ಸಾವರ್ಕರ್ ಪುತ್ಥಳಿಗೆ ಮುಂದಾದ ಹಿಂದೂ ಸಂಘಟನೆಗಳು!

ಸಾವರ್ಕರ್ ಪುತ್ಥಳಿಗೆ ಮುಂದಾದ ಹಿಂದೂ ಸಂಘಟನೆಗಳು!

Published : Aug 18, 2022, 03:44 PM IST

ಉಡುಪಿ ಸಾವರ್ಕರ್‌ ಬ್ಯಾನರ್ ವಿವಾದಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಕಾಂಗ್ರೆಸ್‌, ಎಸ್‌ಡಿಪಿಐಗೆ ತಿರುಗೇಟು ನೀಡಲು, ಹಿಂದೂ ಸಂಘಟನೆಗಳು ಸಾವರ್ಕರ್ ಪುತ್ಥಳಿ ನಿರ್ಮಾಣಕ್ಕೆ ಮುಂದಾಗಿದ್ದು, ಅನುಮತಿ ಕೋರಿ ನಗರಸಭೆಗೆ ಪತ್ರ ಬರೆದಿದ್ದಾರೆ.

ಉಡುಪಿ (ಆ. 18): ವೀರ್‌ ಸಾವರ್ಕರ್‌ ಸಂಘರ್ಷಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ಇಲ್ಲಿನ ಬ್ರಹ್ಮಗಿರಿ ಸರ್ಕಲ್‌ನಲ್ಲಿ ವೀರ್‌ ಸಾವರ್ಕರ್‌ ಅವರ ಪುತ್ಥಳಿಯನ್ನು  ಸ್ಥಾಪನೆ ಮಾಡಲು ನಗರಸಭೆಗೆ ಬಿಜೆಪಿ ಮುಖಂಡ ಪತ್ರ ಬರೆದಿದ್ದಾರೆ. ಇದರೊಂದಿಗೆ ವೀರ್‌ ಸಾವರ್ಕರ್‌ ಸಂಘರ್ಷ ಇನ್ನಷ್ಟು ಜೋರಾಗುವ ಲಕ್ಷಣ ಕಂಡಿದೆ.

ಸಾವರ್ಕರ್‌ ಫ್ಲೆಕ್ಸ್‌ಅನ್ನು ವಿರೋಧಿಸಿದ್ದ ಕಾಂಗ್ರೆಸ್‌, ಎಸ್‌ಡಿಪಿಐಗೆ ತಿರುಗೇಟು ನೀಡಲು ಹಿಂದು ಸಂಘಟನೆಗಳು ಮುಂದಾಗಿವೆ. ಈಗ ಫ್ಲೆಕ್ಸ್‌ ಅಲ್ಲ ಪುತ್ಥಳಿಯನ್ನೇ ಸ್ಥಾಪನೆ ಮಾಡುತ್ತೇವೆ ಎಂದು ಬಿಜೆಪಿ ಮುಖಂಡ ಯಶ್‌ಪಾಲ್‌ ಸುವರ್ಣ ಹೇಳಿದ್ದಾರೆ. ಈ ಕುರಿತಾಗಿ ನಗರಸಭೆ ಮುಖಂಡರೂ ಆಗಿರುವ ಯಶ್‌ಪಾಲ್‌ ಸುವರ್ಣ, ಆಯುಕ್ತರಿಗೆ ಪತ್ರವನ್ನು ಬರೆದಿದ್ದಾರೆ.

ಸಾವರ್ಕರ್ ಆಯ್ತು, ಈಗ ಗೋಡ್ಸೆ ಫ್ಲೆಕ್ಸ್: ಮಂಗಳೂರಿನಲ್ಲಿ ಹಿಂದೂ ಮಹಾಸಭಾದಿಂದ ಗೋಡ್ಸೆಗೆ ಗೌರವ!

ಸಾವರ್ಕರ್‌ ಫ್ಲೆಕ್ಸ್ ಹಾಕಿದ್ದಕ್ಕೆ ಕಾಂಗ್ರೆಸ್ ವಿರೋಧಿಸಿತ್ತು. ಈಗ ಫ್ಲೆಕ್ಸ್‌ ಅಲ್ಲ ನಾವು ಪುತ್ಥಳಿಯನ್ನೇ ನಿರ್ಮಾಣ ಮಾಡ್ತೀವಿ ಎಂದು ಹಿಂದೂ ಸಂಘಟನೆಗಳು ಹೇಳಿವೆ. 'ಟಿಪ್ಪು ಮತ್ತು ಸಾವರ್ಕರ್‌ ಅವರ ನಡುವೆ ಹಗಲು-ರಾತ್ರಿಯ ವ್ಯತ್ಯಾಸವಿದೆ. ಟಿಪ್ಪು ಸುಲ್ತಾನ್‌ಗೂ ಸ್ವಾತಂತ್ರ್ಯ ಹೋರಾಟಕ್ಕೂ ಏನು ಸಂಬಂಧ. ನಾನು ಕಾನೂನಾತ್ಮಕವಾಗಿ ಅನುಮತಿ ಕೇಳಿದ್ದೇನೆ. ಇದಕ್ಕೆ ಅನುಮತಿ ಸಿಗುವ ವಿಶ್ವಾಸವಿದೆ' ಎಂದು ಯಶ್‌ಪಾಲ್‌ ಸುವರ್ಣ ಹೇಳಿದ್ದಾರೆ.

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
Read more