News Hour: ಉಡುಪಿ ವಿಡಿಯೋಕಾಂಡ, ತನಿಖೆಯಂತೂ ಶುರುವಾಯ್ತು, ತಾರ್ಕಿಕ ಅಂತ್ಯ ಸಿಗುತ್ತಾ?

News Hour: ಉಡುಪಿ ವಿಡಿಯೋಕಾಂಡ, ತನಿಖೆಯಂತೂ ಶುರುವಾಯ್ತು, ತಾರ್ಕಿಕ ಅಂತ್ಯ ಸಿಗುತ್ತಾ?

Published : Jul 29, 2023, 11:35 PM IST

ಉಡುಪಿ ವಿಡಿಯೋಕಾಂಡದ ವಿಚಾರದಲ್ಲಿ ಶನಿವಾರ ಮೂರು ಪ್ರಮುಖ ಬೆಳವಣಿಗೆಗಳು ಆಗಿವೆ. ಅದರೊಂದಿಗೆ ತನಿಖೆ ಕೂಡ ಆರಂಭವಾಗಿದ್ದು, ಈಗ ಈ ತನಿಖೆ ತಾರ್ಕಿಕ ಅಂತ್ಯ ಕಾಣುತ್ತಾ ಎನ್ನುವ ಅನುಮಾನ ವ್ಯಕ್ತವಾಗಿದೆ.
 

ಬೆಂಗಳೂರು (ಜು.29): ಉಡುಪಿ ವಿಡಿಯೋಕಾಂಡದ ವಿಚಾರವಾಗಿ ಜನಾಕ್ರೋಶ ವ್ಯಕ್ತವಾದ ಬೆನ್ನಲ್ಲಿಯೇ ತನಿಖಾಧಿಕಾರಿಯನ್ನು ಎಸ್‌ಪಿ ಬದಲಿಸಿದ್ದಾರೆ. ಕುಂದಾಪುರದ ಡಿವೈಎಸ್‌ಪಿ ಬೆಳ್ಳಿಯಪ್ಪ ಇನ್ನು ತನಿಖೆ ನಡೆಸಲಿದ್ದು, ಇದರ ಬೆನ್ನಲ್ಲಿಯೇ ಮೂವರು ಮುಸ್ಲಿಂ ವಿದ್ಯಾರ್ಥಿನಿಯರ ವಿಚಾರಣೆ ಅಜ್ಞಾತ ಸ್ಥಳದಲ್ಲಿ ನಡೆಸಲಾಗಿದೆ ಎನ್ನುವ ಮಾಹಿತಿಯೂ ಹೊರಬಿದ್ದಿದೆ.

ಇನ್ನು ಪ್ರಕರಣದಲ್ಲಿ ಸಿಎಂ ಸಿದ್ಧರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಪ್ರಕರಣ ತನಿಖಾ ಹಂತದಲ್ಲಿದ್ದು, ಬಿಜೆಪಿಯವರು ಹೆಣದ ಮೇಲೆ ರಾಜಕೀಯ ಮಾಡುವವರು ಎಂದು ಟೀಕಿಸಿದ್ದಾರೆ. ಇನ್ನು ಸಚಿವ ಪ್ರಿಯಾಂಕ್‌ ಖರ್ಗೆ, ಬಿಜೆಪಿಯವರು ಯಾರನ್ನು ನಂಬುತ್ತಾರೆ ಅನ್ನೋದನ್ನು ಮೊದಲು ಡಿಸೈಡ್‌ ಮಾಡಬೇಕು ಎಂದಿದ್ದಾರೆ.

ಉಡುಪಿ ವಿಡಿಯೋಕಾಂಡ, 11 ದಿನಗಳ ಬಳಿಕ ಆರೋಪಿ ವಿದ್ಯಾರ್ಥಿನಿಯರ ವಿಚಾರಣೆ!

ತನಿಖೆ ಆರಂಭವಾಗಿರುವ ಬೆನ್ನಲ್ಲಿಯೇ ನೇತ್ರಜ್ಯೋತಿ ಕಾಲೇಜಿನ ಎಲ್ಲಾ ಸಿಸಿಟಿವಿ ಫೂಟೇಜ್‌ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನಂತರದ ಹಂತವಾಗಿ ಕಾಲೇಜಿನ ಸನಿಹದ ಮೊಬೈಲ್‌ ಟವರ್‌ ಮೂಲಕ ಎಲ್ಲಾ ಕಾಲ್‌ ಡೀಟೇಲ್‌ಗಳನ್ನು ಪತ್ತೆ ಮಾಡುವ ಕೆಲಸವೂ ನಡೆಯಲಿದೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more