Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!

Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!

Published : Dec 12, 2025, 12:52 PM IST

ಶಾಲೆಯ ಶೌಚಾಲಯಗಳೆಂದರೆ ಅಲ್ಲಿ ಮೂಗು ಮುಚ್ಚಿಕೊಂಡೇ ಹೋಗಬೇಕು, ಕೊಳಕು ಶೌಚಾಲಯವನ್ನು ವಿದ್ಯಾರ್ಥಿಗಳಿಂದ ಸ್ವಚ್ಛ ಮಾಡಿಸುವಂತಿಲ್ಲ! ಹಾಗಂತ ಸಿಬ್ಬಂದಿ ನೇಮಿಸಿ ನಿರ್ವಹಣೆ ಮಾಡಲು ಸಾಧ್ಯವಿಲ್ಲ.

ಉಡುಪಿ (ಡಿ.12): ಶಾಲೆಯ ಶೌಚಾಲಯಗಳೆಂದರೆ ಅಲ್ಲಿ ಮೂಗು ಮುಚ್ಚಿಕೊಂಡೇ ಹೋಗಬೇಕು, ಕೊಳಕು ಶೌಚಾಲಯವನ್ನು ವಿದ್ಯಾರ್ಥಿಗಳಿಂದ ಸ್ವಚ್ಛ ಮಾಡಿಸುವಂತಿಲ್ಲ! ಹಾಗಂತ ಸಿಬ್ಬಂದಿ ನೇಮಿಸಿ ನಿರ್ವಹಣೆ ಮಾಡಲು ಸಾಧ್ಯವಿಲ್ಲ. ಈ ಸಮಸ್ಯೆಗೆ ಉಡುಪಿಯಲ್ಲಿ ಪರಿಹಾರ ಸಿಕ್ಕಿದೆ. ಸರಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ ಹೊರಟಿದೆ. ಖಾಸಗಿ  ಸಹಭಾಗಿತ್ವದಿಂದ ಶಿಕ್ಷಣ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡುತ್ತಾ ಬಂದಿರುವ ಉಡುಪಿಯಲ್ಲಿ, ಇದೀಗ ಹೊಸ ಅಭಿಯಾನ ಶುರುವಾಗಿದೆ. ಹೋಟೆಲ್ ಉದ್ಯಮದಲ್ಲಿ ಸ್ವಚ್ಛತೆ ಹಾಗೂ ಗುಣಮಟ್ಟಕ್ಕೆ ಹೆಸರಾದ ಗೋಪಾಡಿ ಶ್ರೀನಿವಾಸ ರಾವ್, ತಮ್ಮ ನೇತೃತ್ವದ ಗೋಪಾಡಿ ಶ್ರೀನಿವಾಸ -ರುಕ್ಮಿಣಿ ಫೌಂಡೇಶನ್ ಮೂಲಕ, ದೇಶದಲ್ಲೇ ಮೊದಲು ಎನ್ನಬಹುದಾದ ಸಾಮಾಜಿಕ ಕಳಕಳಿಯ ಕೆಲಸಕ್ಕೆ ಚಾಲನೆ ನೀಡಿದ್ದಾರೆ. ತನ್ನ ಊರಿನ ಸರಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ವಾಹನವೊಂದನ್ನು ಕೊಡುಗೆಯಾಗಿ ನೀಡಿದ್ದಾರೆ.

