Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!

Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!

Published : Dec 12, 2025, 12:52 PM IST

ಶಾಲೆಯ ಶೌಚಾಲಯಗಳೆಂದರೆ ಅಲ್ಲಿ ಮೂಗು ಮುಚ್ಚಿಕೊಂಡೇ ಹೋಗಬೇಕು, ಕೊಳಕು ಶೌಚಾಲಯವನ್ನು ವಿದ್ಯಾರ್ಥಿಗಳಿಂದ ಸ್ವಚ್ಛ ಮಾಡಿಸುವಂತಿಲ್ಲ! ಹಾಗಂತ ಸಿಬ್ಬಂದಿ ನೇಮಿಸಿ ನಿರ್ವಹಣೆ ಮಾಡಲು ಸಾಧ್ಯವಿಲ್ಲ.

ಉಡುಪಿ (ಡಿ.12): ಶಾಲೆಯ ಶೌಚಾಲಯಗಳೆಂದರೆ ಅಲ್ಲಿ ಮೂಗು ಮುಚ್ಚಿಕೊಂಡೇ ಹೋಗಬೇಕು, ಕೊಳಕು ಶೌಚಾಲಯವನ್ನು ವಿದ್ಯಾರ್ಥಿಗಳಿಂದ ಸ್ವಚ್ಛ ಮಾಡಿಸುವಂತಿಲ್ಲ! ಹಾಗಂತ ಸಿಬ್ಬಂದಿ ನೇಮಿಸಿ ನಿರ್ವಹಣೆ ಮಾಡಲು ಸಾಧ್ಯವಿಲ್ಲ. ಈ ಸಮಸ್ಯೆಗೆ ಉಡುಪಿಯಲ್ಲಿ ಪರಿಹಾರ ಸಿಕ್ಕಿದೆ. ಸರಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ ಹೊರಟಿದೆ. ಖಾಸಗಿ  ಸಹಭಾಗಿತ್ವದಿಂದ ಶಿಕ್ಷಣ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡುತ್ತಾ ಬಂದಿರುವ ಉಡುಪಿಯಲ್ಲಿ, ಇದೀಗ ಹೊಸ ಅಭಿಯಾನ ಶುರುವಾಗಿದೆ. ಹೋಟೆಲ್ ಉದ್ಯಮದಲ್ಲಿ ಸ್ವಚ್ಛತೆ ಹಾಗೂ ಗುಣಮಟ್ಟಕ್ಕೆ ಹೆಸರಾದ ಗೋಪಾಡಿ ಶ್ರೀನಿವಾಸ ರಾವ್, ತಮ್ಮ ನೇತೃತ್ವದ ಗೋಪಾಡಿ ಶ್ರೀನಿವಾಸ -ರುಕ್ಮಿಣಿ ಫೌಂಡೇಶನ್ ಮೂಲಕ, ದೇಶದಲ್ಲೇ ಮೊದಲು ಎನ್ನಬಹುದಾದ ಸಾಮಾಜಿಕ ಕಳಕಳಿಯ ಕೆಲಸಕ್ಕೆ ಚಾಲನೆ ನೀಡಿದ್ದಾರೆ. ತನ್ನ ಊರಿನ ಸರಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ವಾಹನವೊಂದನ್ನು ಕೊಡುಗೆಯಾಗಿ ನೀಡಿದ್ದಾರೆ.

