ಸಾವರ್ಕರ್ ಪುತ್ಥಳಿಗೆ ಮುಂದಾದ ಹಿಂದೂ ಸಂಘಟನೆಗಳು!

ಸಾವರ್ಕರ್ ಪುತ್ಥಳಿಗೆ ಮುಂದಾದ ಹಿಂದೂ ಸಂಘಟನೆಗಳು!

Published : Aug 18, 2022, 03:44 PM IST

ಉಡುಪಿ ಸಾವರ್ಕರ್‌ ಬ್ಯಾನರ್ ವಿವಾದಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಕಾಂಗ್ರೆಸ್‌, ಎಸ್‌ಡಿಪಿಐಗೆ ತಿರುಗೇಟು ನೀಡಲು, ಹಿಂದೂ ಸಂಘಟನೆಗಳು ಸಾವರ್ಕರ್ ಪುತ್ಥಳಿ ನಿರ್ಮಾಣಕ್ಕೆ ಮುಂದಾಗಿದ್ದು, ಅನುಮತಿ ಕೋರಿ ನಗರಸಭೆಗೆ ಪತ್ರ ಬರೆದಿದ್ದಾರೆ.

ಉಡುಪಿ (ಆ. 18): ವೀರ್‌ ಸಾವರ್ಕರ್‌ ಸಂಘರ್ಷಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ಇಲ್ಲಿನ ಬ್ರಹ್ಮಗಿರಿ ಸರ್ಕಲ್‌ನಲ್ಲಿ ವೀರ್‌ ಸಾವರ್ಕರ್‌ ಅವರ ಪುತ್ಥಳಿಯನ್ನು  ಸ್ಥಾಪನೆ ಮಾಡಲು ನಗರಸಭೆಗೆ ಬಿಜೆಪಿ ಮುಖಂಡ ಪತ್ರ ಬರೆದಿದ್ದಾರೆ. ಇದರೊಂದಿಗೆ ವೀರ್‌ ಸಾವರ್ಕರ್‌ ಸಂಘರ್ಷ ಇನ್ನಷ್ಟು ಜೋರಾಗುವ ಲಕ್ಷಣ ಕಂಡಿದೆ.

ಸಾವರ್ಕರ್‌ ಫ್ಲೆಕ್ಸ್‌ಅನ್ನು ವಿರೋಧಿಸಿದ್ದ ಕಾಂಗ್ರೆಸ್‌, ಎಸ್‌ಡಿಪಿಐಗೆ ತಿರುಗೇಟು ನೀಡಲು ಹಿಂದು ಸಂಘಟನೆಗಳು ಮುಂದಾಗಿವೆ. ಈಗ ಫ್ಲೆಕ್ಸ್‌ ಅಲ್ಲ ಪುತ್ಥಳಿಯನ್ನೇ ಸ್ಥಾಪನೆ ಮಾಡುತ್ತೇವೆ ಎಂದು ಬಿಜೆಪಿ ಮುಖಂಡ ಯಶ್‌ಪಾಲ್‌ ಸುವರ್ಣ ಹೇಳಿದ್ದಾರೆ. ಈ ಕುರಿತಾಗಿ ನಗರಸಭೆ ಮುಖಂಡರೂ ಆಗಿರುವ ಯಶ್‌ಪಾಲ್‌ ಸುವರ್ಣ, ಆಯುಕ್ತರಿಗೆ ಪತ್ರವನ್ನು ಬರೆದಿದ್ದಾರೆ.

ಸಾವರ್ಕರ್ ಆಯ್ತು, ಈಗ ಗೋಡ್ಸೆ ಫ್ಲೆಕ್ಸ್: ಮಂಗಳೂರಿನಲ್ಲಿ ಹಿಂದೂ ಮಹಾಸಭಾದಿಂದ ಗೋಡ್ಸೆಗೆ ಗೌರವ!

ಸಾವರ್ಕರ್‌ ಫ್ಲೆಕ್ಸ್ ಹಾಕಿದ್ದಕ್ಕೆ ಕಾಂಗ್ರೆಸ್ ವಿರೋಧಿಸಿತ್ತು. ಈಗ ಫ್ಲೆಕ್ಸ್‌ ಅಲ್ಲ ನಾವು ಪುತ್ಥಳಿಯನ್ನೇ ನಿರ್ಮಾಣ ಮಾಡ್ತೀವಿ ಎಂದು ಹಿಂದೂ ಸಂಘಟನೆಗಳು ಹೇಳಿವೆ. 'ಟಿಪ್ಪು ಮತ್ತು ಸಾವರ್ಕರ್‌ ಅವರ ನಡುವೆ ಹಗಲು-ರಾತ್ರಿಯ ವ್ಯತ್ಯಾಸವಿದೆ. ಟಿಪ್ಪು ಸುಲ್ತಾನ್‌ಗೂ ಸ್ವಾತಂತ್ರ್ಯ ಹೋರಾಟಕ್ಕೂ ಏನು ಸಂಬಂಧ. ನಾನು ಕಾನೂನಾತ್ಮಕವಾಗಿ ಅನುಮತಿ ಕೇಳಿದ್ದೇನೆ. ಇದಕ್ಕೆ ಅನುಮತಿ ಸಿಗುವ ವಿಶ್ವಾಸವಿದೆ' ಎಂದು ಯಶ್‌ಪಾಲ್‌ ಸುವರ್ಣ ಹೇಳಿದ್ದಾರೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more