ಇಂದು ರಾಜ್ಯದ ಎಲ್ಲಾ ಚಿತ್ರಮಂದಿರಗಳಲ್ಲಿ ಪುನೀತ್‌ಗೆ ಶ್ರದ್ಧಾಂಜಲಿ

ಇಂದು ರಾಜ್ಯದ ಎಲ್ಲಾ ಚಿತ್ರಮಂದಿರಗಳಲ್ಲಿ ಪುನೀತ್‌ಗೆ ಶ್ರದ್ಧಾಂಜಲಿ

Published : Nov 07, 2021, 09:40 AM ISTUpdated : Nov 07, 2021, 09:43 AM IST

ಇಂದು ಸಂಜೆ 6 ಗಂಟೆಗೆ ರಾಜ್ಯದ ಎಲ್ಲ 550ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಏಕಕಾಲಕ್ಕೆ ಪುನೀತ್‌ ನಮನ ಕಾರ್ಯಕ್ರಮ ನಡೆಯಲಿದೆ. 

ಬೆಂಗಳೂರು (ನ. 07): ಇಂದು ಸಂಜೆ 6 ಗಂಟೆಗೆ ರಾಜ್ಯದ ಎಲ್ಲ 550ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ (Theatre) ಏಕಕಾಲಕ್ಕೆ ಪುನೀತ್‌ ನಮನ (Puneeth Namana) ಕಾರ್ಯಕ್ರಮ ನಡೆಯಲಿದೆ. 

ಚಿತ್ರಪ್ರದರ್ಶಕರ ಸಂಘದ ವತಿಯಿಂದ ನಡೆಯುವ ಈ ಕಾರ್ಯಕ್ರಮದಲ್ಲಿ ಮೊಂಬತ್ತಿ ಬೆಳಗಿಸಿ, ಪುನೀತ್‌ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಗುತ್ತದೆ. ಈ ವೇಳೆ ಚಿತ್ರ ಸಾಹಿತಿ ವಿ.ನಾಗೇಂದ್ರ ಪ್ರಸಾದ್‌ ರಚಿಸಿರುವ ಪುನೀತ್‌ ಕುರಿತ ಹಾಡನ್ನು ಹಾಡಲಾಗುತ್ತದೆ. ಥಿಯೇಟರ್‌ನ ಸಿಬ್ಬಂದಿ, ಅಭಿಮಾನಿಗಳು ಈ ರೀತಿ ಪುನೀತ್‌ಗೆ ಶ್ರದ್ಧಾಂಜಲಿ ಅರ್ಪಿಸಲಿದ್ದಾರೆ. 

ಅದೇ ರೀತಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ವತಿಯಿಂದ ನ.16ರಂದು ನಡೆಯುವ ‘ಪುನೀತ ನಮನ’ ಕಾರ್ಯಕ್ರಮಕ್ಕೆ ಸಿದ್ಧತೆಗಳು ಭರದಿಂದ ನಡೆಯುತ್ತಿವೆ. ರಜನೀಕಾಂತ್‌, ಕಮಲಹಾಸನ್‌, ಧನುಷ್‌, ಚಿರಂಜೀವಿ, ವಿಶಾಲ್‌ ಮೊದಲಾದವರಿಗೆ ಈಗಾಗಲೇ ಆಹ್ವಾನ ನೀಡಲಾಗಿದ್ದು, ಅವರು ಭಾಗವಹಿಸುವ ನಿರೀಕ್ಷೆ ಇದೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more