ಹಾವಿನಿಂದ ಮಗನನ್ನು ಕಾಪಾಡಿದ ತಾಯಿ, ವಿಡಿಯೋ ವೈರಲ್!

ಹಾವಿನಿಂದ ಮಗನನ್ನು ಕಾಪಾಡಿದ ತಾಯಿ, ವಿಡಿಯೋ ವೈರಲ್!

Published : Aug 13, 2022, 03:25 PM IST

ಇನ್ನೇನು ಮಗು ಹಾವಿನ ಮೇಲೆ ಕಾಲಿಡಬೇಕು ಎನ್ನುವ ಹಂತದಲ್ಲಿ ಸಮಯಪ್ರಜ್ಞೆ ಮರೆದ ತಾಯಿ, ಮಗುವನ್ನು ಪವಾಡಸದೃಶ್ಯವಾಗಿ ಪಾರು ಮಾಡಿದ ವಿಡಿಯೋ ಇತ್ತೀಚೆಗೆ ವೈರಲ್‌ ಆಗಿದೆ. ಮಂಡ್ಯದಲ್ಲಿ ವೈದ್ಯನಾಥಪುರಕ್ಕೆ ತೆರಳುವ ಕೆಮ್ಮಣ್ಣು ಕಾಲುವೆ ರಸ್ತೆಯ ಬಡವಾಣೆಯಲ್ಲಿ ನಡೆದ ಘಟನೆ ಇದಾಗಿದೆ.
 

ಮಂಡ್ಯ (ಆ. 13): ತನ್ನ ಸಮಯಪ್ರಜ್ಞೆಯಿಂದ ಹಾವು ಕಡಿತದಿಂದ ಮಗನನ್ನು ಕಾಪಾಡುವಲ್ಲಿ ತಾಯಿ ಯಶಸ್ವಿಯಾಗಿದ್ದಾಳೆ. ತಾಯಿ ಸಮಯಪ್ರಜ್ಞೆಗೆ ಅಪಾಯದಿಂದ ಪಾರಾದ ಮಗು. ಎದೆ ಝಲ್ಲೆನಿಸುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ. ಮನೆಯಿಂದ ತಾಯಿ ಮಗ ಹೊರಬರುವ ವೇಳೆ ಈ ಘಟನೆ ನಡೆದಿದೆ. ಹೊರ ಬರ್ತಿದ್ದಂತೆ ಮನೆ ಮುಂಭಾಗ ಇದ್ದ ಹಾವಿನ ಬಳಿ ಹೆಜ್ಜೆ ಇಟ್ಟ ಬಾಲಕ. ಹಾವನ್ನು ಕಂಡು ಚೀರಾಡುತ್ತ ಮಗು ಬಳಿ ತಾಯಿ ಓಡಿ ಬಂದಿದ್ದಾರೆ.

ಇನ್ನೇನು ಹೆಡೆ ಎತ್ತಿ ಕಚ್ಚಲು ಬರುವ ಹಾವಿನಿಂದ ಕಾಪಾಡುವಲ್ಲಿ ತಾಯಿ ಯಶಸ್ವಿಯಾಗಿದ್ದಾಳೆ. ಕ್ಷಣಮಾತ್ರದಲ್ಲಿ ಹಾವಿನಿಂದ ಮಗು ಪಾರಾಗಿದೆ. ಇಲ್ಲಿನವೈದ್ಯನಾಥಪುರಕ್ಕೆ ತೆರಳುವ ಕೆಮ್ಮಣ್ಣು ಕಾಲುವೆ ರಸ್ತೆಯ ಬಡವಾಣೆಯಲ್ಲಿ ಘಟನೆ ಎಂದು ಹೇಳಲಾಗಿದ್ದು, ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ವೈದ್ಯನಾಥಪುರದಲ್ಲಿ ಈ ಘಟನೆ ನಡೆದಿದೆ.

ನಾಗರ ಪಂಚಮಿಯ ಮರುದಿನವೇ ಸರ್ಪ ಸೇಡಿಗೆ ಬಲಿಯಾದ ಸಹೋದರರು!

ಘಟನೆಯಿಂದ ನಮಗೆಲ್ಲ ಭಯವಾಗಿತ್ತು. ಅದೃಷ್ಟವಶಾತ್ ಯಾವುದೇ ಸಮಸ್ಯೆ ಆಗಲಿಲ್ಲ. ಈ ಘಟನೆ ನಡೆದಿದ್ದು ನಮ್ಮ ಮಂಡ್ಯದ ಚಾಮುಂಡೇಶ್ವರಿ ನಗರದಲ್ಲಿರುವ ಮನೆಯಲ್ಲಿ. ನನ್ನ ಪತ್ನಿ ಪ್ರಿಯಾ ನನ್ನ ಮಗನನ್ನ ಕಾಪಾಡಿದ್ದಾರೆ. ಘಟನೆಯಿಂದ ನನ್ನ ಪತ್ನಿಗೆ ತುಂಬ ಭಯವಾಗಿತ್ತು. ದೇವರ ದಯೆಯಿಂದ ನನ್ನ ಮಗು ಬದುಕಿದೆ. ದೇವರ ಹಾವು ಆಗಿರುವ ಕಾರಣಕ್ಕೆ ಏನು ಮಾಡಿಲ್ಲ ಎಂದು ಮಗು ತಂದೆ ವಿಷ್ಣು ಪ್ರಸಾದ್ ಹೇಳಿಕೆ ನೀಡಿದ್ದಾರೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more