Republic Day 2022: ರಾಜ್‌ಪಥ್‌ನಲ್ಲಿ ಸಂಚರಿಸಲಿದೆ ಬೆಂಗಳೂರಲ್ಲೇ ತಯಾರಾದ ಡಿಆರ್‌ಡಿಓ ಸ್ತಬ್ಧಚಿತ್ರ!

Republic Day 2022: ರಾಜ್‌ಪಥ್‌ನಲ್ಲಿ ಸಂಚರಿಸಲಿದೆ ಬೆಂಗಳೂರಲ್ಲೇ ತಯಾರಾದ ಡಿಆರ್‌ಡಿಓ ಸ್ತಬ್ಧಚಿತ್ರ!

Published : Jan 23, 2022, 10:05 AM ISTUpdated : Jan 23, 2022, 01:52 PM IST

*ಬೆಂಗಳೂರಲ್ಲೇ ತಯಾರಾದ ಡಿಆರ್‌ಡಿಒ ಸ್ತಬ್ಧಚಿತ್ರ
*ವಾರ್ತಾ ಇಲಾಖೆಯ ಕರಕುಶಲ ವಸ್ತುಗಳ ಟ್ಯಾಬ್ಲೋ 
*ರಾಜ್‌ಪಥ್‌ನಲ್ಲಿ ಸಂಚರಿಸಲಿವೆ ರಾಜ್ಯದ 2 ಸ್ಥಬ್ಧ ಚಿತ್ರ!

ನವದೆಹಲಿ( ಜ. 23): ಈ ಬಾರಿಯ ಗಣರಾಜ್ಯೋತ್ಸವದಲ್ಲಿ (Republic Day 2022) ಕರ್ನಾಟಕದಿಂದ ಒಂದಲ್ಲ, ಎರಡು ಸ್ತಬ್ಧಚಿತ್ರ ಭಾಗವಹಿಸಲಿವೆ. ವಾರ್ತಾ ಇಲಾಖೆಯ ಕರಕುಶಲ ವಸ್ತುಗಳ ಟ್ಯಾಬ್ಲೋ ಒಂದಾದರೆ, ಬೆಂಗಳೂರಿನ ವಿಜ್ಞಾನಿಗಳೇ ನಿರ್ಮಾಣ ಮಾಡಿರುವ ಮತ್ತೊಂದು ಸ್ತಬ್ಧಚಿತ್ರ ಜ.26ರಂದು ರಾಜಪಥದಲ್ಲಿ ಸಂಚರಿಸಲಿದೆ. ಬೆಂಗಳೂರಲ್ಲೇ ತಯಾರಾದ ತೇಜಸ್‌ ಲಘು ಯುದ್ಧ ವಿಮಾನದಲ್ಲಿ ಬಳಸುವ ರಾಡಾರ್‌, ಸೆನ್ಸರ್‌, ಕ್ಷಿಪಣಿ, ಬಾಂಬ್‌ಗಳನ್ನು ಬಿಂಬಿಸುವ ಡಿಆರ್‌ಡಿಒ (ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ - DRDO)ದ ಸ್ತಬ್ಧಚಿತ್ರ ಇದಾಗಿದೆ.

ಇದನ್ನೂ ಓದಿ: Republic Day Parade Tableau : ಕೇರಳ ರಾಜ್ಯದ ಸ್ತಬ್ದಚಿತ್ರ ತಿರಸ್ಕೃತ, ಅದಕ್ಕೆ ಇಲ್ಲಿವೆ ಕಾರಣ

ನವದೆಹಲಿಯಲ್ಲಿ ಜ.26ರಂದು ನಡೆಯಲಿರುವ ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಭಾಗವಹಿಸಲಿರುವ ಡಿಆರ್‌ಡಿಒ(ಡಿಫೆನ್ಸ್‌ ರಿಸಚ್‌ರ್‍ ಆ್ಯಂಡ್‌ ಡೆಲವಪ್‌ಮೆಂಟ್‌ ಆರ್ಗನೈಸೇಶನ್‌)ದ ಟ್ಯಾಬ್ಲೋದಲ್ಲಿ ಬೆಂಗಳೂರಿನ ಕೇಂದ್ರದಲ್ಲಿ ತೇಜಸ್‌ ಲಘು ಯುದ್ಧವಿಮಾನದಲ್ಲಿ ಬಳಸುವ ಸಲುವಾಗಿ ಅಭಿವೃದ್ಧಿಪಡಿಸಿರುವ ರಾಡಾರ್‌, ಸೆನ್ಸಾರ್‌, ಕ್ಷಿಪಣಿ, ಬಾಂಬ್‌ಗಳ ಪ್ರದರ್ಶನವಾಗಲಿದೆ. ಬೆಂಗಳೂರು ಕೇಂದ್ರದ ವಿಜ್ಞಾನಿಗಳೇ ಟ್ಯಾಬ್ಲೋ ನಿರ್ಮಾಣ ಮಾಡಿರುವುದಾಗಿ ಕೇಂದ್ರದ ವಿಜ್ಞಾನಿ ಮಹೇಶ್‌ಬಾಬು ತಿಳಿಸಿದ್ದಾರೆ.

ಇನ್ನು ಕರ್ನಾಟಕ- ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು ಎನ್ನುವ ಧ್ಯೇಯದಡಿ ಸಿದ್ಧಗೊಳ್ಳುತ್ತಿರುವ ಸ್ತಬ್ಧಚಿತ್ರ ಗಣರಾಜ್ಯೋತ್ಸವ ದಿನದ ಮೆರವಣಿಗೆಯಲ್ಲಿ ಸಾಗಲಿದ್ದು, ವಿಶ್ವಪ್ರಸಿದ್ಧ ಚನ್ನಪಟ್ಟಣ ಗೊಂಬೆ, ಕಿನ್ನಾಳ ಗೊಂಬೆ, ಇಳಕಲ್‌ ಸೀರೆ, ಉಡುಪಿ ಸೀರೆ, ಮೈಸೂರು ಗಾಂಜೀಫ ಕಲೆಗಳೂ ಸೇರಿದಂತೆ ಜಿಐ ಟ್ಯಾಗ್‌ ಇರುವ 16 ಕರಕುಶಲ ವಸ್ತುಗಳು ಅನಾವರಣಗೊಳ್ಳಲಿವೆ.

23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
Read more