ಉನ್ನತ ಶಿಕ್ಷಣ ಇಲಾಖೆಯಲ್ಲಿ ಮತ್ತೆ ಅಂಕಪಟ್ಟಿ ಗೊಂದಲ: ಭೌತಿಕ ಅಂಕಪಟ್ಟಿ ನೀಡಲು ವಿವಿಗಳ ಮೀನಾಮೇಷ..!

ಉನ್ನತ ಶಿಕ್ಷಣ ಇಲಾಖೆಯಲ್ಲಿ ಮತ್ತೆ ಅಂಕಪಟ್ಟಿ ಗೊಂದಲ: ಭೌತಿಕ ಅಂಕಪಟ್ಟಿ ನೀಡಲು ವಿವಿಗಳ ಮೀನಾಮೇಷ..!

Published : Sep 15, 2023, 10:42 AM IST

ಕಾಲೇಜು, ವಿವಿ ವಿದ್ಯಾರ್ಥಿಗಳಿಗೆ ಶಾಕಿಂಗ್ ನ್ಯೂಸ್. ಕಷ್ಟಪಟ್ಟು ಓದಿ ಪಾಸಾದ್ರೂ ಸಿಗಲ್ಲ ಒರಿಜಿನಲ್ ಅಂಕಪಟ್ಟಿ. ರಾಜ್ಯದ 18 ಲಕ್ಷ ವಿದ್ಯಾರ್ಥಿಗಳಿಗೆ ಭೌತಿಕವಾಗಿ ಅಂಕಪಟ್ಟಿ ಕೊಡಲು ರಾಜ್ಯ ವಿವಿಗಳು ಮೀನಾಮೇಷ ಎಣಿಸುತ್ತಿವೆ. ಇದರಿಂದ ವಿದ್ಯಾರ್ಥಿಗಳಿಗೆ ಸಂಕಷ್ಟ ಎದುರಾಗಿದೆ. 
 

ಪದವಿ ಮುಗಿಸಿದ ವಿದ್ಯಾರ್ಥಿಗಳಿಗೆ ಹೊಸ ಸಂಕಷ್ಟ ಶುರುವಾಗಿದೆ. ಪದವಿ ಮುಗಿದ್ರೂ ವಿದ್ಯಾರ್ಥಿಗಳ ಕೈಗೆ ಮಾತ್ರ ಮೂಲ ಅಂಕಪಟ್ಟಿ ಸಿಗುತ್ತಿಲ್ಲ. ಆದ್ರೆ  ರಾಜ್ಯದ 18 ಲಕ್ಷ ವಿದ್ಯಾರ್ಥಿಗಳಿಗೆ ಭೌತಿಕ ಅಂಕಪಟ್ಟಿ ನೀಡಲು ವಿಶ್ವವಿದ್ಯಾಲಯಗಳು ಮೀನಾಮೇಷ ಎಣಿಸುತ್ತಿವೆ. ಉನ್ನತ ವ್ಯಾಸಂಗ, ಸರ್ಕಾರಿ ಉದ್ಯೋಗ, ಸ್ಪರ್ಧಾತ್ಮ ಪರೀಕ್ಷೆಗಳಿಗೆ ಪದವಿ ಅಂಕಪಟ್ಟಿ(Marks Card) ಅತ್ಯವಶಕ್ಯವಾಗಿವೆ. ಪದವಿ ಮೂಲ ಅಂಕಪಟ್ಟಿ ಸಿಗದೇ ವಿದ್ಯಾರ್ಥಿಗಳು (Students) ಸಂಕಷ್ಟದಲ್ಲಿ ಸಿಲುಕಿದ್ದಾರೆ. ಇನ್ನೂ ರಾಜ್ಯದ 945 ಶಿಕ್ಷಣ ಸಂಸ್ಥೆಗಳಲ್ಲಿ 152 ಸಂಸ್ಥೆಗಳು NAD-ಡಿಜಿ ಲಾಕರ್ ಗೆ ನೋಂದಣಿ ಮಾಡಿಸಿಕೊಂಡಿವೆ. ಉಳಿದ 793 ಶಿಕ್ಷಣ ಸಂಸ್ಥೆಗಳು ನೋಂದಣಿಯೇ ಮಾಡಿಸಿಲ್ಲ. ಡಿಜಿ ಲಾಕರ್ಗೆ ನೋಂದಣಿ ಮಾಡಿಸದ ಶಿಕ್ಷಣ ಸಂಸ್ಥೆಗಳಲ್ಲಿ ಓದಿದ ವಿದ್ಯಾರ್ಥಿಗಳ ಅಂಕಪಟ್ಟಿ ಪರಿಶೀಲನೆ ಕಷ್ಟವಾಗುತ್ತಿದೆ. ವಿದೇಶದಲ್ಲಿ ಓದಲು ಇಚ್ಚಿಸುವ ವಿದ್ಯಾರ್ಥಿಗಳಿಗೆ ಇದೀಗ ಅಂಕಪಟ್ಟಿ ಸಂಕಷ್ಟ ಎದುರಾಗಿದೆ. ಅಲ್ಲದೇ ಸಿಇಟಿ, ನೀಟ್ ಪರೀಕ್ಷೆ , ಉದ್ಯೋಗ ಪಡೆಯಲು ಭೌತಿಕ ಅಂಕಪಟ್ಟಿ ಬೇಕೇ ಬೇಕು. ವಿದ್ಯಾರ್ಥಿಗಳ ಸಮಸ್ಯೆ ಮನಗಂಡು ಹೈ ಕೋರ್ಟ್ ಭೌತಿಕ ಅಂಕಪಟ್ಟಿ ಕೊಡುವಂತೆ ವಿಶ್ವವಿದ್ಯಾಲಯಗಳಿಗೆ(Universities) ಖಡಕ್ ಸೂಚನೆ ಕೊಟ್ಟಿದೆ. ಡಿಜಿ ಲಾಕರ್ ಅಂಕಪಟ್ಟಿ ಜೊತೆ ಮೂಲ  ಅಂಕಪಟ್ಟಿ ಕೊಡಲು ವಿಶ್ವವಿದ್ಯಾಲಯಗಳು ನಿರಾಕರಿಸುತ್ತಿವೆ.. ಮೂಲ ಅಂಕಪಟ್ಟಿ ಇದ್ರೆ ಮಾತ್ರ ಕಾಂಪಿಟೇಟಿವ್ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ಅವಕಾಶ ಸಿಗಲಿದೆ. ಇದರಿಂದ ವಿದ್ಯಾರ್ಥಿಗಳು ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ.. ಕೂಡಲೇ ವಿಶ್ವವಿದ್ಯಾಲಯಗಳು ಮೂಲ ಅಂಕಪಟ್ಟಿ ನೀಡುವ ಮೂಲಕ  ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸುತ್ತಾ ಕಾದು ನೋಡಬೇಕಿದೆ.

ಇದನ್ನೂ ವೀಕ್ಷಿಸಿ:  ಹೆಂಡತಿ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ: ಸಾವಿಗೂ ಮುನ್ನ ಸಹೋದರನಿಗೆ ಆಡಿಯೋ ಮೆಸೇಜ್..!

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!