ವಾಹನವನ್ನು ಕೊಡುಗೆಯಾಗಿ ಕೊಟ್ಟು ಅವರು ಸುಮ್ಮನಾಗಿಲ್ಲ, ಇಬ್ಬರು ಸಿಬ್ಬಂದಿಗಳನ್ನು ನೇಮಕ ಮಾಡಿ, ಸ್ವಚ್ಛತೆಗೆ ಬೇಕಾದ ಎಲ್ಲಾ ಪರಿಕರ ಸಹಿತ ಸಜ್ಜುಗೊಳಿಸಿದ್ದಾರೆ. ಈ ಪರಿಸರದ 24 ಸರಕಾರಿ ಶಾಲೆಗಳಲ್ಲಿ, ಈ ರಥ ಸಂಚರಿಸಲಿದೆ, ಪ್ರತಿಯೊಂದು ಶಾಲೆಗೆ ವಾರದಲ್ಲಿ ಎರಡು ಬಾರಿ ಭೇಟಿಕೊಟ್ಟು ಟಾಯ್ಲೆಟ್ ಸ್ವಚ್ಛಗೊಳಿಸುವ ಸತ್ಕಾರ್ಯ ಕೈಗೊಳ್ಳಲಾಗಿದೆ. ಪ್ರಧಾನಿ ಮೋದಿ ಅವರ ಸ್ವಚ್ಛ ಭಾರತ ಅಭಿಯಾನದಿಂದ ಸ್ಪೂರ್ತಿ ಪಡೆದ ಶ್ರೀನಿವಾಸ ರಾವ್, ಸರಕಾರಿ ಶಾಲೆಗಳ ಸ್ವಚ್ಛತೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಈ ಸಹಾಯ ಹಸ್ತ ಚಾಚಿದ್ದಾರೆ. ವಿಶೇಷವಾಗಿ ಹೆಣ್ಣು ಮಕ್ಕಳು ಶೌಚಾಲಯದಲ್ಲಿ ಸ್ವಚ್ಛತೆ ಇಲ್ಲದ ಕಾರಣಕ್ಕೆ ನೀರು ಕುಡಿಯದೆ ಆರೋಗ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಮನನೊಂದ ಶ್ರೀನಿವಾಸ ರಾವ್ ಈ ಮಹಾ ಕಾರ್ಯಕ್ಕೆ ಮುಂದಾಗಿದ್ದಾರೆ.

ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹಾಗೂ ಭೀಮನಕಟ್ಟೆ ಮಠದ ಸ್ವಾಮೀಜಿಗಳ ಮೂಲಕ ಈ ಯೋಜನೆಗೆ ಚಾಲನೆ ದೊರೆತಿದೆ. ಪರಿಸರದ 24 ಶಾಲೆಗಳು ಈ ಯೋಜನೆಯ ಪ್ರಯೋಜನ ಪಡೆಯಲಿವೆ. ತಮ್ಮ ಟ್ರಸ್ಟ್ ಅಸ್ತಿತ್ವದಲ್ಲಿ ಇರುವವರೆಗೂ ಈ ಯೋಜನೆ ಮುಂದುವರೆಯಲಿದೆ ಎಂದು ಶ್ರೀನಿವಾಸರಾವ್ ಭರವಸೆ ನೀಡಿದ್ದಾರೆ. ಈಗಾಗಲೇ ತಮ್ಮ ಈಶಾನ್ಯ ದ ರೆಸ್ಡೋರೆಂಟ್ ಮೂಲಕ ಆಹಾರ ಉದ್ಯಮದಲ್ಲಿ ಆಂಧ್ರಪ್ರದೇಶ, ಬೆಂಗಳೂರು ಮತ್ತು ಕುಂದಾಪುರದಲ್ಲಿ ಹೆಸರುವಾಸಿಯಾಗಿರುವ ಈ ಸಮೂಹ, ಸ್ವಚ್ಛತಾ ರಥದ ಮೂಲಕ ದೇಶಕ್ಕೆ ಮಾದರಿ ಯೋಜನೆ ಯೊಂದನ್ನು ಕೊಡುಗೆಯಾಗಿ ಕೊಟ್ಟಿದೆ. ಈ ಯೋಜನೆಯಿಂದ ಸ್ಪೂರ್ತಿ ಪಡೆದು, ಊರದಾನಿಗಳ ನೆರವಿನೊಂದಿಗೆ ಎಲ್ಲಾ ಶಾಲೆಗಳಲ್ಲೂ ಶೌಚಾಲಯ ಸ್ವಚ್ಛತೆಗೆ ಆದ್ಯತೆ ದೊರಕಲಿ ಎನ್ನುವುದು ಜಿಎಸ್ಆರ್ ಫೌಂಡೇಶನ್ ಆಶಯವಾಗಿದೆ.

26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
Read more