ಉನ್ನತ ಶಿಕ್ಷಣ ಇಲಾಖೆಯಲ್ಲಿ ಮತ್ತೆ ಅಂಕಪಟ್ಟಿ ಗೊಂದಲ: ಭೌತಿಕ ಅಂಕಪಟ್ಟಿ ನೀಡಲು ವಿವಿಗಳ ಮೀನಾಮೇಷ..!

ಉನ್ನತ ಶಿಕ್ಷಣ ಇಲಾಖೆಯಲ್ಲಿ ಮತ್ತೆ ಅಂಕಪಟ್ಟಿ ಗೊಂದಲ: ಭೌತಿಕ ಅಂಕಪಟ್ಟಿ ನೀಡಲು ವಿವಿಗಳ ಮೀನಾಮೇಷ..!

Published : Sep 15, 2023, 10:42 AM IST

ಕಾಲೇಜು, ವಿವಿ ವಿದ್ಯಾರ್ಥಿಗಳಿಗೆ ಶಾಕಿಂಗ್ ನ್ಯೂಸ್. ಕಷ್ಟಪಟ್ಟು ಓದಿ ಪಾಸಾದ್ರೂ ಸಿಗಲ್ಲ ಒರಿಜಿನಲ್ ಅಂಕಪಟ್ಟಿ. ರಾಜ್ಯದ 18 ಲಕ್ಷ ವಿದ್ಯಾರ್ಥಿಗಳಿಗೆ ಭೌತಿಕವಾಗಿ ಅಂಕಪಟ್ಟಿ ಕೊಡಲು ರಾಜ್ಯ ವಿವಿಗಳು ಮೀನಾಮೇಷ ಎಣಿಸುತ್ತಿವೆ. ಇದರಿಂದ ವಿದ್ಯಾರ್ಥಿಗಳಿಗೆ ಸಂಕಷ್ಟ ಎದುರಾಗಿದೆ. 
 

ಪದವಿ ಮುಗಿಸಿದ ವಿದ್ಯಾರ್ಥಿಗಳಿಗೆ ಹೊಸ ಸಂಕಷ್ಟ ಶುರುವಾಗಿದೆ. ಪದವಿ ಮುಗಿದ್ರೂ ವಿದ್ಯಾರ್ಥಿಗಳ ಕೈಗೆ ಮಾತ್ರ ಮೂಲ ಅಂಕಪಟ್ಟಿ ಸಿಗುತ್ತಿಲ್ಲ. ಆದ್ರೆ  ರಾಜ್ಯದ 18 ಲಕ್ಷ ವಿದ್ಯಾರ್ಥಿಗಳಿಗೆ ಭೌತಿಕ ಅಂಕಪಟ್ಟಿ ನೀಡಲು ವಿಶ್ವವಿದ್ಯಾಲಯಗಳು ಮೀನಾಮೇಷ ಎಣಿಸುತ್ತಿವೆ. ಉನ್ನತ ವ್ಯಾಸಂಗ, ಸರ್ಕಾರಿ ಉದ್ಯೋಗ, ಸ್ಪರ್ಧಾತ್ಮ ಪರೀಕ್ಷೆಗಳಿಗೆ ಪದವಿ ಅಂಕಪಟ್ಟಿ(Marks Card) ಅತ್ಯವಶಕ್ಯವಾಗಿವೆ. ಪದವಿ ಮೂಲ ಅಂಕಪಟ್ಟಿ ಸಿಗದೇ ವಿದ್ಯಾರ್ಥಿಗಳು (Students) ಸಂಕಷ್ಟದಲ್ಲಿ ಸಿಲುಕಿದ್ದಾರೆ. ಇನ್ನೂ ರಾಜ್ಯದ 945 ಶಿಕ್ಷಣ ಸಂಸ್ಥೆಗಳಲ್ಲಿ 152 ಸಂಸ್ಥೆಗಳು NAD-ಡಿಜಿ ಲಾಕರ್ ಗೆ ನೋಂದಣಿ ಮಾಡಿಸಿಕೊಂಡಿವೆ. ಉಳಿದ 793 ಶಿಕ್ಷಣ ಸಂಸ್ಥೆಗಳು ನೋಂದಣಿಯೇ ಮಾಡಿಸಿಲ್ಲ. ಡಿಜಿ ಲಾಕರ್ಗೆ ನೋಂದಣಿ ಮಾಡಿಸದ ಶಿಕ್ಷಣ ಸಂಸ್ಥೆಗಳಲ್ಲಿ ಓದಿದ ವಿದ್ಯಾರ್ಥಿಗಳ ಅಂಕಪಟ್ಟಿ ಪರಿಶೀಲನೆ ಕಷ್ಟವಾಗುತ್ತಿದೆ. ವಿದೇಶದಲ್ಲಿ ಓದಲು ಇಚ್ಚಿಸುವ ವಿದ್ಯಾರ್ಥಿಗಳಿಗೆ ಇದೀಗ ಅಂಕಪಟ್ಟಿ ಸಂಕಷ್ಟ ಎದುರಾಗಿದೆ. ಅಲ್ಲದೇ ಸಿಇಟಿ, ನೀಟ್ ಪರೀಕ್ಷೆ , ಉದ್ಯೋಗ ಪಡೆಯಲು ಭೌತಿಕ ಅಂಕಪಟ್ಟಿ ಬೇಕೇ ಬೇಕು. ವಿದ್ಯಾರ್ಥಿಗಳ ಸಮಸ್ಯೆ ಮನಗಂಡು ಹೈ ಕೋರ್ಟ್ ಭೌತಿಕ ಅಂಕಪಟ್ಟಿ ಕೊಡುವಂತೆ ವಿಶ್ವವಿದ್ಯಾಲಯಗಳಿಗೆ(Universities) ಖಡಕ್ ಸೂಚನೆ ಕೊಟ್ಟಿದೆ. ಡಿಜಿ ಲಾಕರ್ ಅಂಕಪಟ್ಟಿ ಜೊತೆ ಮೂಲ  ಅಂಕಪಟ್ಟಿ ಕೊಡಲು ವಿಶ್ವವಿದ್ಯಾಲಯಗಳು ನಿರಾಕರಿಸುತ್ತಿವೆ.. ಮೂಲ ಅಂಕಪಟ್ಟಿ ಇದ್ರೆ ಮಾತ್ರ ಕಾಂಪಿಟೇಟಿವ್ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ಅವಕಾಶ ಸಿಗಲಿದೆ. ಇದರಿಂದ ವಿದ್ಯಾರ್ಥಿಗಳು ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ.. ಕೂಡಲೇ ವಿಶ್ವವಿದ್ಯಾಲಯಗಳು ಮೂಲ ಅಂಕಪಟ್ಟಿ ನೀಡುವ ಮೂಲಕ  ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸುತ್ತಾ ಕಾದು ನೋಡಬೇಕಿದೆ.

ಇದನ್ನೂ ವೀಕ್ಷಿಸಿ:  ಹೆಂಡತಿ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ: ಸಾವಿಗೂ ಮುನ್ನ ಸಹೋದರನಿಗೆ ಆಡಿಯೋ ಮೆಸೇಜ್..!

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?