News Hour: ಉಡುಪಿ ವಿಡಿಯೋಕಾಂಡ, ತನಿಖೆಯಂತೂ ಶುರುವಾಯ್ತು, ತಾರ್ಕಿಕ ಅಂತ್ಯ ಸಿಗುತ್ತಾ?

News Hour: ಉಡುಪಿ ವಿಡಿಯೋಕಾಂಡ, ತನಿಖೆಯಂತೂ ಶುರುವಾಯ್ತು, ತಾರ್ಕಿಕ ಅಂತ್ಯ ಸಿಗುತ್ತಾ?

Published : Jul 29, 2023, 11:35 PM IST

ಉಡುಪಿ ವಿಡಿಯೋಕಾಂಡದ ವಿಚಾರದಲ್ಲಿ ಶನಿವಾರ ಮೂರು ಪ್ರಮುಖ ಬೆಳವಣಿಗೆಗಳು ಆಗಿವೆ. ಅದರೊಂದಿಗೆ ತನಿಖೆ ಕೂಡ ಆರಂಭವಾಗಿದ್ದು, ಈಗ ಈ ತನಿಖೆ ತಾರ್ಕಿಕ ಅಂತ್ಯ ಕಾಣುತ್ತಾ ಎನ್ನುವ ಅನುಮಾನ ವ್ಯಕ್ತವಾಗಿದೆ.
 

ಬೆಂಗಳೂರು (ಜು.29): ಉಡುಪಿ ವಿಡಿಯೋಕಾಂಡದ ವಿಚಾರವಾಗಿ ಜನಾಕ್ರೋಶ ವ್ಯಕ್ತವಾದ ಬೆನ್ನಲ್ಲಿಯೇ ತನಿಖಾಧಿಕಾರಿಯನ್ನು ಎಸ್‌ಪಿ ಬದಲಿಸಿದ್ದಾರೆ. ಕುಂದಾಪುರದ ಡಿವೈಎಸ್‌ಪಿ ಬೆಳ್ಳಿಯಪ್ಪ ಇನ್ನು ತನಿಖೆ ನಡೆಸಲಿದ್ದು, ಇದರ ಬೆನ್ನಲ್ಲಿಯೇ ಮೂವರು ಮುಸ್ಲಿಂ ವಿದ್ಯಾರ್ಥಿನಿಯರ ವಿಚಾರಣೆ ಅಜ್ಞಾತ ಸ್ಥಳದಲ್ಲಿ ನಡೆಸಲಾಗಿದೆ ಎನ್ನುವ ಮಾಹಿತಿಯೂ ಹೊರಬಿದ್ದಿದೆ.

ಇನ್ನು ಪ್ರಕರಣದಲ್ಲಿ ಸಿಎಂ ಸಿದ್ಧರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಪ್ರಕರಣ ತನಿಖಾ ಹಂತದಲ್ಲಿದ್ದು, ಬಿಜೆಪಿಯವರು ಹೆಣದ ಮೇಲೆ ರಾಜಕೀಯ ಮಾಡುವವರು ಎಂದು ಟೀಕಿಸಿದ್ದಾರೆ. ಇನ್ನು ಸಚಿವ ಪ್ರಿಯಾಂಕ್‌ ಖರ್ಗೆ, ಬಿಜೆಪಿಯವರು ಯಾರನ್ನು ನಂಬುತ್ತಾರೆ ಅನ್ನೋದನ್ನು ಮೊದಲು ಡಿಸೈಡ್‌ ಮಾಡಬೇಕು ಎಂದಿದ್ದಾರೆ.

ಉಡುಪಿ ವಿಡಿಯೋಕಾಂಡ, 11 ದಿನಗಳ ಬಳಿಕ ಆರೋಪಿ ವಿದ್ಯಾರ್ಥಿನಿಯರ ವಿಚಾರಣೆ!

ತನಿಖೆ ಆರಂಭವಾಗಿರುವ ಬೆನ್ನಲ್ಲಿಯೇ ನೇತ್ರಜ್ಯೋತಿ ಕಾಲೇಜಿನ ಎಲ್ಲಾ ಸಿಸಿಟಿವಿ ಫೂಟೇಜ್‌ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನಂತರದ ಹಂತವಾಗಿ ಕಾಲೇಜಿನ ಸನಿಹದ ಮೊಬೈಲ್‌ ಟವರ್‌ ಮೂಲಕ ಎಲ್ಲಾ ಕಾಲ್‌ ಡೀಟೇಲ್‌ಗಳನ್ನು ಪತ್ತೆ ಮಾಡುವ ಕೆಲಸವೂ ನಡೆಯಲಿದೆ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more