಕ್ಷ್ಯದಿಂದ ತಂದೆ-ಮಗಳು ಜೀವ ಅಪಾಯಕ್ಕೆ ಸಿಲುಕಿದೆ ಎಂದು ಪೊಲೀಸರು ಹೇಳಿದ್ದಾರೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more