ಪೆಂಡಾಲ್‌ನಲ್ಲಿ ಗಣೇಶನ ಮೂರ್ತಿ ಜೊತೆ ಸಾವರ್ಕರ್‌ ಚಿತ್ರ ಇಡ್ತೇವೆ!

ಪೆಂಡಾಲ್‌ನಲ್ಲಿ ಗಣೇಶನ ಮೂರ್ತಿ ಜೊತೆ ಸಾವರ್ಕರ್‌ ಚಿತ್ರ ಇಡ್ತೇವೆ!

Published : Aug 19, 2022, 04:50 PM IST

ರಾಜ್ಯದಲ್ಲಿ ಸಾವರ್ಕರ್ ವಿವಾದಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ಗಣೇಶೋತ್ಸವದ ಜೊತೆ ಸಾವರ್ಕರ್‌ ಅಭಿಯಾನವನ್ನು ನಡೆಸಲು ಹಿಂದೂ ಸಂಘಟನೆಗಳು ಪ್ಲಾನ್ ಮಾಡಿವೆ
 

ಬೆಂಗಳೂರು (ಆ.19): ರಾಜ್ಯಲ್ಲಿ ತಾರಕಕ್ಕೇರಿರುವ ಸಾವರ್ಕರ್‌ ಸಮರಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ಮುಂಬರುವ ಗಣೇಶೋತ್ಸವ ಸಂದರ್ಭದಲ್ಲಿ ಸಾವರ್ಕರ್‌ ಅಭಿಯಾನವನ್ನು ನಡೆಸಲು ಹಿಂದೂ ಸಂಘಟನೆಗಳು ಮುಂದಾಗಿವೆ. ಸಂಘಟನೆಗಳ ಅಭಿಯಾನದಿಂದ ರಾಜ್ಯದಲ್ಲಿ ಕಿಚ್ಚು ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.

ಗಣೇಶನ ಹಬ್ಬವನ್ನು ಬಳಸಿ ಸಾವರ್ಕರ್‌ ಕುರಿತಾಗಿ ಅಭಿಯಾನ ಆರಂಭಿಸಲು ಹಿಂದು ಸಂಘಟನೆಗಳು ಯೋಜನೆ ರೂಪಿಸಿವೆ. ಸಾವರ್ಕರ್‌ ಗಣೇಶೋತ್ಸವ ಎನ್ನುವ ಹೆಸರಲ್ಲಿ ಗಣೇಶನ ಪೆಂಡಾಲ್‌ ಹಾಕುವ ಯೋಜನೆ ರೂಪಿಸಲಾಗಿದೆ. ರಾಜ್ಯದ 10 ಸಾವಿರಕ್ಕೂ ಅಧಿಕ ಗಣೇಶೋತ್ಸವದ ಪೆಂಡಾಲ್‌ಗಳಲ್ಲಿ ಗಣೇಶನ ಮೂರ್ತಿಯೊಂದಿಗೆ ಸಾವರ್ಕರ್‌ ಚಿತ್ರವನ್ನು ಇಡಲಿದ್ದೇವೆ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ.

ಸಾವರ್ಕರ್ ಪುತ್ಥಳಿಗೆ ಮುಂದಾದ ಹಿಂದೂ ಸಂಘಟನೆಗಳು!

ರಾಜ್ಯದಲ್ಲಿ ಗಣೇಶೋತ್ಸವದೊಂದಿಗೆ ಸಾವರ್ಕರ್‌ ಉತ್ಸವವನ್ನೂ ನಾವು ಮಾಡಲಿದ್ದೇವೆ. ಪ್ರತಿ ಪೆಂಡಾಲ್‌ನಲ್ಲೂ ಅವರ ಚಿತ್ರವಿಟ್ಟು, ಅವರ ಬಗ್ಗೆ ತಿಳಿಸುವ ಕೆಲಸ ಮಾಡಲಿದ್ದೇವೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಹೇಳಿದ್ದಾರೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!