ಸಾವರ್ಕರ್ ಪುತ್ಥಳಿಗೆ ಮುಂದಾದ ಹಿಂದೂ ಸಂಘಟನೆಗಳು!

ಸಾವರ್ಕರ್ ಪುತ್ಥಳಿಗೆ ಮುಂದಾದ ಹಿಂದೂ ಸಂಘಟನೆಗಳು!

Published : Aug 18, 2022, 03:44 PM IST

ಉಡುಪಿ ಸಾವರ್ಕರ್‌ ಬ್ಯಾನರ್ ವಿವಾದಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಕಾಂಗ್ರೆಸ್‌, ಎಸ್‌ಡಿಪಿಐಗೆ ತಿರುಗೇಟು ನೀಡಲು, ಹಿಂದೂ ಸಂಘಟನೆಗಳು ಸಾವರ್ಕರ್ ಪುತ್ಥಳಿ ನಿರ್ಮಾಣಕ್ಕೆ ಮುಂದಾಗಿದ್ದು, ಅನುಮತಿ ಕೋರಿ ನಗರಸಭೆಗೆ ಪತ್ರ ಬರೆದಿದ್ದಾರೆ.

ಉಡುಪಿ (ಆ. 18): ವೀರ್‌ ಸಾವರ್ಕರ್‌ ಸಂಘರ್ಷಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ಇಲ್ಲಿನ ಬ್ರಹ್ಮಗಿರಿ ಸರ್ಕಲ್‌ನಲ್ಲಿ ವೀರ್‌ ಸಾವರ್ಕರ್‌ ಅವರ ಪುತ್ಥಳಿಯನ್ನು  ಸ್ಥಾಪನೆ ಮಾಡಲು ನಗರಸಭೆಗೆ ಬಿಜೆಪಿ ಮುಖಂಡ ಪತ್ರ ಬರೆದಿದ್ದಾರೆ. ಇದರೊಂದಿಗೆ ವೀರ್‌ ಸಾವರ್ಕರ್‌ ಸಂಘರ್ಷ ಇನ್ನಷ್ಟು ಜೋರಾಗುವ ಲಕ್ಷಣ ಕಂಡಿದೆ.

ಸಾವರ್ಕರ್‌ ಫ್ಲೆಕ್ಸ್‌ಅನ್ನು ವಿರೋಧಿಸಿದ್ದ ಕಾಂಗ್ರೆಸ್‌, ಎಸ್‌ಡಿಪಿಐಗೆ ತಿರುಗೇಟು ನೀಡಲು ಹಿಂದು ಸಂಘಟನೆಗಳು ಮುಂದಾಗಿವೆ. ಈಗ ಫ್ಲೆಕ್ಸ್‌ ಅಲ್ಲ ಪುತ್ಥಳಿಯನ್ನೇ ಸ್ಥಾಪನೆ ಮಾಡುತ್ತೇವೆ ಎಂದು ಬಿಜೆಪಿ ಮುಖಂಡ ಯಶ್‌ಪಾಲ್‌ ಸುವರ್ಣ ಹೇಳಿದ್ದಾರೆ. ಈ ಕುರಿತಾಗಿ ನಗರಸಭೆ ಮುಖಂಡರೂ ಆಗಿರುವ ಯಶ್‌ಪಾಲ್‌ ಸುವರ್ಣ, ಆಯುಕ್ತರಿಗೆ ಪತ್ರವನ್ನು ಬರೆದಿದ್ದಾರೆ.

ಸಾವರ್ಕರ್ ಆಯ್ತು, ಈಗ ಗೋಡ್ಸೆ ಫ್ಲೆಕ್ಸ್: ಮಂಗಳೂರಿನಲ್ಲಿ ಹಿಂದೂ ಮಹಾಸಭಾದಿಂದ ಗೋಡ್ಸೆಗೆ ಗೌರವ!

ಸಾವರ್ಕರ್‌ ಫ್ಲೆಕ್ಸ್ ಹಾಕಿದ್ದಕ್ಕೆ ಕಾಂಗ್ರೆಸ್ ವಿರೋಧಿಸಿತ್ತು. ಈಗ ಫ್ಲೆಕ್ಸ್‌ ಅಲ್ಲ ನಾವು ಪುತ್ಥಳಿಯನ್ನೇ ನಿರ್ಮಾಣ ಮಾಡ್ತೀವಿ ಎಂದು ಹಿಂದೂ ಸಂಘಟನೆಗಳು ಹೇಳಿವೆ. 'ಟಿಪ್ಪು ಮತ್ತು ಸಾವರ್ಕರ್‌ ಅವರ ನಡುವೆ ಹಗಲು-ರಾತ್ರಿಯ ವ್ಯತ್ಯಾಸವಿದೆ. ಟಿಪ್ಪು ಸುಲ್ತಾನ್‌ಗೂ ಸ್ವಾತಂತ್ರ್ಯ ಹೋರಾಟಕ್ಕೂ ಏನು ಸಂಬಂಧ. ನಾನು ಕಾನೂನಾತ್ಮಕವಾಗಿ ಅನುಮತಿ ಕೇಳಿದ್ದೇನೆ. ಇದಕ್ಕೆ ಅನುಮತಿ ಸಿಗುವ ವಿಶ್ವಾಸವಿದೆ' ಎಂದು ಯಶ್‌ಪಾಲ್‌ ಸುವರ್ಣ ಹೇಳಿದ್ದಾರೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more