ಉನ್ನತ ಶಿಕ್ಷಣ ಇಲಾಖೆಯಲ್ಲಿ ಮತ್ತೆ ಅಂಕಪಟ್ಟಿ ಗೊಂದಲ: ಭೌತಿಕ ಅಂಕಪಟ್ಟಿ ನೀಡಲು ವಿವಿಗಳ ಮೀನಾಮೇಷ..!

ಉನ್ನತ ಶಿಕ್ಷಣ ಇಲಾಖೆಯಲ್ಲಿ ಮತ್ತೆ ಅಂಕಪಟ್ಟಿ ಗೊಂದಲ: ಭೌತಿಕ ಅಂಕಪಟ್ಟಿ ನೀಡಲು ವಿವಿಗಳ ಮೀನಾಮೇಷ..!

Published : Sep 15, 2023, 10:42 AM IST

ಕಾಲೇಜು, ವಿವಿ ವಿದ್ಯಾರ್ಥಿಗಳಿಗೆ ಶಾಕಿಂಗ್ ನ್ಯೂಸ್. ಕಷ್ಟಪಟ್ಟು ಓದಿ ಪಾಸಾದ್ರೂ ಸಿಗಲ್ಲ ಒರಿಜಿನಲ್ ಅಂಕಪಟ್ಟಿ. ರಾಜ್ಯದ 18 ಲಕ್ಷ ವಿದ್ಯಾರ್ಥಿಗಳಿಗೆ ಭೌತಿಕವಾಗಿ ಅಂಕಪಟ್ಟಿ ಕೊಡಲು ರಾಜ್ಯ ವಿವಿಗಳು ಮೀನಾಮೇಷ ಎಣಿಸುತ್ತಿವೆ. ಇದರಿಂದ ವಿದ್ಯಾರ್ಥಿಗಳಿಗೆ ಸಂಕಷ್ಟ ಎದುರಾಗಿದೆ. 
 

ಪದವಿ ಮುಗಿಸಿದ ವಿದ್ಯಾರ್ಥಿಗಳಿಗೆ ಹೊಸ ಸಂಕಷ್ಟ ಶುರುವಾಗಿದೆ. ಪದವಿ ಮುಗಿದ್ರೂ ವಿದ್ಯಾರ್ಥಿಗಳ ಕೈಗೆ ಮಾತ್ರ ಮೂಲ ಅಂಕಪಟ್ಟಿ ಸಿಗುತ್ತಿಲ್ಲ. ಆದ್ರೆ  ರಾಜ್ಯದ 18 ಲಕ್ಷ ವಿದ್ಯಾರ್ಥಿಗಳಿಗೆ ಭೌತಿಕ ಅಂಕಪಟ್ಟಿ ನೀಡಲು ವಿಶ್ವವಿದ್ಯಾಲಯಗಳು ಮೀನಾಮೇಷ ಎಣಿಸುತ್ತಿವೆ. ಉನ್ನತ ವ್ಯಾಸಂಗ, ಸರ್ಕಾರಿ ಉದ್ಯೋಗ, ಸ್ಪರ್ಧಾತ್ಮ ಪರೀಕ್ಷೆಗಳಿಗೆ ಪದವಿ ಅಂಕಪಟ್ಟಿ(Marks Card) ಅತ್ಯವಶಕ್ಯವಾಗಿವೆ. ಪದವಿ ಮೂಲ ಅಂಕಪಟ್ಟಿ ಸಿಗದೇ ವಿದ್ಯಾರ್ಥಿಗಳು (Students) ಸಂಕಷ್ಟದಲ್ಲಿ ಸಿಲುಕಿದ್ದಾರೆ. ಇನ್ನೂ ರಾಜ್ಯದ 945 ಶಿಕ್ಷಣ ಸಂಸ್ಥೆಗಳಲ್ಲಿ 152 ಸಂಸ್ಥೆಗಳು NAD-ಡಿಜಿ ಲಾಕರ್ ಗೆ ನೋಂದಣಿ ಮಾಡಿಸಿಕೊಂಡಿವೆ. ಉಳಿದ 793 ಶಿಕ್ಷಣ ಸಂಸ್ಥೆಗಳು ನೋಂದಣಿಯೇ ಮಾಡಿಸಿಲ್ಲ. ಡಿಜಿ ಲಾಕರ್ಗೆ ನೋಂದಣಿ ಮಾಡಿಸದ ಶಿಕ್ಷಣ ಸಂಸ್ಥೆಗಳಲ್ಲಿ ಓದಿದ ವಿದ್ಯಾರ್ಥಿಗಳ ಅಂಕಪಟ್ಟಿ ಪರಿಶೀಲನೆ ಕಷ್ಟವಾಗುತ್ತಿದೆ. ವಿದೇಶದಲ್ಲಿ ಓದಲು ಇಚ್ಚಿಸುವ ವಿದ್ಯಾರ್ಥಿಗಳಿಗೆ ಇದೀಗ ಅಂಕಪಟ್ಟಿ ಸಂಕಷ್ಟ ಎದುರಾಗಿದೆ. ಅಲ್ಲದೇ ಸಿಇಟಿ, ನೀಟ್ ಪರೀಕ್ಷೆ , ಉದ್ಯೋಗ ಪಡೆಯಲು ಭೌತಿಕ ಅಂಕಪಟ್ಟಿ ಬೇಕೇ ಬೇಕು. ವಿದ್ಯಾರ್ಥಿಗಳ ಸಮಸ್ಯೆ ಮನಗಂಡು ಹೈ ಕೋರ್ಟ್ ಭೌತಿಕ ಅಂಕಪಟ್ಟಿ ಕೊಡುವಂತೆ ವಿಶ್ವವಿದ್ಯಾಲಯಗಳಿಗೆ(Universities) ಖಡಕ್ ಸೂಚನೆ ಕೊಟ್ಟಿದೆ. ಡಿಜಿ ಲಾಕರ್ ಅಂಕಪಟ್ಟಿ ಜೊತೆ ಮೂಲ  ಅಂಕಪಟ್ಟಿ ಕೊಡಲು ವಿಶ್ವವಿದ್ಯಾಲಯಗಳು ನಿರಾಕರಿಸುತ್ತಿವೆ.. ಮೂಲ ಅಂಕಪಟ್ಟಿ ಇದ್ರೆ ಮಾತ್ರ ಕಾಂಪಿಟೇಟಿವ್ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ಅವಕಾಶ ಸಿಗಲಿದೆ. ಇದರಿಂದ ವಿದ್ಯಾರ್ಥಿಗಳು ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ.. ಕೂಡಲೇ ವಿಶ್ವವಿದ್ಯಾಲಯಗಳು ಮೂಲ ಅಂಕಪಟ್ಟಿ ನೀಡುವ ಮೂಲಕ  ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸುತ್ತಾ ಕಾದು ನೋಡಬೇಕಿದೆ.

ಇದನ್ನೂ ವೀಕ್ಷಿಸಿ:  ಹೆಂಡತಿ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ: ಸಾವಿಗೂ ಮುನ್ನ ಸಹೋದರನಿಗೆ ಆಡಿಯೋ ಮೆಸೇಜ್..!

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!