Cabinet Reshuffle: ಸಭೆಗೆ ನಾವು ಯಾರನ್ನೂ ಆಹ್ವಾನಿಸಿಲ್ಲ, ಸಂಚಲನಕ್ಕೆ ಉತ್ತರ ಕೊಟ್ಟ ಕತ್ತಿ

Cabinet Reshuffle: ಸಭೆಗೆ ನಾವು ಯಾರನ್ನೂ ಆಹ್ವಾನಿಸಿಲ್ಲ, ಸಂಚಲನಕ್ಕೆ ಉತ್ತರ ಕೊಟ್ಟ ಕತ್ತಿ

Published : Jan 24, 2022, 05:29 PM IST

 ಸಚಿವ ಉಮೇಶ ಕತ್ತಿ (Umesh Katti) ಅವರ ಬೆಳಗಾವಿ ನಿವಾಸದಲ್ಲಿಜಾರಕಿಹೊಳಿ ಸಹೋದರರು ಮತ್ತವರ ಆಪ್ತರನ್ನು ಹೊರತುಪಡಿಸಿ ಜಿಲ್ಲೆಯ ಸಂಸದರು, ಶಾಸಕರು ಸಭೆ ನಡೆಸಿದ್ದು ತೀವ್ರ ಸಂಚಲನ ಮೂಡಿಸಿದೆ. 

ಬೆಂಗಳೂರು (ಜ. 24): ಸಚಿವ ಉಮೇಶ ಕತ್ತಿ (Umesh Katti) ಅವರ ಬೆಳಗಾವಿ ನಿವಾಸದಲ್ಲಿಜಾರಕಿಹೊಳಿ ಸಹೋದರರು ಮತ್ತವರ ಆಪ್ತರನ್ನು ಹೊರತುಪಡಿಸಿ ಜಿಲ್ಲೆಯ ಸಂಸದರು, ಶಾಸಕರು ಸಭೆ ನಡೆಸಿದ್ದು ತೀವ್ರ ಸಂಚಲನ ಮೂಡಿಸಿದೆ. ಮುಂಬರಲಿರುವ ಸಂಪುಟ ಸಭೆ ವಿಸ್ತರಣೆ, ನಿಗಮ-ಮಂಡಳಿ ರಚನೆ ಬಗ್ಗೆ ನಿರಂತರ 3 ಗಂಟೆಗಳ ಕಾಲ ಚರ್ಚೆ ನಡೆಸಲಾಗಿದೆ ಎನ್ನಲಾಗಿದೆ. 

ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಂಸದರಾದ ಅಣ್ಣಾಸಾಹೇಬ ಜೊಲ್ಲೆ, ಈರಣ್ಣ ಕಡಾಡಿ, ಶಾಸಕರಾದ ಪಿ.ರಾಜೀವ್‌, ಮಹಾಂತೇಶ ದೊಡ್ಡಗೌಡರ, ಮಹಾದೇವಪ್ಪ ಯಾದವಾಡ, ಅಭಯ ಪಾಟೀಲ, ಅನಿಲ ಬೆನಕೆ, ವಿಧಾನ ಪರಿಷತ್‌ ಮಾಜಿ ಸದಸ್ಯ ಮಹಾತೇಂಶ ಕವಟಗಿಮಟ ಸಭೆಯಲ್ಲಿ ಪಾಲ್ಗೊಂಡಿದ್ದರು. ಬೆಳಗಾವಿ ಸಂಸದೆ ಮಂಗಲ ಅಂಗಡಿ ಅವರಿಗೆ ಆಹ್ವಾನ ನೀಡಿದ್ದರೂ ಬಂದಿರಲಿಲ್ಲ ಎನ್ನಲಾಗಿದೆ.

'ನಾವು ಯಾರಿಗೂ ಆಹ್ವಾನ ನೀಡಿಲ್ಲ. ಸಭೆಗೆ ಬಂದವರು ದೊಡ್ಡವರಲ್ಲ, ಬರದೇ ಇದ್ದವರು ಸಣ್ಣವರಲ್ಲ. ಮುಂದಿನ ತಾ.ಪಂ, ಜಿ. ಪಂ ಚುನಾವಣೆಯಲ್ಲಿ ಪಕ್ಷದ ಸಂಘಟನೆ ಬಗ್ಗೆ ಚರ್ಚಿಸಿದೆವು. ಕೆಲವರು ಬಂದರು, ಕೆಲವರು ಬಂದಿಲ್ಲ. ಯಾರು, ಯಾರನ್ನೂ ಹೊರಗಿಟ್ಟಿಲ್ಲ' ಎಂದು ಉಮೇಶ್ ಕತ್ತಿ ಸ್ಪಷ್ಟನೆ ನೀಡಿದರು. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more