ಅನಧಿಕೃತ ಖಾಸಗಿ ಶಾಲೆಗಳಿಗೆ ಸದ್ಯದ್ರಲ್ಲೇ ಬೀಳುತ್ತೆ ಬೀಗ: ಆ.14ರೊಳಗೆ ಮುಚ್ಚುವಂತೆ ಖಡಕ್ ಆದೇಶ !

ಅನಧಿಕೃತ ಖಾಸಗಿ ಶಾಲೆಗಳಿಗೆ ಸದ್ಯದ್ರಲ್ಲೇ ಬೀಳುತ್ತೆ ಬೀಗ: ಆ.14ರೊಳಗೆ ಮುಚ್ಚುವಂತೆ ಖಡಕ್ ಆದೇಶ !

Published : Aug 11, 2023, 12:00 PM IST

ರಾಜ್ಯಾದ್ಯಂತ ನಾಯಿಕೊಡೆಗಳಂತೆ ಅನಧಿಕೃತ ಶಾಲೆಗಳು ತಲೆಎತ್ತುತ್ತಿವೆ. ಹೀಗಾಗಿ ಮಕ್ಕಳ ಭವಿಷ್ಯದ ದೃಷ್ಠಿಯಿಂದ ಶಿಕ್ಷಣ ಇಲಾಖೆ ಎಚ್ಚೆತ್ತಿದೆ. ಅನಧಿಕೃತ ಶಾಲೆಗೆಳಿಗೆ ಆಗಸ್ಟ್ 14ರೊಳಗೆ ಬೀಗ ಜಡಿಯುವಂತೆ ಸೂಚನೆ ನೀಡಲಾಗಿದೆ. 
 

ಬೆಂಗಳೂರು ಸೇರಿದಂತೆ ರಾಜ್ಯದ ಅನಧಿಕೃತ ಖಾಸಗಿ ಶಾಲೆಗಳ ಮೇಲೆ ಕೊನೆಗೂ ಸರ್ಕಾರ ಚಾಟಿ ಬೀಸಿದೆ. ಹಿಂದಿನ ಸರ್ಕಾರ ಅನಧಿಕೃತ ಶಾಲೆಗಳನ್ನ(private schools) ಪಟ್ಟಿ ಮಾಡಿ ಕ್ರಮ ಕೈಗೊಳ್ಳಲು ಶಿಫಾರಸು ಮಾಡಿತ್ತು. ಆದ್ರೆ ಕಾಂಗ್ರೆಸ್ ಸರ್ಕಾರ(Congress government) ಬರುತ್ತಿದ್ದಂತೆ ಅನಧಿಕೃತ ಶಾಲೆಗಳು ಮತ್ತೆ ಮುನ್ನಲೆಗೆ ಬಂದಿದೆ‌. ಇದೀಗ ಅನಧಿಕೃತ ಶಾಲೆಗಳಿಗೆ ಆಗಸ್ಟ್ 14ರ ಒಳಗೆ ಬೀಗ ಜಡಿಯುವಂತೆ ಶಿಕ್ಷಣ ಇಲಾಖೆ(Education Department) ಬಿಇಒ ಹಾಗೂ ಡಿಡಿಪಿಐಗಳಿಗೆ ಸೂಚನೆ ಕೊಟ್ಟಿದೆ. ಅನಧಿಕೃತವಾಗಿ ಸಿಬಿಎಸ್‌ಸಿ ಪಠ್ಯ ಬೋಧನೆ, ಅನಧಿಕೃತ ತರಗತಿ, ನೋಂದಣಿ ಪಡೆಯದ ಶಾಲೆಗಳನ್ನ ಮುಚ್ಚಿಸುವಂತೆ ಸೂಚನೆ ಕೊಡಲಾಗಿದೆ. ಕಳೆದ ಎರಡು ತಿಂಗಳ ಹಿಂದೆಯೇ 1,300 ಶಾಲೆಗಳಿಗೆ ಸಂಬಂಧ ಪಟ್ಟ ದಾಖಲೆಗಳನ್ನ ನೀಡುವಂತೆ ನೋಟಿಸ್(Notice) ನೀಡಲಾಗಿತ್ತು. ಸರ್ಕಾರ ಕೊಟ್ಟ ಗಡುವಿನ ಮಧ್ಯೆ ದಾಖಲೆಗಳು ಒದಗಿಸದ ಹಿನ್ನೆಲೆಯಲ್ಲಿ ಈ ಶಾಲೆಗಳಿಗೆ ಬೀಗ ಜಡಿಯಲು ಸಿದ್ಥತೆ ನಡೆದಿದೆ. ಅನಧಿಕೃತ ಖಾಸಗಿ ಶಾಲೆಗಳ ವಿರುದ್ಧ ಕ್ರಮಕ್ಕೆ ಮುಂದಾದ ಬೆನ್ನಲ್ಲೇ ಇಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಖಾಸಗಿ ಶಾಲೆಗಳ ಒಕ್ಕೂಟಗಳೊಂದಿಗೆ ಸಭೆ ನಡೆಸಲಿದ್ದಾರೆ. ರುಪ್ಸಾ, ಕ್ಯಾಮ್ಸ್, ಕುಸುಮ ಸೇರಿದಂತೆ ಖಾಸಗಿ ಶಾಲೆ ಮುಖಂಡರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಶಾಲಾ ನೋಂದಣಿ ನವೀಕರಣ, ಪಠ್ಯ ಪುಸ್ತಕ ಕೊರತೆ, ಆರ್.ಟಿ.ಇ.ಮರು ಜಾರಿ ಕುರಿತಂತೆ ಹಲವು ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಇದನ್ನೂ ವೀಕ್ಷಿಸಿ:  ಕರುನಾಡಲ್ಲಿ ಜೋರಾಗಿದೆ ಮದ್ರಾಸ್ ಐ ಆರ್ಭಟ: ರಾಜ್ಯದಲ್ಲಿ 40 ಸಾವಿರಕ್ಕೂ ಹೆಚ್ಚು ಕೇಸ್ ದಾಖಲು

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more