ಪ್ರಜ್ವಲ್ ಪೆನ್‌ಡ್ರೈವ್ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್! “ಸನ್ ಆಫ್ ರೇವಣ್ಣ”ಗೆ ಕಾದಿದ್ಯಾ ಭಾರೀ ಸಂಕಷ್ಟ..?

ಪ್ರಜ್ವಲ್ ಪೆನ್‌ಡ್ರೈವ್ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್! “ಸನ್ ಆಫ್ ರೇವಣ್ಣ”ಗೆ ಕಾದಿದ್ಯಾ ಭಾರೀ ಸಂಕಷ್ಟ..?

Published : May 14, 2024, 12:16 PM IST

ಇತ್ತ ಪೆನ್‌ಡ್ರೈವ್ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಕ್ತಾ ಇದ್ರೆ, ಅತ್ತ ಇಡೀ ಪ್ರಕರಣದ ಕೇಂದ್ರ ಬಿಂದು ಪ್ರಜ್ವಲ್ ರೇವಣ್ಣನ ಪತ್ತೆಯೇ ಇಲ್ಲ. ಪ್ರಜ್ವಲ್ ಸಿಗದೇ ಇದ್ರೂ ಆತನ ಕೊರಳಿಗೆ ಸುತ್ತಿಕೊಂಡಿರೋ ಕಾನೂನಿನ ಉರುಳು ಮಾತ್ರ ದಿನದಿಂದ ದಿನಕ್ಕೆ ಬಿಗಿಯಾಗ್ತಾನೇ ಇದೆ. 
 

ಬೆಂಗಳೂರು(ಮೇ.14):  ಸಂಸದ ಪ್ರಜ್ವಲ್ ರೇವಣ್ಣನ ಪೆನ್‌ಡ್ರೈವ್ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗ್ತಿದೆ. ಅಪ್ಪನಿಗೆ ಜಾಮೀನು.. ಮಗನ ಕೊರಳಿಗೆ ಕಾನೂನಿನ ಉರುಳು..? ಬಿಜೆಪಿ ಮಾಜಿ ಶಾಸಕ ಪ್ರೀತಮ್ ಗೌಡ ಆಪ್ತರು ಅರೆಸ್ಟ್ ಆಗಿದ್ದೇಕೆ..? ವಿಡಿಯೋ ವೈರಲ್ ಆರೋಪ ಜೆಡಿಎಸ್ ಶಾಸಕನ ಮೇಲೆ ತಿರುಗಿದ್ದೇಕೆ..? ಇದೇ ಇವತ್ತಿನ ಸುವರ್ಣ ಸ್ಪೆಷಲ್, ಅಪ್ಪ ಬಾಹರ್, ಮಗ ಅಂದರ್..? 

ಇತ್ತ ಪೆನ್‌ಡ್ರೈವ್ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಕ್ತಾ ಇದ್ರೆ, ಅತ್ತ ಇಡೀ ಪ್ರಕರಣದ ಕೇಂದ್ರ ಬಿಂದು ಪ್ರಜ್ವಲ್ ರೇವಣ್ಣನ ಪತ್ತೆಯೇ ಇಲ್ಲ. ಪ್ರಜ್ವಲ್ ಸಿಗದೇ ಇದ್ರೂ ಆತನ ಕೊರಳಿಗೆ ಸುತ್ತಿಕೊಂಡಿರೋ ಕಾನೂನಿನ ಉರುಳು ಮಾತ್ರ ದಿನದಿಂದ ದಿನಕ್ಕೆ ಬಿಗಿಯಾಗ್ತಾನೇ ಇದೆ. 

ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಕೇಸ್‌: ಹೊಳೆನರಸೀಪುರ, ಹಾಸನದಲ್ಲಿ ಎಫ್‌ಎಸ್‌ಎಲ್‌ ಪರಿಶೀಲನೆ

ಇತ್ತ ಅಪ್ಪ ಎಚ್.ಡಿ ರೇವಣ್ಣಗೆ ಜಾಮೀನು ಸಿಕ್ಕಿದ್ರೆ, ಅತ್ತ ಸತತ 17ನೇ ದಿನವೂ ಮರಿ ರೇವಣ್ಣನ ಪತ್ತೆಯೇ ಇಲ್ಲ. ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ಬೇಟೆಗೆ ಬಲೆ ಬೀಸಿರೋ ಎಸ್ಐಟಿ, ಇಲ್ಲಿ ಕಾನೂನಿನ ಉರುಳನ್ನು ಬಿಗಿಗೊಳಿಸ್ತಾ ಇದೆ. ಅತ್ಯಾಚಾರ ಪ್ರಕರಣಗಳಲ್ಲಿ ಪ್ರಜ್ವಲ್ ವಿರುದ್ಧ ಒಂದೊಂದೇ ಸಾಕ್ಷಿಗಳನ್ನು ಕಲೆ ಹಾಕ್ತಾ ಇದೆ. 

ಸಂಸದ ಪ್ರಜ್ವಲ್ ರೇವಣ್ಣ ತಲೆಮರೆಸಿಕೊಂಡು ಸೋಮವಾರಕ್ಕೆ ಭರ್ತಿ 17 ದಿನ. ಅತ್ಯಾಚಾರ ಪ್ರಕರಣ ದಾಖಲಾಗುವ ಸುಳಿವು ಸಿಗುತ್ತಲೇ, ಚುನಾವಣೆ ಮುಗಿಯುತ್ತಿದ್ದಂತೆ ಪ್ರಜ್ವಲ್ ವಿದೇಶಕ್ಕೆ ಹಾರಿದ್ದರು. ಈ ಕ್ಷಣದವರೆಗೆ ಪ್ರಜ್ವಲ್ ಬಗ್ಗೆ ಎಸ್ಐಟಿಗೆ ಸುಳಿವು ಸಿಕ್ಕಿಲ್ಲ. ತಲೆತಪ್ಪಿಸಕೊಂಡಿರೋ ಜೆಡಿಎಸ್ ಸಂಸದ ವಾಪಸ್ ಬರೋದನ್ನೇ ಎಸ್ಐಟಿ ಅಧಿಕಾರಿಗಳು ಕಾಯ್ತಾ ಇದ್ದಾರೆ.ಅಪ್ಪ ಬಾಹರ್ ಆದ್ರೂ ಮಗ ಅಂದರ್ ಆಗೋದು ಪಕ್ಕಾ ಅಂತ ಹೇಳಲಾಗ್ತಿದೆ. ಕಾರಣ ಪ್ರಜ್ವರ್ ರೇವಣ್ಣ ವಿರುದ್ಧ ದಾಖಲಾಗಿರೋದು ಸಾಮಾನ್ಯ ಕೇಸ್‌ಗಳಲ್ಲ, ಅತ್ಯಾಚಾರ ಪ್ರಕರಣಗಳು. ಹೀಗಾಗಿ ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳುವ ಸಾಧ್ಯತೆಗಳು ತೀಕಾ ಕಡಿಮೆ ಎನ್ನಲಾಗ್ತಿದೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more