ಕೇಂದ್ರದ ಜಾರಿ ನಿರ್ದೇಶನಾಲಯ ಮತ್ತು ರಾಜ್ಯ ಸರ್ಕಾರದ ನಡುವೆ ಶುರುವಾಯ್ತು ಹೊಸ ಸಂಘರ್ಷ!

ಕೇಂದ್ರದ ಜಾರಿ ನಿರ್ದೇಶನಾಲಯ ಮತ್ತು ರಾಜ್ಯ ಸರ್ಕಾರದ ನಡುವೆ ಶುರುವಾಯ್ತು ಹೊಸ ಸಂಘರ್ಷ!

Published : Jul 24, 2024, 06:32 PM IST

ಕೇಂದ್ರ ಸರ್ಕಾರದ ತನಿಖಾ ಸಂಸ್ಥೆ ಜಾರಿ ನಿರ್ದೇಶನಾಲಯ (ಇ.ಡಿ) ಹಾಗೂ ರಾಜ್ಯ ಸರ್ಕಾರದ ನಡುವೆ ಹೊಸ ಸಂಘರ್ಷ ಶುರುವಾಗಿದೆ.

ಬೆಂಗಳೂರು (ಜು.24): ಕೇಂದ್ರ ತನಿಖಾ ಸಂಸ್ಥೆ Vs ರಾಜ್ಯ ಸರ್ಕಾರದ ಮಧ್ಯೆ ಮಹಾ ಸಂಘರ್ಷ.. ! ವಾಲ್ಮೀಕಿ ನಿಗಮದ ಅಕ್ರಮ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯರನ್ನು ಸಿಲುಕಿಸಲು ಇ.ಡಿ ಪ್ರಯತ್ನಿಸ್ತಾ ಇದ್ಯಾ..? ಜಾರಿ ನಿರ್ದೇಶನಾಲಯದ ಇಬ್ಬರು ಅಧಿಕಾರಿಗಳ ವಿರುದ್ಧವೇ ಪ್ರಕರಣ ದಾಖಲಿಸಿದ ರಾಜ್ಯ ಸರ್ಕಾರದ ಅಧಿಕಾರಿ..! ಎಫ್ಐಆರ್ ಬೆನ್ನಲ್ಲೇ ಅಖಾಡಕ್ಕಿಳಿದ ಕಾಂಗ್ರೆಸ್, ವಿಧಾನಸೌಧದಲ್ಲಿ ಭಾರೀ ಪ್ರತಿಭಟನೆ.. ಮುಖ್ಯಮಂತ್ರಿ ವಿರುದ್ಧ ಷಡ್ಯಂತ್ರ ಅಂತ ಕಾಂಗ್ರೆಸ್ ಆರೋಪಿಸಿದ್ದೇಕೆ..? ಇ.ಡಿ Vs ಸರ್ಕಾರ, ಬಂಗಾಳದ ದೀದಿ ಮಾದರಿಯಲ್ಲೇ ರಾಜ್ಯದಲ್ಲೂ ನಡೆಯುತ್ತಾ ಜಟಾಪಟಿ..? ಇದೇ ಇವತ್ತಿನ ಸುವರ್ಣ ಸ್ಪೆಷಲ್..

ಇಬ್ಬರು ಇ.ಡಿ ಅಧಿಕಾರಿಗಳ ವಿರುದ್ಧ ಬೆಂಗಳೂರಿನ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಹಾಗಾದ್ರೆ ಇ.ಡಿ ಅಧಿಕಾರಿಗಳಾದ ಮನೋಜ್ ಮಿತ್ತಲ್ ಹಾಗೂ ಮುರುಳಿ ಕಣ್ಣನ್ ಅರೆಸ್ಟ್ ಆಗ್ತಾರಾ..? ಇದು ಇ.ಡಿ Vs ಸರ್ಕಾರದ ಸಂಘರ್ಷ.. ಸಿಎಂ ಸಿದ್ದರಾಮಯ್ಯ ವಿರುದ್ಧ ಇ.ಡಿ ಸಂಚು ಅಂತ ಕಾಂಗ್ರೆಸ್ ಆರೋಪ.. ಇದ್ರ ಬೆನ್ನಲ್ಲೇ ಇ.ಡಿ ಅಧಿಕಾರಿಗಳ ವಿರುದ್ಧವೇ ಎಫ್ಐಆರ್ ದಾಖಲು.. ಹಾಗಾದ್ರೆ ವಾಲ್ಮೀಕಿ ನಿಗಮದ ಅಕ್ರಮದ ತನಿಖೆ ನಡೆಸ್ತಾ ಇರೋ ಇ.ಡಿ ಅಧಿಕಾರಿಗಳಾದ ಮನೋಜ್ ಮಿತ್ತಲ್ ಹಾಗೂ ಮುರುಳಿ ಕಣ್ಣನ್ ಅರೆಸ್ಟ್ ಆಗ್ತಾರಾ..? ಎನ್ನುವುದು ಕುತೂಹಲ ಮೂಡಿಸಿದೆ.

ಇನ್ನು ಎಫ್ಐಆರ್ ಆಗಿದ್ರೂ ಇ.ಡಿ ಅಧಿಕಾರಿಗಳನ್ನು ಪೊಲೀಸ್ರು ಬಂಧಿಸೋ ಹಾಗಿಲ್ಲ, ವಿಚಾರಣೆ ನಡೆಸೋ ಹಾಗೂ ಇಲ್ಲ. ಜೊತೆಗೆ, ಅವ್ರನ್ನು ವಿಚಾರಣೆ ನಡೆಸೋ ಹಾಗೂ ಇಲ್ಲ, ಅರೆಸ್ಟ್ ಮಾಡೋ ಹಾಗೂ ಇಲ್ಲ. ಕಾರಣ, ಪ್ರಕರಣಕ್ಕೆ ಸಿಕ್ಕಿರೋ ಮತ್ತೊಂದು ತಿರುವು. ಕೇಂದ್ರೀಯ ತನಿಖಾ ಸಂಸ್ಥೆ Vs ರಾಜ್ಯ ಸರ್ಕಾರ ಸಂಘರ್ಷ. ಕಾನೂನಿನ ಮೂಲಕ ಇ.ಡಿಗೆ ಟಕ್ಕರ್ ಕೊಡಲು ಹೊರಟಿದ್ದ ರಾಜ್ಯ ಸರ್ಕಾರಕ್ಕೆ ಕಾನೂನು ಅಸ್ತ್ರದ ಮೂಲಕವೇ ಇ.ಡಿ ತಿರುಗೇಟು ಕೊಟ್ಟಿದೆ. ಈ ಸಂಘರ್ಷ ಮುಂದಿನ ದಿನಗಳಲ್ಲಿ ಯಾವ ಹಂತಕ್ಕೆ ಹೋಗಿ ತಲುಪಲಿದೆ ಅನ್ನೋದನ್ನು ಕಾದು ನೋಡೋಣ.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more