Republic Day 2022: ರಾಜ್‌ಪಥ್‌ನಲ್ಲಿ ಸಂಚರಿಸಲಿದೆ ಬೆಂಗಳೂರಲ್ಲೇ ತಯಾರಾದ ಡಿಆರ್‌ಡಿಓ ಸ್ತಬ್ಧಚಿತ್ರ!

Republic Day 2022: ರಾಜ್‌ಪಥ್‌ನಲ್ಲಿ ಸಂಚರಿಸಲಿದೆ ಬೆಂಗಳೂರಲ್ಲೇ ತಯಾರಾದ ಡಿಆರ್‌ಡಿಓ ಸ್ತಬ್ಧಚಿತ್ರ!

Published : Jan 23, 2022, 10:05 AM ISTUpdated : Jan 23, 2022, 01:52 PM IST

*ಬೆಂಗಳೂರಲ್ಲೇ ತಯಾರಾದ ಡಿಆರ್‌ಡಿಒ ಸ್ತಬ್ಧಚಿತ್ರ
*ವಾರ್ತಾ ಇಲಾಖೆಯ ಕರಕುಶಲ ವಸ್ತುಗಳ ಟ್ಯಾಬ್ಲೋ 
*ರಾಜ್‌ಪಥ್‌ನಲ್ಲಿ ಸಂಚರಿಸಲಿವೆ ರಾಜ್ಯದ 2 ಸ್ಥಬ್ಧ ಚಿತ್ರ!

ನವದೆಹಲಿ( ಜ. 23): ಈ ಬಾರಿಯ ಗಣರಾಜ್ಯೋತ್ಸವದಲ್ಲಿ (Republic Day 2022) ಕರ್ನಾಟಕದಿಂದ ಒಂದಲ್ಲ, ಎರಡು ಸ್ತಬ್ಧಚಿತ್ರ ಭಾಗವಹಿಸಲಿವೆ. ವಾರ್ತಾ ಇಲಾಖೆಯ ಕರಕುಶಲ ವಸ್ತುಗಳ ಟ್ಯಾಬ್ಲೋ ಒಂದಾದರೆ, ಬೆಂಗಳೂರಿನ ವಿಜ್ಞಾನಿಗಳೇ ನಿರ್ಮಾಣ ಮಾಡಿರುವ ಮತ್ತೊಂದು ಸ್ತಬ್ಧಚಿತ್ರ ಜ.26ರಂದು ರಾಜಪಥದಲ್ಲಿ ಸಂಚರಿಸಲಿದೆ. ಬೆಂಗಳೂರಲ್ಲೇ ತಯಾರಾದ ತೇಜಸ್‌ ಲಘು ಯುದ್ಧ ವಿಮಾನದಲ್ಲಿ ಬಳಸುವ ರಾಡಾರ್‌, ಸೆನ್ಸರ್‌, ಕ್ಷಿಪಣಿ, ಬಾಂಬ್‌ಗಳನ್ನು ಬಿಂಬಿಸುವ ಡಿಆರ್‌ಡಿಒ (ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ - DRDO)ದ ಸ್ತಬ್ಧಚಿತ್ರ ಇದಾಗಿದೆ.

ಇದನ್ನೂ ಓದಿ: Republic Day Parade Tableau : ಕೇರಳ ರಾಜ್ಯದ ಸ್ತಬ್ದಚಿತ್ರ ತಿರಸ್ಕೃತ, ಅದಕ್ಕೆ ಇಲ್ಲಿವೆ ಕಾರಣ

ನವದೆಹಲಿಯಲ್ಲಿ ಜ.26ರಂದು ನಡೆಯಲಿರುವ ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಭಾಗವಹಿಸಲಿರುವ ಡಿಆರ್‌ಡಿಒ(ಡಿಫೆನ್ಸ್‌ ರಿಸಚ್‌ರ್‍ ಆ್ಯಂಡ್‌ ಡೆಲವಪ್‌ಮೆಂಟ್‌ ಆರ್ಗನೈಸೇಶನ್‌)ದ ಟ್ಯಾಬ್ಲೋದಲ್ಲಿ ಬೆಂಗಳೂರಿನ ಕೇಂದ್ರದಲ್ಲಿ ತೇಜಸ್‌ ಲಘು ಯುದ್ಧವಿಮಾನದಲ್ಲಿ ಬಳಸುವ ಸಲುವಾಗಿ ಅಭಿವೃದ್ಧಿಪಡಿಸಿರುವ ರಾಡಾರ್‌, ಸೆನ್ಸಾರ್‌, ಕ್ಷಿಪಣಿ, ಬಾಂಬ್‌ಗಳ ಪ್ರದರ್ಶನವಾಗಲಿದೆ. ಬೆಂಗಳೂರು ಕೇಂದ್ರದ ವಿಜ್ಞಾನಿಗಳೇ ಟ್ಯಾಬ್ಲೋ ನಿರ್ಮಾಣ ಮಾಡಿರುವುದಾಗಿ ಕೇಂದ್ರದ ವಿಜ್ಞಾನಿ ಮಹೇಶ್‌ಬಾಬು ತಿಳಿಸಿದ್ದಾರೆ.

ಇನ್ನು ಕರ್ನಾಟಕ- ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು ಎನ್ನುವ ಧ್ಯೇಯದಡಿ ಸಿದ್ಧಗೊಳ್ಳುತ್ತಿರುವ ಸ್ತಬ್ಧಚಿತ್ರ ಗಣರಾಜ್ಯೋತ್ಸವ ದಿನದ ಮೆರವಣಿಗೆಯಲ್ಲಿ ಸಾಗಲಿದ್ದು, ವಿಶ್ವಪ್ರಸಿದ್ಧ ಚನ್ನಪಟ್ಟಣ ಗೊಂಬೆ, ಕಿನ್ನಾಳ ಗೊಂಬೆ, ಇಳಕಲ್‌ ಸೀರೆ, ಉಡುಪಿ ಸೀರೆ, ಮೈಸೂರು ಗಾಂಜೀಫ ಕಲೆಗಳೂ ಸೇರಿದಂತೆ ಜಿಐ ಟ್ಯಾಗ್‌ ಇರುವ 16 ಕರಕುಶಲ ವಸ್ತುಗಳು ಅನಾವರಣಗೊಳ್ಳಲಿವೆ.

53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more