ವಾಹನವನ್ನು ಕೊಡುಗೆಯಾಗಿ ಕೊಟ್ಟು ಅವರು ಸುಮ್ಮನಾಗಿಲ್ಲ, ಇಬ್ಬರು ಸಿಬ್ಬಂದಿಗಳನ್ನು ನೇಮಕ ಮಾಡಿ, ಸ್ವಚ್ಛತೆಗೆ ಬೇಕಾದ ಎಲ್ಲಾ ಪರಿಕರ ಸಹಿತ ಸಜ್ಜುಗೊಳಿಸಿದ್ದಾರೆ. ಈ ಪರಿಸರದ 24 ಸರಕಾರಿ ಶಾಲೆಗಳಲ್ಲಿ, ಈ ರಥ ಸಂಚರಿಸಲಿದೆ, ಪ್ರತಿಯೊಂದು ಶಾಲೆಗೆ ವಾರದಲ್ಲಿ ಎರಡು ಬಾರಿ ಭೇಟಿಕೊಟ್ಟು ಟಾಯ್ಲೆಟ್ ಸ್ವಚ್ಛಗೊಳಿಸುವ ಸತ್ಕಾರ್ಯ ಕೈಗೊಳ್ಳಲಾಗಿದೆ. ಪ್ರಧಾನಿ ಮೋದಿ ಅವರ ಸ್ವಚ್ಛ ಭಾರತ ಅಭಿಯಾನದಿಂದ ಸ್ಪೂರ್ತಿ ಪಡೆದ ಶ್ರೀನಿವಾಸ ರಾವ್, ಸರಕಾರಿ ಶಾಲೆಗಳ ಸ್ವಚ್ಛತೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಈ ಸಹಾಯ ಹಸ್ತ ಚಾಚಿದ್ದಾರೆ. ವಿಶೇಷವಾಗಿ ಹೆಣ್ಣು ಮಕ್ಕಳು ಶೌಚಾಲಯದಲ್ಲಿ ಸ್ವಚ್ಛತೆ ಇಲ್ಲದ ಕಾರಣಕ್ಕೆ ನೀರು ಕುಡಿಯದೆ ಆರೋಗ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಮನನೊಂದ ಶ್ರೀನಿವಾಸ ರಾವ್ ಈ ಮಹಾ ಕಾರ್ಯಕ್ಕೆ ಮುಂದಾಗಿದ್ದಾರೆ.

ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹಾಗೂ ಭೀಮನಕಟ್ಟೆ ಮಠದ ಸ್ವಾಮೀಜಿಗಳ ಮೂಲಕ ಈ ಯೋಜನೆಗೆ ಚಾಲನೆ ದೊರೆತಿದೆ. ಪರಿಸರದ 24 ಶಾಲೆಗಳು ಈ ಯೋಜನೆಯ ಪ್ರಯೋಜನ ಪಡೆಯಲಿವೆ. ತಮ್ಮ ಟ್ರಸ್ಟ್ ಅಸ್ತಿತ್ವದಲ್ಲಿ ಇರುವವರೆಗೂ ಈ ಯೋಜನೆ ಮುಂದುವರೆಯಲಿದೆ ಎಂದು ಶ್ರೀನಿವಾಸರಾವ್ ಭರವಸೆ ನೀಡಿದ್ದಾರೆ. ಈಗಾಗಲೇ ತಮ್ಮ ಈಶಾನ್ಯ ದ ರೆಸ್ಡೋರೆಂಟ್ ಮೂಲಕ ಆಹಾರ ಉದ್ಯಮದಲ್ಲಿ ಆಂಧ್ರಪ್ರದೇಶ, ಬೆಂಗಳೂರು ಮತ್ತು ಕುಂದಾಪುರದಲ್ಲಿ ಹೆಸರುವಾಸಿಯಾಗಿರುವ ಈ ಸಮೂಹ, ಸ್ವಚ್ಛತಾ ರಥದ ಮೂಲಕ ದೇಶಕ್ಕೆ ಮಾದರಿ ಯೋಜನೆ ಯೊಂದನ್ನು ಕೊಡುಗೆಯಾಗಿ ಕೊಟ್ಟಿದೆ. ಈ ಯೋಜನೆಯಿಂದ ಸ್ಪೂರ್ತಿ ಪಡೆದು, ಊರದಾನಿಗಳ ನೆರವಿನೊಂದಿಗೆ ಎಲ್ಲಾ ಶಾಲೆಗಳಲ್ಲೂ ಶೌಚಾಲಯ ಸ್ವಚ್ಛತೆಗೆ ಆದ್ಯತೆ ದೊರಕಲಿ ಎನ್ನುವುದು ಜಿಎಸ್ಆರ್ ಫೌಂಡೇಶನ್ ಆಶಯವಾಗಿದೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more