ಹಾವಿನಿಂದ ಮಗನನ್ನು ಕಾಪಾಡಿದ ತಾಯಿ, ವಿಡಿಯೋ ವೈರಲ್!

ಹಾವಿನಿಂದ ಮಗನನ್ನು ಕಾಪಾಡಿದ ತಾಯಿ, ವಿಡಿಯೋ ವೈರಲ್!

Published : Aug 13, 2022, 03:25 PM IST

ಇನ್ನೇನು ಮಗು ಹಾವಿನ ಮೇಲೆ ಕಾಲಿಡಬೇಕು ಎನ್ನುವ ಹಂತದಲ್ಲಿ ಸಮಯಪ್ರಜ್ಞೆ ಮರೆದ ತಾಯಿ, ಮಗುವನ್ನು ಪವಾಡಸದೃಶ್ಯವಾಗಿ ಪಾರು ಮಾಡಿದ ವಿಡಿಯೋ ಇತ್ತೀಚೆಗೆ ವೈರಲ್‌ ಆಗಿದೆ. ಮಂಡ್ಯದಲ್ಲಿ ವೈದ್ಯನಾಥಪುರಕ್ಕೆ ತೆರಳುವ ಕೆಮ್ಮಣ್ಣು ಕಾಲುವೆ ರಸ್ತೆಯ ಬಡವಾಣೆಯಲ್ಲಿ ನಡೆದ ಘಟನೆ ಇದಾಗಿದೆ.
 

ಮಂಡ್ಯ (ಆ. 13): ತನ್ನ ಸಮಯಪ್ರಜ್ಞೆಯಿಂದ ಹಾವು ಕಡಿತದಿಂದ ಮಗನನ್ನು ಕಾಪಾಡುವಲ್ಲಿ ತಾಯಿ ಯಶಸ್ವಿಯಾಗಿದ್ದಾಳೆ. ತಾಯಿ ಸಮಯಪ್ರಜ್ಞೆಗೆ ಅಪಾಯದಿಂದ ಪಾರಾದ ಮಗು. ಎದೆ ಝಲ್ಲೆನಿಸುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ. ಮನೆಯಿಂದ ತಾಯಿ ಮಗ ಹೊರಬರುವ ವೇಳೆ ಈ ಘಟನೆ ನಡೆದಿದೆ. ಹೊರ ಬರ್ತಿದ್ದಂತೆ ಮನೆ ಮುಂಭಾಗ ಇದ್ದ ಹಾವಿನ ಬಳಿ ಹೆಜ್ಜೆ ಇಟ್ಟ ಬಾಲಕ. ಹಾವನ್ನು ಕಂಡು ಚೀರಾಡುತ್ತ ಮಗು ಬಳಿ ತಾಯಿ ಓಡಿ ಬಂದಿದ್ದಾರೆ.

ಇನ್ನೇನು ಹೆಡೆ ಎತ್ತಿ ಕಚ್ಚಲು ಬರುವ ಹಾವಿನಿಂದ ಕಾಪಾಡುವಲ್ಲಿ ತಾಯಿ ಯಶಸ್ವಿಯಾಗಿದ್ದಾಳೆ. ಕ್ಷಣಮಾತ್ರದಲ್ಲಿ ಹಾವಿನಿಂದ ಮಗು ಪಾರಾಗಿದೆ. ಇಲ್ಲಿನವೈದ್ಯನಾಥಪುರಕ್ಕೆ ತೆರಳುವ ಕೆಮ್ಮಣ್ಣು ಕಾಲುವೆ ರಸ್ತೆಯ ಬಡವಾಣೆಯಲ್ಲಿ ಘಟನೆ ಎಂದು ಹೇಳಲಾಗಿದ್ದು, ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ವೈದ್ಯನಾಥಪುರದಲ್ಲಿ ಈ ಘಟನೆ ನಡೆದಿದೆ.

ನಾಗರ ಪಂಚಮಿಯ ಮರುದಿನವೇ ಸರ್ಪ ಸೇಡಿಗೆ ಬಲಿಯಾದ ಸಹೋದರರು!

ಘಟನೆಯಿಂದ ನಮಗೆಲ್ಲ ಭಯವಾಗಿತ್ತು. ಅದೃಷ್ಟವಶಾತ್ ಯಾವುದೇ ಸಮಸ್ಯೆ ಆಗಲಿಲ್ಲ. ಈ ಘಟನೆ ನಡೆದಿದ್ದು ನಮ್ಮ ಮಂಡ್ಯದ ಚಾಮುಂಡೇಶ್ವರಿ ನಗರದಲ್ಲಿರುವ ಮನೆಯಲ್ಲಿ. ನನ್ನ ಪತ್ನಿ ಪ್ರಿಯಾ ನನ್ನ ಮಗನನ್ನ ಕಾಪಾಡಿದ್ದಾರೆ. ಘಟನೆಯಿಂದ ನನ್ನ ಪತ್ನಿಗೆ ತುಂಬ ಭಯವಾಗಿತ್ತು. ದೇವರ ದಯೆಯಿಂದ ನನ್ನ ಮಗು ಬದುಕಿದೆ. ದೇವರ ಹಾವು ಆಗಿರುವ ಕಾರಣಕ್ಕೆ ಏನು ಮಾಡಿಲ್ಲ ಎಂದು ಮಗು ತಂದೆ ವಿಷ್ಣು ಪ್ರಸಾದ್ ಹೇಳಿಕೆ ನೀಡಿದ್ದಾರೆ.

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more